Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿನಿಯರ ಸುರಕ್ಷತೆ-ಗೌರವ...

ವಿದ್ಯಾರ್ಥಿನಿಯರ ಸುರಕ್ಷತೆ-ಗೌರವ ಕಾಪಾಡಲು ಅಗತ್ಯ ಕ್ರಮ: ಸಚಿವ ಬಸವರಾಜ ರಾಯರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ2 Sept 2016 2:03 PM IST
share
ವಿದ್ಯಾರ್ಥಿನಿಯರ ಸುರಕ್ಷತೆ-ಗೌರವ ಕಾಪಾಡಲು ಅಗತ್ಯ ಕ್ರಮ: ಸಚಿವ ಬಸವರಾಜ ರಾಯರೆಡ್ಡಿ

ಮಂಗಳೂರು, ಸೆ.2: ಮಂಗಳೂರು ವಿಶ್ವವಿದ್ಯಾನಿಲಯದ ಬಯೋ ಸಾಯನ್ಸ್ ವಿಭಾಗದ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಕ್ಯಾಮರಾ ರೆಕಾರ್ಡಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ಗೌರವ ಕಾಪಾಡಲು ಸರಕಾರ ಆದ್ಯತೆ ನೆಲೆಯಲ್ಲಿ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಆಶ್ವಾಸನೆ ನೀಡಿದ್ದಾರೆ.

ನಗರದ ರಾಮಕೃಷ್ಣ ಮಠದಲ್ಲಿ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಿದ್ದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದರು.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬಾತ್‌ರೂಂನಲ್ಲಿ ಮೊಬೈಲ್‌ನ ರಹಸ್ಯ ಕ್ಯಾಮರಾ ಮೂಲಕ ಚಿತ್ರೀಕರಣ ಮಾಡಿರುವುದು ಖಂಡನೀಯ. ಯಾರು ಇಟ್ಟಿದ್ದಾರೆ ಎಂಬ ಮುಖ ಚಹರೆ ಇದೆ. ಆದರೆ ಅದು ಸ್ಪಷ್ಟವಾಗಿಲ್ಲ. ಈ ಬಗ್ಗೆ ವಿಶ್ವವಿದ್ಯಾನಿಲಯದಿಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದವರು ಹೇಳಿದರು.

ಇದೊಂದು ಅಪರಾಧ ಪ್ರಕರಣವಾಗಿದ್ದು, ಈ ಬಗ್ಗೆ ತನಿಖೆ ಮಾಡಲು ಸಾರ್ವಜನಿಕ ವಲಯದ ವಿಶ್ವವಿದ್ಯಾನಿಲಯದಲ್ಲಿ ತಜ್ಞರ ಕೊರತೆಯ ಹೊರತಾಗಿಯೂ ಪೊಲೀಸರಿಗೆ ದೂರು ನೀಡುವಲ್ಲಿ ವಿಳಂಬ ಮಾಡಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಳಂಬ ಆಗಿದೆ. ಇಂತಹ ಘಟನೆಗಳ ವಿರುದ್ಧ ತ್ವರಿತಾಗಿ ಕ್ರಮ ಕೈಗೊಳ್ಳಬೇಕು ಎಂದರು.

ಆದರೆ, ಇದು ತುಂಬಾ ಸೂಕ್ಷ್ಮ ವಿಚಾರ. ಎಲ್ಲವನ್ನೂ ಬಹಿರಂಗಪಡಿಸಿ ಮಾಡಲಾಗುವುದಿಲ್ಲ. ಅದಕ್ಕಾಗಿ ಯಾರು ಮಾಡಿದ್ದಾರೆ ಎಂಬ ಬಗ್ಗೆ ಚರ್ಚೆ ಮಾಡಲು ಕಾಲಾವಕಾಶ ತೆಗೆದುಕೊಳ್ಳಲಾಗಿದೆ. ಆರೋಪಿಯ ಮುಖಚಹರೆಯನ್ನು ಪತ್ತೆಹಚ್ಚಲು ಸಾಧ್ಯ ಇದೆ ಎಂಬುದನ್ನು ಕುಲಪತಿಗಳು ನಿನ್ನೆ ನನಗೆ ತಿಳಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇಂತಹ ಘಟನೆಗಳು ಸಮಾಜ ಘಾತುಕ ಮತ್ತು ಕ್ರಿಮಿನಲ್ ಮೈಂಡ್ ಇರುವವರು ಮಾಡುತ್ತಿರುತ್ತಾರೆ. ಇಂತಹ ಘಟನೆಗಳು ಆಗಬಾರದು. ನೈತಿಕತೆ ಈ ನಿಟ್ಟಿನಲ್ಲಿ ಅಗತ್ಯ. ಪೊಲೀಸರು ಈ ಬಗ್ಗೆ ತ್ವರಿತವಾಗಿ ಪತ್ತೆ ಹಚ್ಚಿ ಯಾರು ಈ ದುಷ್ಕೃತ್ಯ ಮಾಡಿದ್ದಾರೆ. ಅವರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸುವ ವಿಶ್ವಾಸ ನನಗಿದೆ ಎಂದು ಹೇಳಿದರು.

