Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವಜನತೆ ಮೂಲ ಸಂಸ್ಕೃತಿಯನ್ನು...

ಯುವಜನತೆ ಮೂಲ ಸಂಸ್ಕೃತಿಯನ್ನು ಮೆಗೂಡಿಸಿಕೊಳ್ಳಲಿ: ಡಾ.ನಲ್ಲೂರು ಪ್ರಸಾದ್

ಮುಂಗಾರು ಸಂಪದ: ಸಾಹಿತ್ಯ ಲೋಕಕ್ಕೆ ಅನ್ನದಾತರ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ30 Aug 2016 10:23 PM IST
share

ಕುಶಾಲನಗರ, ಆ.30: ಪೂರ್ವಿಕರು ಅವಿದ್ಯಾವಂತರಾದರೂ ಮೂಲ ಸಂಸ್ಕೃತಿ ಪರಂಪರೆಯನ್ನು ಮತ್ತು ಜನಪದ ಕಲೆಯನ್ನು ಉಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದರು ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಡಾ.ನಲ್ಲೂರು ಪ್ರಸಾದ್ ಹೇಳಿದರು.

ಅವರು ಕೊಡಗು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜರಗಿದ ಮುಂಗಾರು ಸಂಪದ ಸಾಹಿತ್ಯ ಲೋಕಕ್ಕೆ ಅನ್ನದಾತರ ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೊಲದಲ್ಲಿ ಉಳುಮೆ ಮಾಡುವಾಗ, ಎತ್ತಿನ ಗಾಡಿಯನ್ನು ಓಡಿಸುವಾಗ, ಬೀಸುವ ಕಲ್ಲಿನಲ್ಲಿ ರಾಗಿಯನ್ನು ಬೀಸುವಾಗ, ಭತ್ತವನ್ನು ಕುಟ್ಟುವಾಗ ಅವರ ಬಾಯಿಗಳಲ್ಲಿ ಜನಪದ ಹಾಡುಗಳು ಲಯಬದ್ಧವಾಗಿ ನಲಿದಾಡುತ್ತಿದ್ದವು. ಅಂತಹ ಗೀತೆಗಳನ್ನು ಕೇಳಲು ಬಹಳ ಸೊಗಸು. ಆದರೆ ಇಂದಿನ ಯುವಕರು ಚಲನಚಿತ್ರ ಗೀತೆಗಳಿಗೆ ಮಾರುಹೋಗಿ ಜನಪದ ಸೊಗಡನ್ನು ಪೋಷಿಸುವವರ ಸಂಖ್ಯೆ ವಿರಳವಾಗಿದೆ. ಇನ್ನಾದರೂ ಇಂದಿನ ವಿದ್ಯಾವಂತ ಯುವ ಪೀಳಿಗೆಯು ಮೂಲ ಸಂಸ್ಕೃತಿ ಆಚಾರ-ವಿಚಾರಗಳನ್ನು ಬೆಳೆಸುವ ಸಲುವಾಗಿ ಜನಪದವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ರಾಜ್ಯದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ. ದೇಶದ ಬೆನ್ನೆಲುಬಾದ ರೈತರಿಗೆ ಜನಪದ ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳು ಬಹಳ ವಿಶೇಷ ಎಂದರು.

ಇಂದು ಕನ್ನಡವನ್ನು ಮಾತನಾಡಿದರೆ ಅಲ್ಪಪ್ರಮಾಣದ ವಿದ್ಯಾವಂತನೆಂದು, ಇಂಗ್ಲಿಷ್‌ನಲ್ಲಿ ಮಾತನಾಡಿದರೆ ಉನ್ನತ ಮಟ್ಟದ ವಿದ್ಯಾವಂತನೆಂದು ತಿಳಿದು, ಅಂತಹವರಿಗೆ ವಿಶೇಷ ಗೌರವ ನೀಡುವುದು ಸರಿಯಲ್ಲ. ಕನ್ನಡ ಮಾಧ್ಯಮದಲ್ಲೇ ಉನ್ನತ ವಿದ್ಯಾಭ್ಯಾಸ ಮಾಡಿದವರಿಗೆ ಸರಕಾರದ ಮಟ್ಟದಲ್ಲಿ ಉನ್ನತ ಹುದ್ದೆಯನ್ನು ನೀಡಬೇಕೆಂದು ತಿಳಿಸಿದರು.

