ಧಾರ್ಮಿಕ ನಿಂದನೆ: ಕ್ರಮಕ್ಕೆ ಯುವ ಕಾಂಗ್ರೆಸ್ ಆಗ್ರಹ
ಮಂಗಳೂರು, ಸೆ.1: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಶ್ರೀ ಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಬಗ್ಗೆ ನಿಂದಿಸಿದ ಜಬ್ಬಾರ್ ಬಿ.ಸಿ.ರೋಡ್ ಎಂಬಾತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ನಿಯೋಗ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಗಳ ವಿರುದ್ಧ ಅವ ಹೇಳನಕಾರಿ ಹೇಳಿಕೆ ಹಾಕಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿ ಶಾಂತಿ ಕದಡುವ ವ್ಯಕ್ತಿಗಳ ವಿರುದ್ಧ ಜಾತಿ, ಮತ ನೋಡದೆ ನಿರ್ದಾಕ್ಷಿಣ್ಯ ಕ್ರಮ ಜರಗಿಸಬೇಕೆಂದು ನಿಯೋಗ ಒತ್ತಾಯಿಸಿದೆ.
ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಝಲ್ ರಹೀಂ, ಜಿಪಂ ಅಧ್ಯಕ್ಷ ಶಾಹುಲ್ ಹಮೀದ್, ಕಾರ್ಪೊರೇಟರ್ ಪ್ರವೀಣ್ಚಂದ್ರ ಆಳ್ವ, ಮೇರಿಲ್ ರೇಗೊ, ಪ್ರಸಾದ್ ಮಲ್ಲಿ, ಸುಹೈಲ್ ಕಂದಕ್, ಬಿಲಾಲ್ ಮೊಯ್ದಿನ್, ರಮಾನಂದ ಪೂಜಾರಿ, ಅವಿನಾಶ್ ರೈ, ರಕ್ಷಿತ್ ಸಾಲ್ಯಾನ್, ಸುಧಾಕರ ಜೆ., ಶಶಿಕಾಂತ್ ಶೆಟ್ಟಿ ಮೊದಲಾದವರು ನಿಯೋಗದಲ್ಲಿದ್ದರು.