Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಿನವಹಿ ಮಾರುಕಟ್ಟೆ ನಗರಸಭೆಯ ನೆಲ...

ದಿನವಹಿ ಮಾರುಕಟ್ಟೆ ನಗರಸಭೆಯ ನೆಲ ಅಂತಸ್ತಿನಲ್ಲೇ ಆಗಬೇಕು: ಪುತ್ತೂರು ನಗರ ಕಾಂಗ್ರೆಸ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ31 Aug 2016 11:10 PM IST
share

ಪುತ್ತೂರು, ಆ.31: ದಿನವಹಿ ಮಾರುಕಟ್ಟೆಗಾಗಿಯೇ 2004ರಲ್ಲಿ ಎಡಿಬಿ ಯೋಜನೆಯಲ್ಲಿ ಟೆಂಡರ್ ಕರೆದು ಮಾರುಕಟ್ಟೆ-ಕಚೇರಿ ಸಂಕಿರ್ಣವನ್ನು ನಿರ್ಮಿಸಲಾಗಿರುಮದರಿಂದ ಈಗಿನ ನಗರಸಭಾ ಕಟ್ಟಡದ ನೆಲ ಅಂತಸ್ತಿನಲ್ಲಿಯೇ ದಿನವಹಿ ಮಾರುಕಟ್ಟೆ ಆಗಬೇಕು. ಸಂಬಂಧಪಟ್ಟವರು ಕೂಡಲೇ ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದು ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಪುರಸಭಾ ಮಾಜಿ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ ಆಗ್ರಹಿಸಿದ್ದಾರೆ.

ಪುತ್ತೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾರದ ಸಂತೆ ಸ್ಥಳಾಂತರಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಈಗಿನ ನಗರಸಭೆಯ ನೆಲ ಅಂತಸ್ತನ್ನು ದಿನವಹಿ ಮಾರುಕಟ್ಟೆಗಾಗಿಯೇ ನಿರ್ಮಿಸಲಾಗಿರುವುದರಿಂದ ಅಲ್ಲಿ ದಿನವಹಿ ಮಾರುಕಟ್ಟೆ ಆರಂಭಿಸುವ ಜವಾಬ್ದಾರಿ ನಗರಸಭೆಯದ್ದಾಗಿದೆ. ಆದರೆ ನಗರಸಭಾಡಳಿತ ಈ ವಿಚಾರದಲ್ಲಿ ನುಣುಚಿಕೊಳ್ಳುವಂತಿಲ್ಲ ಎಂದರು.

ಆಡಳಿತ ಕಾಂಗ್ರೆಸಿನದ್ದಾದರೂ ನಗರಸಭೆಯಲ್ಲಿ ಬಿಜೆಪಿಯವರು ಬಹುಮತ ಹೊಂದಿದ್ದಾರೆ. ಹೀಗಿರುವಾಗ ಸಂತೆ ಸ್ಥಳಾಂತರ ವಿಚಾರದಲ್ಲಿ ನಡೆದ ನಗರಸಭೆಯ ವಿಶೇಷ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿ ಸುಮ್ಮನಿರುವ ಬದಲು ಮತಕ್ಕೆ ಹಾಕಿ ನಿರ್ಣಯ ಅಂಗೀಕರಿಸುವ ಅವಕಾಶ ಬಿಜೆಪಿ ಸದಸ್ಯರಿಗೆ ಇತ್ತಲ್ಲವೇ ಎಂದು ಪ್ರಶ್ನಿಸಿದ ಅವರು ದಿನವಹಿ ಮಾರುಕಟ್ಟೆ ವಿಚಾರದಲ್ಲಿ ಯಾರೂ ತಮ್ಮ ಜವಾಬ್ದಾರಿಯನ್ನು ತೋರಿಲ್ಲ ಎಂದು ಅವರು ಆರೋಪಿಸಿದರು.