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಮಾತನಾಡಿ, ಅಧುನಿಕ ಭರಾಟೆಯಲ್ಲಿ ನಮ್ಮ ಪುರಾತನ ಗ್ರಾಮೀಣ ಕ್ರೀಡೆ ನಶಿಸಿ ಹೋಗುತ್ತಿದ್ದು, ಕೃಷಿಯ ಸಾಹಿತ್ಯ ಮತ್ತು ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅದನ್ನು ಪ್ರಪಂಚಕ್ಕೆ ಕಾಣಿಕೆಯಾಗಿ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕಾಗಿದುದು ಅನಿವಾರ್ಯವಾಗಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗೆ ಅಳಗುಳಿ ಮಣೆ, ರಂಗೋಲಿ, ಹಗ್ಗಜಗ್ಗಾಟ, ಆನೆಕಲ್ಲು, ಬಳೆಚೂರು ಆಟ. ಪುರುಷರಿಗಾಗಿ ಹಗ್ಗಜಗಾಟ, ಭಾರ ಹೊತ್ತು ಓಡುವುದು. ಮಕ್ಕಳಿಗಾಗಿ ಕುಂಟೆಬಿಲ್ಲೆ, ಆನೆಕಲ್ಲು, ಲಗೋರಿ, ಬುಗುರಿ, ಅಲ್ಲದೆ, ಸಾಂಸ್ಕೃತಿಕ ಕಾರ್ಯಕ್ರಮಗಳಾದ ಉಳುವ ಹಾಡು, ರಾಗಿ ಬೀಸುವ ಹಾಡು, ನಾಟಿಹಾಡು, ರಂಗಗೀತೆ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡಮಿ ಅಧ್ಯಕ್ಷ ಕೊಲ್ಯದ ಗಿರೀಶ್, ಶಿರಂಗಾಲ ಗ್ರಾಪಂ ಅಧ್ಯಕ್ಷ ಎಸ್.ಸಿ ರಘು, ಕೊ.ಜಿ.ಜನಪದ ಪರಿಷತ್ ಅಧ್ಯಕ್ಷ ಅನಂತಶಯನ, ತಾಪಂ ಸದಸ್ಯರಾದ ಜಯಣ್ಣ, ಕುಶಾಲನಗರ ಘಟಕದ ಕಸಾಪ ಅಧ್ಯಕ್ಷ ಎಂ.ಡಿ. ರಂಗಸ್ವಾಮಿ, ತೊರೆನೂರು ಗ್ರಾಪಂ ಅಧ್ಯಕ್ಷ ದೇವರಾಜ್, ಶಿರಂಗಾಲ ಸ.ಪ.ಪೂ ಪ್ರಾಂಶುಪಾಲ ಎಂ.ಆರ್. ಸುರೇಶ್‌ಕುಮಾರ್, ವೀರಾಜಪೇಟೆ ಕಸಾಪ ಅಧ್ಯಕ್ಷ ಮಧೋಷ್ ಪೂವಯ್ಯ, ಸೋಮವಾರಪೇಟೆ ತಾ.ಜಾನಪದ ಪರಿಷತ್ ಅಧ್ಯಕ್ಷ ಚಂದ್ರಮೋಹನ್, ಮಲ್ಲೇಸ್ವಾಮಿ, ಕುಡೆಕಲ್ ಸಂತೋಷ್, ಎಚ್.ಜೆ. ಜವರಪ್ಪ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X