Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಂತಿಯುತ ಹಬ್ಬ ಆಚರಣೆಗೆ ಡಿಸಿ ಸೂಚನೆ

ಶಾಂತಿಯುತ ಹಬ್ಬ ಆಚರಣೆಗೆ ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 Aug 2016 10:26 PM IST
share
ಶಾಂತಿಯುತ ಹಬ್ಬ ಆಚರಣೆಗೆ ಡಿಸಿ ಸೂಚನೆ

 ಶಿವಮೊಗ್ಗ, ಆ. 30: ಗೌರಿ-ಗಣೇಶೋತ್ಸವ ಹಾಗೂ ಸೆಪ್ಟಂಬರ್ 12 ರಂದು ನಡೆಯಲಿರುವ ಬಕ್ರೀದ್ ಆಚರಣೆಯನ್ನು ಶಾಂತಿ-ಸುವ್ಯವಸ್ಥೆಯಿಂದ ನಡೆಸಲು ಸಮುದಾಯದ ಎಲ್ಲ ಮುಖಂಡರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವಿ.ಪಿ. ಇಕ್ಕೇರಿ ತಿಳಿಸಿದ್ದಾರೆ. ಗಣೇಶೋತ್ಸವ ಹಾಗೂ ಬಕ್ರೀದ್ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಡಿ.ಎ.ಆರ್. ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಿಸಿದ್ದ ಶಾಂತಿ ಸಭೆಸಮಿತಿ ಸಭೆಯಲ್ಲಿ ಮತನಾಡುತ್ತಿದ್ದರು.

ಎಲ್ಲರೂ ಶಾಂತಿ-ಸುವ್ಯವಸ್ಥೆ ಕಾಪಾಡಲು ಗಮನಹರಿಸಬೇಕು. ಹಬ್ಬ ಆಚರಿಸಲಾಗುವ ಸ್ಥಳಗಳಲ್ಲಿ ಸಂಭ್ರಮ ಇರಬೇಕೆ ಹೊರತು ಅಶಾಂತಿ ಇರಬಾರದು. ಎಲ್ಲರೂ ಶಾಂತಿಯುತ ವಾತಾವರಣ ಉಳಿಸಿಕೊಂಡಲ್ಲಿ ಪೊಲೀಸರ ಆವಶ್ಯಕತೆ ಇರಲಾರದು ಎಂದು ಅವರು ಅಭಿಪ್ರಾಯಿಸಿದರು.

 ಬಳಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನ್ಸೆಂಟ್ ಶಾಂತಕುಮಾರ್, ಶಿವಮೊಗ್ಗ ನಗರದಲ್ಲಿ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಯ ಸಂದಭರ್ದಲ್ಲಿ ಪೊಲೀಸ್ ಇಲಾಖೆ ಸಾಕಷ್ಟು ಪೂರ್ವಭಾವಿ ಸಿದ್ಧತೆ ಮಾಡಿಕೊಂಡಿದೆ. ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಗಣಪತಿ ಪ್ರತಿಷ್ಠಾಪನೆ ಮಾಡುವ ಸಂಘಗಳಿಗೆ ಹಲವು ಸಲಹೆ-ಸೂಚನೆ ನೀಡಲಾಗಿದೆ ಎಂದರು.

ಜಿಲ್ಲಾಡಳಿತದ ಸೂಚನೆಯಂತೆ ಗಣಪತಿ ಮೂರ್ತಿಗಳ ವಿಸರ್ಜನೆಯನ್ನು ಬೆಳಗ್ಗೆ 7ರಿಂದ ಕತ್ತಲಾಗುವುದರೊಳಗೆ ಪೂರ್ಣಗೊಳಿಸಬೇಕು. ಮೆರವಣಿಗೆಯಲ್ಲಿ ಡಿ.ಜೆ. ಮ್ಯೂಸಿಕ್ ಬಳಕೆ ಮಾಡುವುದರ ಮೇಲೆ ನಿರ್ಬಂಧ ಹೇರಲಾಗಿದೆ ಎಂದು ತಿಳಿಸಿದರು. ಭದ್ರತೆ: ಜಿಲ್ಲೆಯಲ್ಲಿ ಸುಮಾರು 2,000 ಕ್ಕೂ ಅಧಿಕ ಗಣಪತಿಗಳ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. 2,500ಕ್ಕೂ ಅಧಿಕ ಪೊಲೀಸರನ್ನು ಭದ್ರತಾ ಕಾರ್ಯಕ್ಕೆ ನಿಯೋಜನೆ ಮಾಡಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯಾದ್ಯಂತ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಶಾಂತಿಯುತವಾಗಿ ನಡೆದುಕೊಂಡು ಬರುತ್ತಿದೆ ಎಂದರು. ಈ ಹಿಂದಿನಂತೆ ಪ್ರಮುಖ ಗಣಪತಿಗಳ ಮೆರವಣಿಗೆಯು ನಿರ್ದಿಷ್ಟ ಮಾರ್ಗಗಳಲ್ಲಿಯೇ ಸಂಚರಿಸಲಿದೆ. ಬಂದೋಬಸ್ತ್ ಕಾರ್ಯಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ-ಸಿಬ್ಬಂದಿ ಸಹಕಾರ ಪಡೆಯಲಾಗುವುದು. ಗಣಪತಿ ಪ್ರತಿಷ್ಠಾಪಿಸುವ ಸಂಘ ಸಂಸ್ಥೆಗಳು ಪೊಲೀಸ್ ಇಲಾಖೆಯ ಸಲಹೆ-ಸೂಚನೆಗಳನ್ನು ಪಾಲಿಸಬೇಕು. ಈ ಮೂಲಕ ಶಾಂತಿ-

ಸುವ್ಯವಸ್ಥೆ ಕಾಯ್ದುಕೊಳ್ಳಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ, ಮಹಾನಗರ ಪಾಲಿಕೆ ಮೇಯರ್ ಎಸ್.ಕೆ. ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

ರವಿ ಡಿ. ಚೆನ್ನಣ್ಣನವರ್ ಬಗ್ಗೆ ಮೆಚ್ಚುಗೆ:

ಪ್ರಸ್ತುತ ಮೈಸೂರಿಗೆ ವರ್ಗಾವಣೆಯಾಗಿರುವ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚೆನ್ನಣ್ಣನವರ್ ಈ ಹಿಂದಿನ ವರ್ಷ ಜಿಲ್ಲೆಯಾದ್ಯಂತ ಯಶಸ್ವಿಯಾಗಿ ಗಣೇಶೋತ್ಸವ ಹಬ್ಬ ನಡೆಸಿರುವುದನ್ನು ಸಭೆಯಲ್ಲಿ ಭಾಗವಹಿಸಿದ್ದ ಕೆಲ ನಾಗರಿಕರು ಮೆಲುಕು ಹಾಕಿದರು. ರವಿ ಡಿ. ಚೆನ್ನಣ್ಣನವರ್ ಎಲ್ಲ ನಾಗರಿಕರ ವಿಶ್ವಾಸ ಪಡೆದು, ಅತ್ಯಂತ ಯಶಸ್ವಿಯಾಗಿ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ನಡೆಸಿದ್ದರು. ತಾವು ಕೂಡ ಸಾರ್ವಜನಿಕರ ವಿಶ್ವಾಸ, ಸಹಕಾರದೊಂದಿಗೆ ಕಾರ್ಯನಿರ್ವಹಣೆ ಮಾಡಿ ಎಂದು ಮುಖಂಡರೊಬ್ಬರು ನೂತನ ಎಸ್ಪಿ ಅಭಿನವ್ ಖರೆಗೆ ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X