ವಿದ್ಯಾಸಂಸ್ಥೆಗಳನ್ನು ಬಳಸದಿರುವ ನೈತಿಕ ಜವಾಬ್ಧಾರಿ ರಾಜಕಾರಣಿಗಳಿಗಿರಬೇಕು

ಮಂಗಳೂರು ವಿಶ್ವವಿದ್ಯಾನಿಲಯದ ಸಭಾಂಗಣವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸುವ ಕಾರ್ಯಕ್ರಮಕ್ಕೆ ನೀಡಿರುವ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ರಾಯರೆಡ್ಡಿ, ರಾಜಕಾರಣಿಗಳಾದವರು ಕೂಡಾ ವಿದ್ಯಾಸಂಸ್ಥೆಗಳನ್ನು ಬಳಸದಿರುವ ನೈತಿಕ ಜವಾಬ್ಧಾರಿ ಹೊಂದಿರಬೇಕು. ರಾಜಕೀಯ ಉದ್ದೇಶದಿಂದ ಈ ಕಾರ್ಯಕ್ರಮ ಮಾಡಿದ್ದರೆ ಅದು ತಪ್ಪು ಎಂದು ಹೇಳಿದರು.

ಬಿಜೆಪಿ ಸಂಸತ್ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಪಕ್ಷದ ಕಾರ್ಯಕ್ರಮ ಎಂದು ಎಲ್ಲೂ ಹೇಳಿರಲಿಲ್ಲ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಭಾಂಗಣ ಕೋರಲಾಗಿದ್ದು, ಉದ್ಘಾಟನೆಗೆ ಗುಜರಾತ್‌ನ ಶಾಸಕರು ಬರಲಿದ್ದಾರೆ ಎಂದು ಸಭಾಂಗಣ ಕೋರಿ ಕುಲಪತಿಗೆ ಬರೆಯಲಾದ ಪತ್ರದಲ್ಲಿ ತಿಳಿಸಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹಿಂದೆಯೂ ನೀಡಲಾಗಿತ್ತು. ಅದಕ್ಕಾಗಿ ನೀಡಲಾಗಿದೆ. ಷರತ್ತು ಹಾಕಿ ನೀಡಲಾಗಿದೆ ಎಂದು ಕುಲಪತಿ ನನಗೆ ತಿಳಿಸಿದ್ದರು. ಕಾರ್ಯಕ್ರಮದ ವೀಡಿಯೊ ರೆಕಾರ್ಡಿಂಗ್ ಮಾಡಲಾಗಿದೆ. ರಾಜಕೀಯ ಭಾಷಣ ಮಾಡಿದ್ದರೆ ಅವರ ಮೇಲೆ ಪ್ರಕರಣ ದಾಖಲಿಸಲಾಗುತ್ತಿತ್ತು. ಅದಾಗ್ಯೂ ಮುಂದೆ ಇಂತಹ ಕಾರ್ಯಕ್ರಮಗಳಿಗೆ ಯಾವುದೇ ಪಕ್ಷಕ್ಕೆ ಅವಕಾಶ ನೀಡದಂತೆ ವಿಶ್ವವಿದ್ಯಾನಿಲಯದ ಕುಲಪತಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದರು.

ವಿವಿಯಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ಎಚ್ಚರಿಕೆ

ವಿದ್ಯಾರ್ಥಿನಿಯರು, ಮಹಿಳೆಯರ ಗೌರವಕ್ಕೆ ಧಕ್ಕೆ ತರುವಂತಹ ಪ್ರಕರಣಗಳು ಎಲ್ಲಿಯೂ ನಡೆಯಬಾರದು. ಮಂಗಳೂರು ವಿಶ್ವವಿದ್ಯಾನಿಲಯದ ಪ್ರಕರಣಕ್ಕೆ ಸಂಬಂಧಿಸಿ ಮುಂದೆ ಇಂತಹ ಪ್ರಕರಣ ನಡೆಯದಂತೆ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ. ಸೂಕ್ತ ಮುಂಜಾಗೃತಾ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆಯೂ ನಿರ್ದೇಶಿಸಲಾಗಿದೆ ಎಂದು ಮೊಬೈಲ್ ಕ್ಯಾಮರಾ ರೆಕಾರ್ಡಿಂಗ್ ವಿಷಯಕ್ಕೆ ಸಂಬಂಧಿಸಿ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X