Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಗ್ರಾ.ಪಂ. ಸದಸ್ಯತ್ವ...

ಪುತ್ತೂರು: ಗ್ರಾ.ಪಂ. ಸದಸ್ಯತ್ವ ಅನರ್ಹಗೊಳಿಸಲು ಸಹಾಯಕ ಆಯುಕ್ತರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ1 Sept 2016 6:57 PM IST
share
ಪುತ್ತೂರು: ಗ್ರಾ.ಪಂ. ಸದಸ್ಯತ್ವ ಅನರ್ಹಗೊಳಿಸಲು ಸಹಾಯಕ ಆಯುಕ್ತರಿಗೆ ಮನವಿ

ಪುತ್ತೂರು, ಸೆ.1: ಆರ್ಯಾಪು ಗ್ರಾ.ಪಂ. ಸದಸ್ಯ ರಮೇಶ್ ರೈ ಡಿಂಬ್ರಿ ಅವರು ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದು, ಅವರ ಸದಸ್ಯತನವನ್ನು ಅನರ್ಹಗೊಳಿಸಬೇಕು ಎಂದು ಒತ್ತಾಯಿಸಿ ಪುತ್ತೂರು ತಾಲೂಕಿನ ಆರ್ಯಾಪು ಗ್ರಾ.ಪಂ.ಗೊಳಪಟ್ಟ ಗ್ರಾಮಸ್ಥರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

2016ರ ಜುಲೈ 12ರಂದು ನಡೆದ ಕುರಿಯ 2ನೆ ವಾರ್ಡ್ ಸಭೆಯಲ್ಲಿ ರಮೇಶ್ ರೈ ಡಿಂಬ್ರಿ, ಕುರಿಯ ಗ್ರಾಮದಲ್ಲಿ ಅಂಬೇಡ್ಕರ್ ಭವನಕ್ಕೆ 5 ಸೆಂಟ್ಸ್ ಜಾಗ ಅಳತೆ ಆಗಿ ಕಡತ ತಯಾರಿಸಿರುವುದಾಗಿ ಮತ್ತು ಕುರಿಯ ಗ್ರಾಮದ ಅಜಲಾಡಿ ಕೆರೆಯನ್ನು ಅಭಿವೃದ್ದಿಗೊಳಿಸಿ ಈಜುಕೊಳ ನಿರ್ಮಿಸುವುದಾಗಿ ಗ್ರಾಮ ಪಂಚಾಯತ್ ನಿರ್ಣಯಿಸಿ ಎ.ಸಿಯವರಿಗೆ ಸಲ್ಲಿಸಲಾಗಿದೆ ಎಂದು ಜನರಿಗೆ ತಪ್ಪುಮಾಹಿತಿ ನೀಡಿದ್ದಾರೆ. ಈ ಬಗ್ಗೆ ಅಂದಿನ ವಾರ್ಡ್ ಸಭೆಯಲ್ಲಿ ಮತ್ತು ಬಳಿಕ ಜುಲೈ 10ರಂದು ನಡೆದ ಆರ್ಯಾಪು ಗ್ರಾಮ ಸಭೆಯಲ್ಲಿ ಅದನ್ನು ಗ್ರಾಮಸ್ಥ ಕೂಸಪ್ಪ ಎಂಬವರು ಪ್ರಸ್ತಾಪಿಸಿ ಆಕ್ಷೇಪ ವ್ಯಕ್ತಪಡಿಸಿದ್ದರು.ಬಳಿಕ ರಮೇಶ್ ರೈ ತನ್ನನ್ನು ತಾನು ಸಮರ್ಥಿಸಿಕೊಂಡು ಪತ್ರಿಕೆಯಲ್ಲಿ ಸುಳ್ಳು ಸ್ಪಷ್ಟನೆ ನೀಡಿದ್ದಾರೆ. ಬಳಿಕ ಆ.03ರಂದು ನಡೆದ ಆರ್ಯಾಪು ಗ್ರಾ.ಪಂನ ಸಾಮಾನ್ಯ ಸಭೆಯಲ್ಲೂ ರಮೇಶ್ ರೈ ತನ್ನನ್ನು ತಾನು ಸಮರ್ಥಿಸಿಕೊಂಡಿದ್ದಾರೆ. ಹಾಗಾಗಿ ಅವರ ವಿರುದ್ದ ’ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 23-ಎ ಪ್ರಕಾರ ದುರ್ನಡತೆ ಅಥವಾ ಅಪಕೀರ್ತನಕರ ನಡತೆಗೆ ಸಂಬಂಧಿಸಿ ಅವರನ್ನು ಸದಸ್ಯತನದಿಂದ ತೆಗೆದು ಹಾಕಲು ಕ್ರಮ ಜರಗಿಸಬೇಕೆಂದು’ ಮನವಿ ಮಾಡಲಾಗಿದೆ.

ಮಾಜಿ ಗ್ರಾ.ಪಂ ಸದಸ್ಯ ಯಾಕೂಬ್ ಓಟೆತ್ತಿಮಾರು, ಕೂಸಪ್ಪ ಎಂ., ಬಶೀರ್ ಸಂಪ್ಯ, ಫೈಝಲ್ ಕೆ. ಕುರಿಯ, ಸಂಕಪ್ಪಎಂ. ಓಟೆತ್ತಿಮಾರು, ಶೀನ ಬಳ್ಳಮಜಲು, ಅಬ್ದುಲ್ ಕುಂಞಿ ಕುರಿಯ, ನಾಗೇಶ ಎಂ. ಓಟೆತ್ತಿಮಾರು ಕುರಿಯ, ಸವಾದ್ ಅಜಲಾಡಿ, ಸುಂದರ ಓಟೆತ್ತಿಮಾರು, ಸಿರಾಜ್ ಬಳ್ಳಮಜಲು, ಅಬ್ದುಲ್ ಅಝೀಝ್ ಸಂಪ್ಯ, ಮುಹಮ್ಮದ್ ರಿಯಾಝ್ ಆರ್ಯಾಪು ಮೊದಲಾದವರು ಸಹಿ ಮಾಡಲಾಗಿದ್ದ ಮನವಿ ಅರ್ಜಿಯನ್ನು ಗ್ರಾಮಸ್ಥ, ದಲಿತ ಮುಖಂಡ ಎಂ.ಕೂಸಪ್ಪಅವರ ನೇತೃತ್ವದ ನಿಯೋಗ ಸಹಾಯಕ ಆಯುಕ್ತರಿಗೆ ಸಲ್ಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X