Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಾರ್ಥ ಭರಿತ ಶಿಕ್ಷಣದಿಂದ ಸಮಾಜ...

ಸ್ವಾರ್ಥ ಭರಿತ ಶಿಕ್ಷಣದಿಂದ ಸಮಾಜ ಸುಧಾರಣೆಯಾಗದು: ಸಚಿವ ರಾಯರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ2 Sept 2016 3:38 PM IST
share
ಸ್ವಾರ್ಥ ಭರಿತ ಶಿಕ್ಷಣದಿಂದ ಸಮಾಜ ಸುಧಾರಣೆಯಾಗದು: ಸಚಿವ ರಾಯರೆಡ್ಡಿ

ಮಂಗಳೂರು, ಸೆ.2: ನಮ್ಮ ಶಿಕ್ಷಣ ವ್ಯವಸ್ಥೆಯು ವೈಯಕ್ತಿಕ ಹಾಗೂ ಕುಟುಂಬದ ಹಿತದೃಷ್ಟಿಗೆ ಮಾತ್ರವೇ ಒತ್ತು ನೀಡುತ್ತಿರುವುದರಿಂದ ಇಂತಹ ಶಿಕ್ಷಣದಿಂದ ಸಮಾಜದ ಸುಧಾರಣೆ ಸಾಧ್ಯವಿಲ್ಲ. ಇಂತಹ ಮನೋಭಾವ ಬದಲಾಗಬೇಕು ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅಭಿಪ್ರಾಯಿಸಿದ್ದಾರೆ.

ಅವರು ಇಂದು ನಗರದ ರಾಮಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಕಾರ್ಯಕ್ರಮದಲ್ಲಿ ಎರಡನೆ ದಿನವಾದ ಇಂದು ‘ಪ್ರಜ್ಞಾ' ಎಂಬ ಕಾಲೇಜು ಉಪನ್ಯಾಸಕರಿಗಾಗಿನ ವಿಚಾರಗೋಷ್ಠಿಗೆ ಚಾಲನೆ ನೀಡಿ ಮಾತನಾಡಿದರು.

ಉದ್ಯೋಗದ ಹಿನ್ನೆಲೆಯಲ್ಲಿಯೇ ಶಿಕ್ಷಣ ಪಡೆಯುವುದು ಸ್ವಾರ್ಥವೇ ಹೊರತು ಇನ್ನೇನು ಅಲ್ಲ. ಇಂದಿನ ಶಿಕ್ಷಣದ ಈ ಮನೋಸ್ಥಿತಿ ಬದಲಾಗಬೇಕು. ನೈತಿಕತೆಯನ್ನು ಮಕ್ಕಳಲ್ಲಿ ತುಂಬುವ ಜತೆಗೆ ವೌಢ್ಯಗಳಿಂದ ದೂರವಿದ್ದು, ಸಮಾಜದ ಹಿತಚಿಂತನೆಗೆ ಆದ್ಯತೆ ನೀಡುವ ವೌಲ್ಯಯುತ ಅಂಶಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಕಾರ್ಯವನ್ನು ಶಿಕ್ಷಕರು ಮಾಡಬೇಕು ಎಂದು ಸಲಹೆ ನೀಡಿದರು.

ವ್ಯಕ್ತಿಯ ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಣ ಮಹತ್ವದ ಅಡಿಪಾಯ. ಗುಣಮಟ್ಟದ ಶಿಕ್ಷಣ, ಮನುಷ್ಯನನ್ನು ಸನ್ನಡತೆಯಿಂದ ಬಾಳಲು ಪ್ರೇರೇಪಿಸುತ್ತದೆ. ಶಿಕ್ಷಣ ಇಲ್ಲದೆ ಹೊಸ ಅವಿಷ್ಕಾರಗಳು ಹುಟ್ಟಲೂ ಸಾಧ್ಯವಿಲ್ಲ. ಮಂಗಳೂರಿನಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಅದರಿಂದಾಗಿಯೇ ಮಂಗಳೂರಿಗರು ಬುದ್ಧಿವಂತರಾಗಿ ಮಾತ್ರವಲ್ಲ, ವಿನಯವಂತರು, ಸಂಸ್ಕಾರವಂತರು ಹಾಗೂ ಸಹನಶೀಲರಾಗಿ ಗುರುತಿಸಿಕೊಂಡಿದ್ದಾರೆ ಎಂದವರು ಮೆಚ್ಚುಗೆ ವ್ಯಕ್ತಪಡಿಸಿದರು.

ದಿಕ್ಸೂಚಿ ಭಾಷಣ ಮಾಡಿದ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಾಂದಜಿ, ಒಳಿತು ಕೆಡುಕುಗಳ ಅರಿವು ಮೂಡಿಸುವ ಶಿಕ್ಷಣ ಇಂದಿನ ಅಗತ್ಯವಾಗಿದೆ ಎಂದರು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ, ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಕೆ.ಭೈರಪ್ಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಸ್ವಾಮಿ ನಿಖಿಲೇಶ್ವರನಂದಜಿ, ಸ್ವಾಮಿ ಬೋಧಮಯನಂದಜಿ ಉಪಸ್ಥಿತರಿದ್ದರು. ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಯಾವ ರಾಜಕಾರಣಿಗಳೂ ಪ್ರಾಮಾಣಿಕರಾಗಿಲ್ಲ!

ಇಂದಿನ ರಾಜಕಾರಣಿಗಳೇ ಸರಿಯಿಲ್ಲ. ಯಾರೂ ಪ್ರಾಮಾಣಿಕರಾಗಿಲ್ಲ. ಹಣ ಮಾಡುವ ಸ್ವಾರ್ಥವೇ ಹೆಚ್ಚಿನವರಲ್ಲಿದೆ. ಅಧಿಕಾರ ವ್ಯಾಮೋಹ. ಇದಕ್ಕಾಗಿಯೇ ರಾಜಕೀಯಕ್ಕೆ ಬರುತ್ತಾರೆಯೇ ಹೊರತು ಸಮಾಜದ ಅಭಿವೃದ್ಧಿಯ ಚಿಂತನೆ ಇಲ್ಲವಾಗಿದೆ. ನಾನೂ ಒಂದು ರೀತಿಯಲ್ಲಿ ಸ್ವಾರ್ಥಿಯೇ ಆಗಿಬಿಟ್ಟಿದ್ದೇನೆ. ಈ ವ್ಯವಸ್ಥೆಯನ್ನು ತಿದ್ದುಪಡಿ ಮಾಡುವ ಕಾರ್ಯ ಆಗಬೇಕು ಎಂದು ಸಚಿವ ಬಸವರಾಜ ರಾಯರೆಡ್ಡಿ ಅಭಿಪ್ರಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X