Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಿಯೋದಿಂದ ವಾಪಸಾದ ಭಾರತದ ಹಾಕಿ...

ರಿಯೋದಿಂದ ವಾಪಸಾದ ಭಾರತದ ಹಾಕಿ ಆಟಗಾರ್ತಿಯರಿಗೆ ರೈಲ್ವೆ ಅವಮಾನ

ವಾರ್ತಾಭಾರತಿವಾರ್ತಾಭಾರತಿ29 Aug 2016 11:44 PM IST
share
ರಿಯೋದಿಂದ ವಾಪಸಾದ ಭಾರತದ ಹಾಕಿ ಆಟಗಾರ್ತಿಯರಿಗೆ ರೈಲ್ವೆ ಅವಮಾನ

  ಭುವನೇಶ್ವರ್, ಆ.29: ರಾಜ್ಯದ ನಾಲ್ವರು ಆಟಗಾರ್ತಿಯರು ಇತ್ತೀಚೆಗೆ ಕೊನೆಗೊಂಡ ರಿಯೋ ಒಲಿಂಪಿಕ್ಸ್‌ಗೆ ಭಾರತೀಯ ಹಾಕಿ ತಂಡದಲ್ಲಿ ಆಯ್ಕೆಯಾದಾಗ ಒಡಿಶಾದ ಜನತೆ ಸಂಭ್ರಮಪಟ್ಟಿದ್ದರು. ಆದರೆ, ರಾಂಚಿಯಿಂದ ರೂರ್ಕೆಲಾಕ್ಕೆ ವಾಪಸಾಗುತ್ತಿದ್ದ ರೈಲ್ವೆಯಲ್ಲಿ ರಾಜ್ಯದ ನಾಲ್ವರು ಆಟಗಾರ್ತಿಯರಿಗೆ ಕುಳಿತುಕೊಳ್ಳಲು ಆಸನ ನೀಡದೇ ಬೋಗಿಯ ನೆಲದಲ್ಲಿ ಕುಳಿತುಕೊಳ್ಳುವಂತೆ ಮಾಡಿದ ರೈಲ್ವೆ ಅಧಿಕಾರಿಯ ಧೋರಣೆಗೆ ಒಡಿಶಾ ಸೇರಿದಂತೆ ದೇಶದ ಜನತೆಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹಾಕಿ ತಾರೆಯರಾದ ದೀಪಾ ಗ್ರೇಸ್ ಎಕ್ಕಾ, ನಮಿತಾ ಟೊಪ್ಪೊ, ಲಲಿಮಾ ಮಿಂಝ್ ಹಾಗೂ ಸುನೀಲಾ ಲಾಕ್ರಾ ರಾಂಚಿಯಿಂದ ರೂರ್ಕೆಲಾಕ್ಕೆ ತೆರಳುತ್ತಿದ್ದ ಧನಬಾದ್-ಅಲ್ಲೆಪ್ಪಿ ಎಕ್ಸ್‌ಪ್ರೆಸ್ ರೈಲ್ವೆಯನ್ನು ಶನಿವಾರ ಏರಿದ್ದರು. ಆದರೆ, ದೃಢೀಕೃತ ಟಿಕೆಟ್ ಹೊಂದಿಲ್ಲವೆಂಬ ಕಾರಣಕ್ಕೆ ಈ ನಾಲ್ವರು ಆಟಗಾರ್ತಿಯರು ಕೆಲವು ಗಂಟೆಗಳ ಕಾಲ ಬೋಗಿಯ ನೆಲದಲ್ಲಿ ಕುಳಿತು ಪ್ರಯಾಣಿಸುವಂತೆ ಮಾಡಲಾಗಿದೆ.

ರೈಲ್ವೆ ಟಿಕೆಟ್ ತಪಾಸಣೆಗಾರನಿಗೆ(ಟಿಟಿಇ) ತಮ್ಮ ಗುರುತು ಪತ್ರ ತೋರಿಸಿದರೂ ಸುಂದರ್‌ಗಢದ ಈ ನಾಲ್ವರು ಆಟಗಾರ್ತಿಯರಿಗೆ ಆಸನ ಕಲ್ಪಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

‘‘ನಮಗೆ ಸೀಟು ನೀಡುವಂತೆ ಟಿಟಿಇಗೆ ವಿನಂತಿಸಿದೆವು. ಆದರೆ, ಅವರು ನಮ್ಮ ಕೋರಿಕೆಯನ್ನು ನಿರಾಕರಿಸಿದರು. ಒಂದು ಗಂಟೆ ಪ್ರಯಾಣಿಸಿದ ಬಳಿಕ ನಮಗೆ ಸೀಟು ಲಭಿಸಿತು’’ ಎಂದು ಸುನೀತಾ ಹೇಳಿದ್ದಾರೆ.

‘‘ಭಾರತೀಯ ಮಹಿಳಾ ಹಾಕಿ ತಂಡ ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಲು ವಿಫಲವಾದರೂ 36 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಿ ಇತಿಹಾಸ ಬರೆದಿದೆ. ಅವರಿಗೆ ಉತ್ತಮ ಆತಿಥ್ಯ ನೀಡಬೇಕಾದ ಅಗತ್ಯವಿದೆ. ಅದಕ್ಕವರು ಅರ್ಹರಿದ್ದಾರೆ’’ ಎಂದು ಕ್ರೀಡಾಪ್ರೇಮಿ ರಾಮಚಂದ್ರ ಬೆಹ್ರಾ ಹೇಳಿದ್ದಾರೆ.

ವರದಿ ನಿರಾಕರಿಸಿದ ರೈಲ್ವೆ:

 ಹೊಸದಿಲ್ಲಿ, ಆ.29: ರಾಂಚಿಯಿಂದ ರೂರ್ಕೆಲ್‌ಗೆ ಪ್ರಯಾಣಿಸುತ್ತಿದ್ದಾಗ ಭಾರತದ ಹಾಕಿ ಆಟಗಾರ್ತಿಯರು ಬೋಗಿಯ ನೆಲದಲ್ಲಿ ಕುಳಿತು ಪ್ರಯಾಣಿಸಿದ್ದರು ಎಂಬ ವರದಿಯಲ್ಲಿ ಸತ್ಯಾಂಶವಿಲ್ಲ. ಟಿಟಿಇ ಆಟಗಾರ್ತಿಯರನ್ನು ಬೋಗಿಯ ನೆಲದಲ್ಲಿ ಕುಳಿತುಕೊಳ್ಳುವಂತೆ ಹೇಳಿದ್ದಾರೆ ಎಂಬ ವರದಿಯೂ ಸುಳ್ಳು. ಆಟಗಾರ್ತಿಯರು ದೃಢೀಕೃತ ಟಿಕೆಟ್ ಹೊಂದಿಲ್ಲದ ಕಾರಣ ಟಿಟಿಸಿ ಕೇವಲ 20 ನಿಮಿಷಗಳಲ್ಲಿ ಆಸನದ ವ್ಯವಸ್ಥೆ ಮಾಡಿಕೊಟ್ಟಿದ್ದರು ಎಂದು ರೈಲ್ವೇಸ್ ಪ್ರಕಟಣೆಯೊಂದರಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X