Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯದ ವಿರುದ್ಧ 1 ರನ್‌ನಿಂದ ಸೋತ...

ಆಸ್ಟ್ರೇಲಿಯದ ವಿರುದ್ಧ 1 ರನ್‌ನಿಂದ ಸೋತ ಭಾರತ ‘ಎ’ ತಂಡ

ಚತುಷ್ಕೋನ ಏಕದಿನ ಸರಣಿ: ಮನೀಷ್ ಪಾಂಡೆ ಶತಕ ವ್ಯರ್ಥ

ವಾರ್ತಾಭಾರತಿವಾರ್ತಾಭಾರತಿ30 Aug 2016 11:38 PM IST
share
ಆಸ್ಟ್ರೇಲಿಯದ ವಿರುದ್ಧ 1 ರನ್‌ನಿಂದ ಸೋತ ಭಾರತ  ‘ಎ’ ತಂಡ

ಮೆಲ್ಬೋರ್ನ್, ಆ.30: ಚತುಷ್ಕೋನ ಏಕದಿನ ಸರಣಿಯಲ್ಲಿ ಕನ್ನಡಿಗ ಮನೀಷ್ ಪಾಂಡೆ ಬಾರಿಸಿದ ಶತಕದ(110ರನ್) ಹೊರತಾಗಿಯೂ ಭಾರತ ‘ಎ’ ತಂಡ ಆಸ್ಟ್ರೇಲಿಯ ‘ಎ’ ತಂಡದ ವಿರುದ್ಧ 1 ರನ್ ಅಂತರದಿಂದ ವೀರೋಚಿತ ಸೋಲುಂಡಿದೆ.

  ಭಾರತ ಈಗಾಗಲೇ ಫೈನಲ್‌ಗೆ ತಲುಪಿರುವ ಕಾರಣ ಈ ಸೋಲಿನಿಂದ ಯಾವುದೇ ಹಿನ್ನಡೆಯಾಗಿಲ್ಲ. ಭಾರತ ವಿರುದ್ಧ ರೋಚಕ ಜಯ ಸಾಧಿಸಿರುವ ಆಸ್ಟ್ರೇಲಿಯ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ಫೈನಲ್‌ಗೆ ಪ್ರವೇಶಿಸಿದೆ.

ಇಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯ ಪ್ಯಾಟರ್‌ಸನ್(115) ಹಾಗೂ ಮ್ಯಾಡಿನ್ಸನ್(118) ದಾಖಲಿಸಿದ ಅವಳಿ ಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 322 ರನ್ ಗಳಿಸಿತು. ಪ್ಯಾಟರ್‌ಸನ್ ಹಾಗೂ ಮ್ಯಾಡಿನ್ಸನ್ 2ನೆ ವಿಕೆಟ್‌ಗೆ 230 ರನ್ ಜೊತೆಯಾಟ ನಡೆಸಿ ಭದ್ರಬುನಾದಿ ಹಾಕಿಕೊಟ್ಟರು.

ಗೆಲ್ಲಲು ಕಠಿಣ ಸವಾಲು ಪಡೆದ ಭಾರತ ‘ಎ’ ತಂಡ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 321 ರನ್ ಗಳಿಸಿ ಒಂದೇ ರನ್ ಅಂತರದಿಂದ ಸೋಲುಂಡಿತು. ಆಸ್ಟ್ರೇಲಿಯದ ಪರ ವೊರ್ರೆಲ್(2-57) ಹಾಗೂ ಬಾಯ್ಸೆ(2-72) ತಲಾ ಎರಡು ವಿಕೆಟ್ ಪಡೆದರು.

322 ರನ್ ಗುರಿ ಪಡೆದಿದ್ದ ಭಾರತ ಒಂದು ಹಂತದಲ್ಲಿ 4 ವಿಕೆಟ್‌ಗೆ 144 ರನ್ ಗಳಿಸಿತ್ತು. ಆಗ 5ನೆ ವಿಕೆಟ್‌ಗೆ 157 ರನ್ ಜೊತೆಯಾಟ ನಡೆಸಿದ ಮನೀಷ್ ಪಾಂಡೆ(110 ರನ್, 91 ಎಸೆತ, 10 ಬೌಂಡರಿ,3 ಸಿಕ್ಸರ್) ಹಾಗೂ ಸಂಜು ಸ್ಯಾಮ್ಸನ್(87 ರನ್, 74 ಎಸೆತ, 6 ಬೌಂಡರಿ, 2 ಸಿಕ್ಸರ್) ತಂಡವನ್ನು ಆಧರಿಸಿದರು.

ತಂಡದ ಮೊತ್ತವನ್ನು 300ರ ಗಡಿ ದಾಟಿಸಿದ ಬೆನ್ನಿಗೇ ಪಾಂಡೆ ಔಟಾದರು. ಭಾರತಕ್ಕೆ ಅಂತಿಮ ಓವರ್‌ನಲ್ಲಿ ಗೆಲುವಿಗೆ 9 ರನ್ ಅಗತ್ಯವಿತ್ತು. ಮೊದಲ 4 ಎಸೆತಗಳಲ್ಲಿ 6 ರನ್ ಗಳಿಸಿದ ಭಾರತಕ್ಕೆ 2 ಎಸೆತಗಳಲ್ಲಿ 3 ರನ್ ಬೇಕಾಗಿದ್ದಾಗ ಸ್ಯಾಮ್ಸನ್ ವಿಕೆಟ್ ಕೈಚೆಲ್ಲಿದರು. ಜಯಂತ್ ಯಾದವ್ ಕೇವಲ 1 ರನ್ ಗಳಿಸಿದರು. ಶಾರ್ದೂಲ್ ಠಾಕೂರ್ ರನ್ ಗಳಿಸಲು ಹೋಗಿ ರನೌಟಾದರು.

ಸಂಕ್ಷಿಪ್ತ ಸ್ಕೋರ್

ಆಸ್ಟ್ರೇಲಿಯ ಎ: 50 ಓವರ್‌ಗಳಲ್ಲಿ 322/6

(ಪ್ಯಾಟರ್ಸನ್ 115, ಮ್ಯಾಡಿನ್ಸನ್ 118, ಠಾಕೂರ್ 2-50)

ಭಾರತ ಎ: 50 ಓವರ್‌ಗಳಲ್ಲಿ 321/8

(ಮನೀಷ್ ಪಾಂಡೆ 110, ಸ್ಯಾಮ್ಸನ್ 87, ಮನ್‌ದೀಪ್ ಸಿಂಗ್ 56, ವೊರ್ರಲ್ 2-57, ಬೊಯ್ಸಾ 2-72)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X