Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಗರಾಭಿವೃದ್ಧಿಯಲ್ಲಿ ಎರಡೇ ವರ್ಷಗಳಲ್ಲಿ...

ನಗರಾಭಿವೃದ್ಧಿಯಲ್ಲಿ ಎರಡೇ ವರ್ಷಗಳಲ್ಲಿ ಅಪಾರ ಸಾಧನೆ: ವೆಂಕಯ್ಯ ನಾಯ್ಡು

ಪ್ರಾದೇಶಿಕ ಪತ್ರಿಕಾ ಸಂಪಾದಕರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ2 Sept 2016 10:57 AM IST
share
ನಗರಾಭಿವೃದ್ಧಿಯಲ್ಲಿ ಎರಡೇ ವರ್ಷಗಳಲ್ಲಿ ಅಪಾರ ಸಾಧನೆ: ವೆಂಕಯ್ಯ ನಾಯ್ಡು

ಚೆನ್ನೈ, ಸೆ.2: ದೇಶದ ನಗರಪ್ರದೇಶಗಳು ಮೂಲ ಸೌಕರ್ಯಗಳ ತೀವ್ರ ಕೊರತೆಯಿಂದ ಬಳಲುತ್ತಿರುವ ಬಗ್ಗೆ ಕೇಂದ್ರ ನಗರಾಭಿವೃದ್ಧಿ ಹಾಗೂ ಬಡತನ ನಿವಾರಣೆ ಸಚಿವ ಎಂ. ವೆಂಕಯ್ಯ ನಾಯ್ಡು ಕಳವಳ ವ್ಯಕ್ತಪಡಿಸಿದ್ದಾರೆ. ನಗರ ಪ್ರದೇಶಗಳ ಅಭಿವೃದ್ಧಿಯ ಕಾರ್ಯಸೂಚಿಯ ಬಗ್ಗೆ ಹಿಂದಿನ ಸರಕಾರಗಳು ಹಲವು ದಶಕಗಳಿಂದ ತೋರಿಸಿದ್ದ ನಿರ್ಲಕ್ಷಕ್ಕೆ ಮೋದಿ ಸರಕಾರ ಅಂತ್ಯ ಹಾಡಿದೆಯೆಂದು ಅವರು ಹೇಳಿದ್ದಾರೆ.

ಚೆನ್ನೈನಲ್ಲಿ ಗುರುವಾರ ಪ್ರಾದೇಶಿಕ ಪತ್ರಿಕಾ ಸಂಪಾದಕರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ‘‘ಮೋದಿ ಸರಕಾರ ಅಧಿಕಾರಕ್ಕೇರಿದ ಸಂದರ್ಭದಲ್ಲಿ ದೇಶದ ಆರ್ಥಿಕತೆ ಹಳಿತಪ್ಪಿತ್ತು ಹಾಗೂ ನಗರ ಪ್ರದೇಶಗಳಲ್ಲಿ ಜನರ ಜೀವನಮಟ್ಟ ಹಾಗೂ ಆರ್ಥಿಕ ಚಟುವಟಿಕೆಗಳು ಕುಸಿದಿದ್ದವು. ಇಂತಹ ಸನ್ನಿವೇಶದಲ್ಲಿ ನಾಗರಿಕರು, ರಾಜ್ಯ ಸರಕಾರಗಳು ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳ ಪಾಲ್ಗೊಳ್ಳುವಿಕೆಯೊಂದಿಗೆ ನಗರಗಳಿಗೆ ಹೊಸ ಸ್ವರೂವನ್ನು ನೀಡುವಂತೆ ಮೋದಿ ತಮಗೆ ಕರೆ ನೀಡಿದ್ದರು’’ ಎಂದು ನಾಯ್ಡು ತಿಳಿಸಿದರು.
    
ಮೋದಿ ಸರಕಾರ ಅಧಿಕಾರಕ್ಕೇರಿದ ಎರಡೇ ವರ್ಷಗಳಲ್ಲಿ ನರ್ಮ್ ಯೋಜನೆಯಡಿ ಹಿಂದಿನ ಸರಕಾರಗಳು ಹತ್ತು ವರ್ಷಗಳಲ್ಲಿ ಸಾಧಿಸಲಾಗದ್ದನ್ನು ಮಾಡಿ ತೋರಿಸಿದೆಯೆಂದು ನಾಯ್ಡು ವಿವರಿಸಿದರು. ನರ್ಮ್ ಯೋಜನೆಯಡಿ ನಗರ ಮೂಲ ಸೌಕರ್ಯಗಳ ಸುಧಾರಣೆಗೆ ಕಳೆದ 10 ವರ್ಷಗಳಲ್ಲಿ ಹಿಂದಿನ ಸರಕಾರಗಳು ಕೇವಲ 33,902 ಕೋಟಿ ರೂ. ನೆರವು ನೀಡಿದ್ದರೆ, ಮೋದಿ ಸರಕಾರವು ಎರಡೇ ವರ್ಷಗಳಲ್ಲಿ 1,13,143 ಕೋಟಿ ರೂ. ನೆರವು ಘೋಷಿಸಿದ್ದು, ಶೇ.333ರಷ್ಟು ಏರಿಕೆ ಮಾಡಿದೆಯೆಂದು ಅವರು ಹೇಳಿದರು. 2004-14ನೇ ಸಾಲಿನಲ್ಲಿ ನಗರಪ್ರದೇಶಗಳ ಬಡವರಿಗೆ 13.70 ಲಕ್ಷ ಮನೆಗಳನ್ನು ನಿರ್ಮಿಸಲಾಗಿದ್ದು, ಕಳೆದ ಒಂದು ವರ್ಷದಲ್ಲಿ 9 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಇದು ಕಳೆದ 10 ವರ್ಷಗಳಲ್ಲಿ ನೀಡಲಾದ ಅನುಮೋದನೆಯ ಶೇ.66ರಷ್ಟು ಅಧಿಕವೆಂದರು.

ನೂತನ ನಗರ ಮಿಶನ್ ಯೋಜನೆಯಡಿ, ಕೇಂದ್ರವು ರಾಜ್ಯಗಳಿಗೆ ಒಟ್ಟು 53,747 ಕೋಟಿ ರೂ. ನೆರವನ್ನು ನೀಡಿದೆ. ನಗರ ಪ್ರದೇಶಗಳ ಸ್ಥಳೀಯಾಡಳಿತ ಸಂಸ್ಥೆಗಳಿಗೆ 2015-16ನೆ ಸಾಲಿನಲ್ಲಿ 87 ಸಾವಿರ ಕೋಟಿ ರೂ. ನೀಡಲಾಗಿದ್ದರೆ, ಅದಕ್ಕಿಂತಲೂ ಹಿಂದಿನ ಐದು ವರ್ಷಗಳಲ್ಲಿ ಅವುಗಳಿಗೆ ದೊರೆತಿರುವ ಒಟ್ಟು ಅನುದಾನದ ಮೊತ್ತವು ಕೇವಲ 23 ಸಾವಿರ ಕೋಟಿ ರೂ.ಗಳೆಂದು ವೆಂಕಯ್ಯ ನಾಯ್ಡು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X