Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮದ್ಯ ಮಾರಾಟ ತಡೆಯದಿದ್ದರೆ ಆತ್ಮಹತ್ಯೆ :...

ಮದ್ಯ ಮಾರಾಟ ತಡೆಯದಿದ್ದರೆ ಆತ್ಮಹತ್ಯೆ : ಗ್ರಾಮಸ್ಥರಿಂದ ಎಚ್ಚರಿಕೆ

ಕ್ರಮ ಕೈಗೊಳ್ಳದ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ31 Aug 2016 10:24 PM IST
share
ಮದ್ಯ ಮಾರಾಟ ತಡೆಯದಿದ್ದರೆ  ಆತ್ಮಹತ್ಯೆ : ಗ್ರಾಮಸ್ಥರಿಂದ ಎಚ್ಚರಿಕೆ

ಕಾರವಾರ, ಆ.31: ಅಂಕೋಲಾ ತಾಲೂಕಿನ ಬೆಳಂಬಾರದಲ್ಲಿ ಅಕ್ರಮ ಮದ್ಯ ಮಾರಾಟಗಾರರ ಸಂಖ್ಯೆ ವಿಪರೀತವಾಗಿದ್ದು, ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳದ ಪಕ್ಷದಲ್ಲಿ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರತಿಭಟಿಸಿದ ಗ್ರಾಮಸ್ಥ ಮಹಿಳೆಯರು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಎಚ್ಚರಿಕೆ ನೀಡಿದ್ದಾರೆ.

ಅಕ್ರಮ ಮದ್ಯದ ವಿರುದ್ಧ ಊರಿನ ಪ್ರಜ್ಞಾವಂತ ಮಹಿಳೆಯರು ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿದರೂ ಮದ್ಯ ಮಾರಾಟ ದಂಧೆಗೆ ಯಾವುದೇ ಕಡಿವಾಣ ಬಿದ್ದಿಲ್ಲ ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ್ದ ದೂರು ನೀಡಿದರೆ ದೂರು ನೀಡಿದವರ ವಿರುದ್ಧವೇ ಕ್ರಮ ಕೈಗೊಳ್ಳಲಾಗುತ್ತಿದೆ.

ಅಬಕಾರಿ ಇಲಾಖೆಯ ಶಾಮೀಲಾತಿಯಲ್ಲಿ ಈ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಇದರಿಂದ ಬಡ ಜನರು ಬೇಸತ್ತಿದ್ದು, ಅನೇಕರು ಕುಡಿತದ ಚಟಕ್ಕೆ ಬಲಿಯಾಗಿದ್ದಾರೆ. ಊರಲ್ಲಿನ ಮಹಿಳೆಯರು ಹಾಗೂ ಮಕ್ಕಳು ಕೂಡ ಚಟ ಅಂಟಿಸಿಕೊಳ್ಳುತ್ತಿದ್ದಾರೆ ವ್ಯಸನಕ್ಕೆ ಹಣ ಹೊಂದದಿದ್ದಾಗ ಕಳ್ಳತನ, ದರೋಡೆಯ ಹಾದಿ ಹಿಡಿಯುವ ಸಾಧ್ಯತೆ ಇದೆ ಎಂದು ಗ್ರಾಮಸ್ಥ ಮಹಿಳೆಯರು ತಮ್ಮ ಅಳಲು ತೋಡಿಕೊಂಡರು.