ವಾರದ ಸಂತೆ ಸ್ಥಳಾಂತರ ಉಪವಿಭಾಗಾಧಿಕಾರಿಗಳ ಆದೇಶವಾಗಿದ್ದರೂ ದಿನವಹಿ ಸಂತೆ ವ್ಯಾಪಾರದ ವಿಚಾರದಲ್ಲಿ ನಿರ್ಣಯ ಕೈಗೊಂಡು ಉಪವಿಭಾಗಾಧಿಕಾರಿಗಳಿಗೆ ಮನವರಿಕೆ ಮಾಡುವುದರಲ್ಲಿ ಕಾನೂನು ಉಲ್ಲಂಘನೆ ಏನಿದೆ ಎಂದು ಪ್ರಶ್ನಿಸಿದ ಅವರು, ದಿನವಹಿ ಮಾರುಕಟ್ಟೆಯನ್ನು ಅದಕ್ಕೆಂದೇ ನಿರ್ಮಿಸಲಾಗಿದ್ದ ಈಗಿನ ನಗರಸಭೆಯ ಕೆಳ ಅಂತಸ್ತಿನಲ್ಲಿ ಮಾಡುವ ಜವಾಬ್ದಾರಿ ನಗರಸಭೆಗೆ ಇರುವುದರಿಂದ ಅದನ್ನು ಮಾಡಲೇಬೇಕು ಎಂದು ಆಗ್ರಹಿಸಿದರು.

ನಗರಸಭೆಯ ಕೆಳ ಅಂತಸ್ತಿನಲ್ಲಿ ದಿನವಹಿ ಮಾರುಕಟ್ಟೆಯನ್ನು ಕೂಡಲೇ ಆರಂಭಿಸಿ ಸಂತೆ ವಿಚಾರದಲ್ಲಿನ ಗೊಂದಲಕ್ಕೆ ತೆರೆ ಎಳೆಯುವಂತೆ ಪುತ್ತೂರು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ ಎಂದರು. ತಾನು ಪುರಸಭಾ ಅಧ್ಯಕ್ಷನಾಗಿದ್ದ ಅವಧಿಯಲ್ಲಿ ಎಡಿಬಿ ಯೋಜನೆಯಡಿ ಟೆಂಡರ್ ಕರೆದು ನಿರ್ಮಿಸಲಾಗಿದ್ದ ಮಾರುಕಟ್ಟೆ ಸಂಕಿರ್ಣದಲ್ಲಿ (ಈಗಿನ ನಗರಸಭೆಯ ನೆಲ ಅಂತಸ್ತು) 24 ದಿನವಹಿ ಅಂಗಡಿಗಳಿಗೆ ಅವಕಾಶ ಇರುವಂತೆ ರಚಿಸಲಾಗಿತ್ತು. ಆದರೆ ಇದೀಗ ವ್ಯಾಪಾರಸ್ಥರ ಸಂಖ್ಯೆ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದ ಅವರು ನಗರಸಭೆಯ ನೆಲ ಅಂತಸ್ತನ್ನು ಪೂರ್ತಿಯಾಗಿ ದಿನವಹಿ ಮಾರುಕಟ್ಟೆಗೆ ಮೀಸಲಿಟ್ಟು, ಕೂಡಲೇ ಮಾರುಕಟ್ಟೆ ಆರಂಭಿಸಬೇಕು ಎಂದು ಆಗ್ರಹಿಸಿದರು. ಸಂಬಂಧಪಟ್ಟವರ ಸ್ಪಂದನೆ ಸಿಗದಿದ್ದಲ್ಲಿ ಕಾಂಗ್ರೆಸ್ ಪಕ್ಷದ ನೆಲೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. 

ಪುತ್ತೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಎ.ಅಬ್ದುರ್ರಹ್ಮಾನ್ ಬಪ್ಪಳಿಗೆ, ಪುರಸಭಾ ಮಾಜಿ ಸದಸ್ಯ ಇಸಾಕ್ ಸಾಲ್ಮರ, ನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡೋಲ್ಪಿ ಎ. ರೇಗೋ, ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನಿಲ್ಮಾ ಗೋನ್ಸಾಲ್ವೀಸ್, ಪುರಸಭಾ ಮಾಜಿ ಅಧ್ಯಕ್ಷ ಗಣೇಶ್ ರಾವ್, ಕಾಂಗ್ರೆಸ್ ಸೇವಾದಳದ ತಾಲೂಕು ಸಂಚಾಲಕ ಜೋಕಿಂ ಡಿಸೋಜ ಚಂದ್ರಶೇಖರ್ ಪಡೀಲು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X