Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾನೂನು ಪರಿಪಾಲನೆಯೇ ನಿಜವಾದ ದೇಶಭಕ್ತಿ:...

ಕಾನೂನು ಪರಿಪಾಲನೆಯೇ ನಿಜವಾದ ದೇಶಭಕ್ತಿ: ಕೃಷ್ಣರಾಜು

ಮಿಲನ-2016 ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 Sept 2016 9:45 PM IST
share
ಕಾನೂನು ಪರಿಪಾಲನೆಯೇ ನಿಜವಾದ ದೇಶಭಕ್ತಿ: ಕೃಷ್ಣರಾಜು

ಚಿಕ್ಕಮಗಳೂರು, ಸೆ.1: ಕಾನೂನಿಗೆ ಗೌರವ ನೀಡಿದರೆ ದೇಶಕ್ಕೆ ಗೌರವ ನೀಡಿದಂತಾಗುವುದು ಎಂದು ವೃತ್ತ ಪೊಲೀಸ್‌ನಿರೀಕ್ಷಕ ಕೃಷ್ಣರಾಜು ಅರಸ್ ಅಭಿಪ್ರಾಯಪಟ್ಟರು.

ಸಹ್ಯಾದ್ರಿ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸಯನ್ಸ್ ನಗರದ ಲಯನ್ಸ್ ಸೇವಾಭವನದಲ್ಲಿ ಆಯೋಜಿಸಿದ್ದ ಮಿಲನ-2016 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನು ಪರಿಪಾಲನೆಯೇ ನಿಜವಾದ ದೇಶಭಕ್ತಿ ಎಂದರು.

  

 ವಿದ್ಯಾರ್ಥಿಗಳು ಹಾಗೂ ಯುವಜನರು ಸಮಾಜದ ಸಾಸ್ಥಕಾಪಾಡಲು ಆಸಕ್ತಿ ವಹಿಸಬೇಕು. ಕಲಿಕೆ ಮೊದಲ ಆದ್ಯತೆಯಾಗಬೇಕು. ಮೊಬೈಲ್, ಮೋಟಾರ್‌ಸೈಕಲ್ ಮುಂತಾದ ಆಕರ್ಷಣೆಗೊಳಗಾಗಿ ವಿದ್ಯಾಭ್ಯಾಸವನ್ನು ಕಡೆಗಣಿಸಬಾರದು. ಸಾಮಾಜಿಕ ತಾಣಗಳನ್ನು ಒಳಿತಿಗೆ ಬಳಕೆ ಮಾಡಿಕೊಳ್ಳಬೇಕು. ಸಮಾಜಘಾತುಕ ಸಂದೇಶಗಳನ್ನು ಹಲವರು ಹರಿಯಬಿಡುತ್ತಿದ್ದು, ಅವುಗಳನ್ನು ರವಾನಿಸುವ ಮಾಡುವ ಅಭ್ಯಾಸ ಒಳ್ಳೆಯದಲ್ಲ. ದೇಶ, ಭಾಷೆ, ಧರ್ಮ ಹಾಗೂ ಸಮಾಜವನ್ನು ಒಡೆಯುವ ಸಂದೇಶಗಳನ್ನು ಮತ್ತೊಬ್ಬರಿಗೆ ರವಾನಿಸುವುದು ಅಪರಾಧವಾಗುತ್ತದೆ. ಬೇಡದ ಸಂದೇಶಗಳನ್ನು ಅಳಿಸುವುದು ಮಾಡುವುದು ಒಳ್ಳೆಯದು ಎಂದರು. ಗಾಂಜಾ, ಅಫೀಮು, ಕೊಕೇನ್, ಅಲ್ಕೋಹಾಲ್, ಎರೈಸರ್-ವೈಟ್ನರ್ ವಾಸನೆ ತೆಗೆದುಕೊಳ್ಳುವ ದುರಭ್ಯಾಸದಿಂದ ದೂರ ಉಳಿಯಬೇಕೆಂದ ಕೃಷ್ಣರಾಜು, ವಾಹನಗಳನ್ನು ಓಡಿಸುವವರು ಕಾನೂನು ಪಾಲಿಸಬೇಕೆಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಸಹನಿರ್ದೇಶಕ ರೇವಣ್ಣ ವಿವಿಧ ಕ್ರೀಡಾ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ, ವೃತ್ತಿಪರಶಿಕ್ಷಣ ಎನಿಸಿಕೊಳ್ಳುವ ಪ್ಯಾರಾಮೆಡಿಕಲ್ ಕೋರ್ಸ್ ಪೂರ್ಣಗೊಳಿಸಿದರೆ ಉದ್ಯೋಗಾವಕಾಶ ಹೆಚ್ಚಾಗಿರುತ್ತದೆ. ಸೇವಾವಧಿಯಲ್ಲಿ ಮಾನವೀಯತೆಯಿಂದ ವರ್ತಿಸಬೇಕೆಂದರು.

  ಕಾಲೇಜು ಪ್ರಾಂಶುಪಾಲ ನಿವೃತ್ತ ಡಿಎಚ್‌ಒ ಡಾ. ಭಾಗ್ಯಲಕ್ಷ್ಮಮ್ಮ ಮಾತನಾಡಿ, ಶ್ರದ್ಧೆಯಿಂದ ಕಲಿತು ಉತ್ತಮ ಅಂಕಪಡೆದರೆ ಮಾತ್ರ ಒಳ್ಳೆಯ ಕೆಲಸ ಸಿಗುತ್ತದೆ. ವೃತ್ತಿಪರ ತರಬೇತಿ ಇದಾಗಿದ್ದು, ಪರಿಣಿತಿ-ಚತುರತೆ-ಚಾಕಚಕ್ಯತೆ ಬೇಕು. ನಿಮ್ಮ ವರದಿಯನ್ನು ಆಧರಿಸಿ ವೈದ್ಯರು ಚಿಕಿತ್ಸೆ ನೀಡುವುದರಿಂದ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕಾಗುತ್ತದೆ ಎಂದರು.

  

ಎಸ್‌ಐಪಿಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಶಿವಕುಮಾರ್, ಹೋಲಿಕ್ರಾಸ್ ಪ್ಯಾರಾಮೆಡಿಕಲ್ ಆಡಳಿತಾಧಿಕಾರಿ ಸಿಸ್ಟರ್‌ಜ್ಯೂಡಿ ಮತ್ತು ಡಾ. ಮುರಳೀಧರ್, ಉಪನ್ಯಾಸಕ ಮಧು ಮಾತನಾಡಿದರು. ವಿದ್ಯಾರ್ಥಿನಿಯರಾದ ಜಯಮಾಲ ಮತ್ತು ಸಲ್ಮಾ, ಸಾರ್ವಜನಿಕರ ಪರವಾಗಿ ವಿವೇಕ್ ಮಾತನಾಡಿ ಎಸ್.ಐ.ಪಿ.ಎಸ್. ಸಾಮಾಜಿಕ ಕಾಳಜಿಯನ್ನು ಪ್ರಶಂಸಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X