Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟೋಕನ್ ಪದ್ಧತಿ ಹಿಂಪಡೆಯಲು ಆಗ್ರಹ

ಟೋಕನ್ ಪದ್ಧತಿ ಹಿಂಪಡೆಯಲು ಆಗ್ರಹ

ಪಡಿತರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ30 Aug 2016 10:11 PM IST
share

 ಕಾರವಾರ, ಆ.30: ಪಡಿತರ ವಿತರಣೆಯಲ್ಲಿ ರಾಜ್ಯ ಸರಕಾರವು ಜಾರಿಗೆ ತಂದಿರುವ ಟೋಕನ್ ಮತ್ತು ಎಸ್ಸೆಮ್ಮೆಸ್ ಪದ್ಧತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ ಗ್ರಾಮೀಣ ಮತ್ತು ನಗರ ನ್ಯಾಯ ಬೆಲೆ ಅಂಗಡಿಕಾರರ ಒಕ್ಕೂಟವು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

 ಮನವಿ ಸಲ್ಲಿಸಿ ಮಾತನಾಡಿದ ನ್ಯಾಯ ಬೆಲೆ ಅಂಗಡಿಕಾರರ ಒಕ್ಕೂಟದ ಅಧ್ಯಕ್ಷ ಮತ್ತು ಸಿಇಒ ವಿಎಸ್‌ಎಸ್. ಚೆಂಡಿಯಾ, ಸರಕಾರ ಪಡಿತರ ವಿತರಣೆಯಲ್ಲಿ ಆಗುತ್ತಿರುವ ಅಕ್ರಮವನ್ನು ನಿಯಂತ್ರಿಸುತ್ತಿರುವುದು ಶ್ಲಾಘನೀಯ. ಆದರೆ, ಹೊಸದಾಗಿ ಜಾರಿಗೆ ತಂದಿರುವ ಟೋಕನ್ ಮತ್ತು ಎಸ್ಸೆಮ್ಮೆಸ್ ಪದ್ಧತಿಯಿಂದ ರೇಶನ್ ಕಾರ್ಡ್‌ದಾರರು ಹಾಗೂ ನ್ಯಾಯ ಬೆಲೆ ಅಂಗಡಿಕಾರರ ಮಧ್ಯೆ ಸಂಘರ್ಷ ಉಂಟಾಗುತ್ತಿದೆ ಎಂದು ಹೇಳಿದರು.

  ಎಸ್ಸೆಮ್ಮೆಸ್ ಮಾಡುವಾಗ ಕೆಲ ಪ್ರದೇಶಗಳಲ್ಲಿ ಸಿಗ್ನಲ್ (ರೇಂಜ್) ಸರಿಯಾಗಿ ಸಿಗುವುದಿಲ್ಲ. ಪ್ರತಿಯೊಬ್ಬ ಪಡಿತರರಿಂದ ರೇಶನ್ ವಿತರಣೆಯ ಒಪ್ಪಿಗೆ ಸಂದೇಶವನ್ನು ಪಡೆದು ಪಡಿತರ ವಿತರಣೆ ಮಾಡಬೇಕಾಗಿರುವುದರಿಂದ 1ಕಾರ್ಡ್‌ಗೆ ಕನಿಷ್ಠ 30 ರಿಂದ 40 ನಿಮಿಷ ವ್ಯಯವಾಗುತ್ತಿದೆ.

 ಅಲ್ಲದೇ ನಮ್ಮ ಸಹಕಾರಿ ಸಂಘಗಳು ಸಂಭಾವನೆ ಪಡೆಯದೆ ಸೇವೆಯ ದೃಷ್ಟಿಯಲ್ಲಿ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಕಾರ್ಡ್‌ದಾರರೊಂದಿಗೂ ಹಾಗೂ ಸಾರ್ವಜನಿಕರೊಂದಿಗೆ ಯಾವುದೇ ಲೋಪದೋಷವಿಲ್ಲದೆ ಕಳೆದ 35-40 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿವೆ. ಸರಕಾರದ ಈಗಿನ ದಿನಕ್ಕೊಂದು ಬದಲಾಗುತ್ತಿರುವ ಆದೇಶದಿಂದ ಕಾರ್ಯ ನಿರ್ವಹಿಸಲು ಸಂಘದಲ್ಲಿ ಸಿಬ್ಬಂದಿ ಕೊರತೆ ಉಂಟಾಗಿದೆ. ಪಡಿತರ ವಿತರಣೆಗಾಗಿಯೇ ಇಬ್ಬರು ಸಿಬ್ಬಂದಿಯನ್ನು ಸರಕಾರವೇ ನೇಮಕ ಮಾಡಬೇಕು. ಈಗಿನ ರೇಶನ್ ಪದ್ಧತಿಯಿಂದ ಆಗುತ್ತಿರುವ ತಾಂತ್ರಿಕ ತೊಂದರೆ ಹಾಗೂ ಅನಾವಶ್ಯಕ ಸಮಯ ವ್ಯರ್ಥವನ್ನು ಖಂಡಿಸಿ, ಕಾರವಾರ ತಾಲೂಕಿನ ಗ್ರಾಮೀಣ ಮತ್ತು ನಗರ ಪ್ರದೇಶದ ಎಲ್ಲ್ಲ 46 ನ್ಯಾಯಬೆಲೆ ಅಂಗಡಿಕಾರರು ಅಕ್ಟೋಬರ್ ತಿಂಗಳಿನಿಂದ ರೇಶನ್ ಎತ್ತುಗಡೆ ಮಾಡುವುದನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು.

  ಕಳೆದ ಎರಡು ತಿಂಗಳುಗಳ ಹಿಂದೆಯೇ ಈ ವಿಷಯವನ್ನು ಸರಕಾರದ ಗಮನಕ್ಕೆ ತರಲಾಗಿತ್ತು. ಆದರೆ ಈವರೆಗೂ ಸರಕಾರದಿಂದ ಯಾವುದೇ ಉತ್ತರ ಬಂದಿರುವುದಿಲ್ಲ. ಸರಕಾರ ಹೊಸ ಪದ್ಧತಿಯನ್ನು ಹಿಂಪಡೆಯದಿದ್ದಲ್ಲಿ ಮುಂದೆ ಸಂಭವಿಸಬಹುದಾದ ಯಾವುದೇ ತೊಂದರೆ, ತೊಡಕುಗಳಿಗೆ ನ್ಯಾಯಬೆಲೆ ಅಂಗಡಿಕಾರರು ಹೊಣೆಗಾರರಲ್ಲ ಎಂದು ಅವರು ಸ್ಪಷ್ಟಪಡಿಸಿದರು.

 ಸರಕಾರವು ಈ ಎಲ್ಲ ಅಡೆತಡೆಗಳನ್ನು ನಿವಾರಿಸಿ ಹಿಂದಿನ ಪದ್ಧತಿಯನ್ನೇ ಜಾರಿಗೆ ತರಬೇಕು ಎಂದು ಗ್ರಾಮೀಣ ಮತ್ತು ನಗರ ನ್ಯಾಯ ಬೆಲೆ ಅಂಗಡಿಕಾರರ ಒಕ್ಕೂಟವು ಮನವಿಯಲ್ಲಿ ಒತ್ತಾಯಿಸುತ್ತದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X