ಈ ಹಿಂದೆ ಅಬಕಾರಿ, ಪೊಲೀಸ್ ಸೇರಿದಂತೆ ಹಲವು ಇಲಾಖೆಗಳ ಮುಖ್ಯಸ್ಥರಿಗೆ ಅಕ್ರಮ ದಂಧೆಗಳ ಬಗ್ಗೆ ದೂರು ನೀಡಲಾಗಿತ್ತು. ದೂರು ನೀಡಿದ ನಂತರ ಬೆಳಂಬಾರಕ್ಕೆ ಬಂದ ಅಧಿಕಾರಿಗಳು ಸಭೆ ನಡೆಸಿ, ಅಕ್ರಮ ನಡೆಸುವವರ ಪರವಾಗಿ ಮಾತನಾಡಿದ್ದರು. ಮದ್ಯದ ಚಟದಿಂದ ಎಲ್ಲರ ಮನೆಯಲ್ಲಿಯೂ ಬಡತನ ಹೆಚ್ಚಿದ್ದು, ಎಲ್ಲ್ಲ ಮನೆಯ

ಲ್ಲಿಯೂ ಕುಡಿತಕ್ಕೆ ಬಲಿಯಾಗಿದ್ದಾರೆ. ಶಾಲೆಯ ಸುತ್ತಮುತ್ತಲೂ ಎಗ್ಗಿಲ್ಲದೇ ಮದ್ಯ ಮಾರಾಟ ನಡೆಯುತ್ತಿದೆ. ಇದರಿಂದ ಶೈಕ್ಷಣಿಕ ಅಭಿವೃದ್ಧಿಗೂ ತೊಂದರೆ ಉಂಟಾಗುತ್ತಿದೆ. ಹಿಂದೊಮ್ಮೆ ಅಕ್ರಮ ದಂಧೆೆ ನಡೆಸುವವರ ಪಟ್ಟಿ ತಯಾರಿಸಿ ಅಧಿಕಾರಿಗಳಿಗೆ ನೀಡಲಾಗಿತ್ತು. ಹೀಗಿರುವಾಗಲೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಅಕ್ರಮ ನಡೆಸುವವರ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಬೇಕು. ತಯಾರಿಸಿಟ್ಟ ಕಳ್ಳಬಟ್ಟಿ ಸಾರಾಯಿಯನ್ನು ನಾಶಮಾಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಮತ್ತೆ ಇಂತಹ ಕೃತ್ಯ ನಡೆಸದ ಬಗ್ಗೆ ಲಿಖಿತ ಹೇಳಿಕೆ ಪಡೆಯಬೇಕು. ಈ ಭಾಗದಲ್ಲಿ ಸರಕಾರದಿಂದ ಅಧಿಕೃತ ಸಾರಾಯಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಬಾರದು. ಸಂಪೂರ್ಣ ಊರನ್ನು ಸಾರಾಯಿ ಮುಕ್ತ ಗ್ರಾಮವನ್ನಾಗಿಸಲು ಜಿಲ್ಲಾಡಳಿತ ಪ್ರಯತ್ನಿಸಬೇಕು. ಯಾವುದೇ ಕ್ರಮ ಕೈಗೊಳ್ಳದಿದ್ದರೆ ಮುಂದೆ ನಡೆಯುವ ಎಲ್ಲ ಬಗೆಯ ಅನಾಹುತಗಳಿಗೆ ಜಿಲ್ಲಾಡಳಿತವೇ ನೇರ ಹೊಣೆಯಾಗಿದ್ದು, ಇನ್ನು ಮುಂದೆ ಜನರ ಪ್ರತಿಭಟನೆಯ ತೀವ್ರತೆ ಇನ್ನಷ್ಟು ಹೆಚ್ಚಳವಾಗಲಿದೆ ಎಂದು ಎಚ್ಚರಿಸಿದರು. ಗುಲಾಬಿ ಗೌಡ, ಸಾವಿತ್ರಿ ಗೌಡ, ಸಣ್ಣು ಗೌಡ, ಸುಬದ್ರಿ ಗೌಡ, ಭಾಗೀರಥಿ ಗೌಡ, ಶೋಭಾ ಗೌಡ, ಹೊನ್ನಮ್ಮ ಗೌಡ, ಗಂಗೆ ಗೌಡ, ಜಯಂತಿ ಗೌಡ, ನಾಗರತ್ನ್ನಾ ಗೌಡ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X