Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿವೇಶ ರಹಿತರಿಗೆ ಜಾಗ ನೀಡುವ ವಿವಾದ...

ನಿವೇಶ ರಹಿತರಿಗೆ ಜಾಗ ನೀಡುವ ವಿವಾದ ತಾರಕಕ್ಕೆ

ಗ್ರಾಮ ಸಭೆೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ30 Aug 2016 10:10 PM IST
share
ನಿವೇಶ ರಹಿತರಿಗೆ ಜಾಗ ನೀಡುವ ವಿವಾದ ತಾರಕಕ್ಕೆ

ಕಡೂರು, ಆ.30: ತಂಗಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸೇಂದಿ ವನವನ್ನು ನಿವೇಶನ ರಹಿತರಿಗೆ ನೀಡುವ ವಿಚಾರವಾಗಿ ಪರ-ವಿರೋಧದ ವಾಗ್ವಾದದಿಂದ ಗ್ರಾಮ ಸಭೆಯನ್ನು ಅಧ್ಯಕ್ಷ ಟಿ.ಟಿ. ಶ್ರೀನಿವಾಸ್ ಮುಂದೂಡಿದ ಘಟನೆ ಮಂಗಳವಾರ ನಡೆಯಿತು.

ತಾಲೂಕಿನ ತಂಗಲಿ ಗ್ರಾಪಂ ಗ್ರಾಮ ಸಭೆಯನ್ನು ಗ್ರಾಮದ ಸಮುದಾಯಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಭೆ ಆರಂಭವಾಗುತ್ತಿದ್ದಂತೆ ಸದಸ್ಯ ಗಂಗಾಧರ ನಾಯಕ್ ತಂಗಲಿ ಗ್ರಾಮದಲ್ಲಿರುವ ಸೇಂದಿವನದಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಬೇಕು, ಇದಕ್ಕಾಗಿ ನಿವೇಶನ ರಹಿತರಿಂದ ಅರ್ಜಿ ಪಡೆಯುವಂತೆ ಸಭೆಯಲ್ಲಿ ತಿಳಿಸಿದರು.

ಈ ವಿಷಯ ಮಂಡಿಸುತ್ತಿದ್ದಂತೆ ಸಭೆಯಲ್ಲಿ ಹಾಜರಿದ್ದ ಗ್ರಾಮಸ್ಥರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥ ಗಣೇಶ್, ಸರ್ವೇ ನಂಬರ್ 245 ರಲ್ಲಿ 7 ಎಕರೆ 34 ಗುಂಟೆ ಸೇಂದಿವನದ ಜಾಗವಿದೆ, ಈ ಜಾಗವನ್ನು ರಾಜಕೀಯ ಲಾಭಕ್ಕಾಗಿ ಕೆಲವರಿಗೆ ನೀಡದಂತೆ ಆಗ್ರಹಿಸಿದರು.

ಈ ಸ್ಥಳದಲ್ಲಿ ಗ್ರಾಮದ ಪ್ರತಿಯೊಬ್ಬರಿಗೂ ಅನುಕೂಲವಾಗುವಂತೆ ಗೋಮಾಳಕ್ಕೆ ಜಾಗ ಮೀಸಲಿರಿಸಿ ಉಳಿದ ಜಾಗವನ್ನು ಗ್ರಾಮದ ಎಲ್ಲ ಸಮುದಾಯಗಳ ವಸತಿ ರಹಿತರನ್ನು ಗುರುತಿಸಿ ಸರಕಾರದ ಆದೇಶ ಬಂದರೆ ನೀಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಗ್ವಾದ ನಡೆದುದರಿಂದ ಅಧ್ಯಕ್ಷ ಟಿ.ಟಿ. ಶ್ರೀನಿವಾಸ್ ವಿವಾದದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡುವುದಾಗಿ ತಿಳಿಸಿ ಸಭೆಯನ್ನು ಮುಂದೂಡಿದರು. ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಈ ವಿಚಾರ ಕಂದಾಯ ಇಲಾಖೆಗೆ ಕಳುಹಿಸಲಾಗುವುದು, ಸರಕಾರದ ಆದೇಶ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ನಂತರ ಸದಸ್ಯ ಗಂಗಾಧರನಾಯ್ಕ ಮಾತನಾಡಿ, ನಿವೇಶನ ರಹಿತರಿಗೆ ನಿವೇಶನ ನೀಡಲು ಪಟ್ಟಿ ತಯಾರಿಸುವ ಉದ್ದೇಶದಿಂದ ಗ್ರಾಮ ಸಭೆಯನ್ನು ಕರೆಯಲಾಗಿತ್ತು, ಈ ಸಭೆಯಲ್ಲಿ ಕೆಲವರು ಗೋಮಾಳಕ್ಕಾಗಿ ಆಗ್ರಹಿಸಿದ್ದಾರೆ, ನಮ್ಮ ಉದ್ದೇಶ ಎಲ್ಲ ಜನಾಂಗದ ಸ್ಥಳೀಯ ನಿವೇಶನ ರಹಿತರಿಗೆ ನಿವೇಶನ ನೀಡುವುದಾಗಿದೆ, ಈ ಪಟ್ಟಿಯನ್ನು ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗುವುದು. ನಿರ್ಧಾರ ಸರಕಾರಕ್ಕೆ ಬಿಟ್ಟದ್ದು ಎಂದರು.

 ಗ್ರಾಪಂ ಅಭಿವೃದ್ಧಿ ಅಧಿಕಾರಿ ಆರ್. ಅರುಂಧತಿಯವರನ್ನು ವಿಚಾರಿಸಿದಾಗ ಪಂಚಾಯತ್ ವ್ಯಾಪ್ತಿಯ ತಂಗಲಿ ಗ್ರಾಮದಲ್ಲಿ 120 ವಸತಿ ರಹಿತರಿದ್ದು ಇವರ ಪಟ್ಟಿ ತಯಾರಿಸಲಾಗಿದೆ, ಇದಕ್ಕೆ ಅನುಮೋದನೆ ಪಡೆಯಲು ಗ್ರಾಮ ಸಭೆಯನ್ನು ಕರೆಯಲಾಗಿತ್ತು, ವಿವಾದದ ಹಿನ್ನೆಲೆೆಯಲ್ಲಿ ಸಭೆಯನ್ನು ಮುಂದೂಡಲಾಗಿದೆ ಎಂದರು.

ತಾಪಂ ಸದಸ್ಯೆ ಸವಿತಾ ಆನಂದ್, ಉಪಾಧ್ಯಕ್ಷೆ ಆರ್. ರಜಿನಿ, ಸದಸ್ಯರಾದ ಧನಪಾಲ್‌ನಾಯ್ಕ, ಪೂರ್ಣಿಮಾಬಾಯಿ, ಲೋಕೇಶ್, ಶಮೀಮ್, ಪವಿತ್ರಾ, ಹನುಮಂತರಾಜ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X