Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನಿಮ್ಮ ಆರೋಗ್ಯ ನಳನಳಿಸುತ್ತಿರಲು...

ನಿಮ್ಮ ಆರೋಗ್ಯ ನಳನಳಿಸುತ್ತಿರಲು ವಾರಕ್ಕೆಷ್ಟು ದಿನ ರಜೆ ಬೇಕು?

ವಾರ್ತಾಭಾರತಿವಾರ್ತಾಭಾರತಿ2 Sept 2016 11:30 PM IST
share
ನಿಮ್ಮ ಆರೋಗ್ಯ ನಳನಳಿಸುತ್ತಿರಲು ವಾರಕ್ಕೆಷ್ಟು ದಿನ ರಜೆ ಬೇಕು?

 ಒಂದು, ಎರಡರ ಬದಲಾಗಿ ಮೂರು ದಿನ ವಾರಾಂತ್ಯದ ರಜೆ ಲಭಿಸಿದರೆ? ನಿಮ್ಮ ಕುಟುಂಬ ಹಾಗೂ ಸ್ನೇಹಿತರ ಜತೆ ಹಾಯಾಗಿ ಅಡ್ಡಾಡಬಹುದು, ಕೆಲಸದ ಎಲ್ಲ ಒತ್ತಡಗಳಿಂದ ಸಂಪೂರ್ಣ ಮುಕ್ತರಾಗಬಹುದು. ವರ್ಷಕ್ಕೆ ಅಪರೂಪಕ್ಕೊಮ್ಮೆ ಇಂಥ ಅವಕಾಶ ಸಿಗುವ ಬದಲು ಪ್ರತಿವಾರವೂ ಇಂಥ ಸೌಲಭ್ಯ ಸಿಕ್ಕಿದರೆ ಹೇಗಿರಬಹುದು ಯೋಚಿಸಿ. ಇದು ಕೇವಲ ಕಲ್ಪನೆ ಮಾತ್ರವಲ್ಲ; ಇದು ಕೇವಲ ಮನಸ್ಸಿಗೆ ಮುದ ಕೊಡುವ ದೃಷ್ಟಿಯಿಂದ ಮಾತ್ರವಲ್ಲ; ಪರಿಸರದ ಮೇಲಾಗುವ ವ್ಯತಿರಿಕ್ತ ಪರಿಣಾಮ ತಡೆಗೂ ಇದು ಸುಲಭದ ವಿಧಾನ.

ಕೆಲಸದ ಗಂಟೆ ಕಡಿಮೆಯಾದಷ್ಟೂ, ವಿದ್ಯುತ್ ಬಳಕೆ ಕಡಿಮೆಯಾಗುತ್ತದೆ ಎಂದು ಅರ್ಥಶಾಸ್ತ್ರಜ್ಞ ಡೇವಡಿಡ್ ರೋಸ್‌ನಿಕ್ ಹಾಗೂ ಮಾರ್ಕ್ ವೀಸ್‌ಬರ್ಟ್ ವಾದಿಸುತ್ತಾರೆ. ಶೇಕಡ 20ರಷ್ಟು ವಿದ್ಯುತ್ ಬಳಕೆ ಕಡಿಮೆಯಾದರೆ ಸಹಜವಾಗಿಯೇ ವಾತಾವರಣಕ್ಕೆ ಬಿಡುವ ಇಂಗಾಲದ ಅಂಶ ಕಡಿಮೆಯಾಗುತ್ತದೆ.

ಉದಾಹರಣೆಗೆ ಅಮೆರಿಕದ ಉಥಾಹ್ ರಾಜ್ಯದಲ್ಲಿ ಇಂಥ ಪ್ರಯತ್ನ 2007ರಲ್ಲೇ ನಡೆದಿತ್ತು. ಸೋಮವಾರದಿಂದ ಗುರುವಾರ ವರೆಗೆ ಹೆಚ್ಚುವರಿ ಅವಧಿ ಕೆಲಸ ಮಾಡಿ ಶುಕ್ರವಾರ ಸಂಪೂರ್ಣವಾಗಿ ಕೆಲಸ ಸ್ಥಗಿಸುವುದರಿಂದ 1.8 ದಶಲಕ್ಷ ಡಾಲರ್ ವಿದ್ಯುತ್ ವೆಚ್ಚ ಉಳಿತಾಯವಾಗಿತ್ತು. ಅಂತೆಯೇ ಉದ್ಯೋಗಿಗಳು ಕಚೇರಿಗೆ ಹೋಗಿ ಬರುವಾಗ ಉಂಟಾಗುವ ಇಂಧನ ವ್ಯಯವನ್ನೂ ತಡೆಯಬಹುದು. ಈ ಮೂಲಕ ಇಂಗಾಲ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡಲು ಅವಕಾಶವಿದೆ.

ನಾಲ್ಕು ದಿನಗಳ ವಾರಕ್ಕೆ ಇನ್ನೂ ಒಂದು ಸಕಾರಣವಿದೆ. ನೀವು ಸದಾ ಲವಲವಿಕೆಯಿಂದ ಇರಬೇಕಾದರೆ, ಕೆಲಸ ಹಾಗೂ ಜೀವನದ ನಡುವೆ ಸಮತೋಲನ ಸಾಧಿಸಬೇಕಾದರೆ, ಮಾನಸಿಕ ಆರೋಗ್ಯ ಹಾಗೂ ದೈಹಿಕ ಕಲ್ಯಾಣದ ದೃಷ್ಟಿಯಿಂದಲೂ ನಾಲ್ಕು ದಿನಗಳ ವಾರ ಅತ್ಯಂತ ಪ್ರಶಸ್ತ. ಇದರಿಂದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು, ಮಕ್ಕಳು ಹಾಗೂ ಹಿರಿಯರ ಯೋಗಕ್ಷೇಮ ನೋಡಿಕೊಳ್ಳಲು, ಸಮುದಾಯದ ಜತೆಗೆ ಬೆರೆಯಲೂ ಅವಕಾಶವಾಗುತ್ತದೆ. ಸ್ವೀಡನ್‌ನ ಆಯ್ದ ಕಾರ್ಯಾಗಾರಗಳಲ್ಲಿ ಇದರ ಪರಿಣಾಮವನ್ನು ತಿಳಿಯುವ ಅಧ್ಯಯನ ನಡೆಸಲಾಗಿದ್ದು, ಇದು ರೋಗ ಸಾಧ್ಯತೆ ಕಡಿಮೆ ಮಾಡುವ ಜತೆಗೆ ಉತ್ಪಾದಕತೆ ಹೆಚ್ಚಲೂ ಕಾರಣವಾಗಿದೆ ಎಂದು ಅಧ್ಯಯನದಿಂದ ತಿಳಿದುಬಂದಿದೆ.

ಒಟ್ಟಿನಲ್ಲಿ ನಾಲ್ಕು ದಿನಗಳ ವಾರದ ಪರಿಕಲ್ಪನೆ ಆರ್ಥಿಕ, ಸಾಮಾಜಿಕ ಹಾಗೂ ವೈಯಕ್ತಿಕ ನೆಲೆಗಟ್ಟಿನ ದೃಷ್ಟಿಯಿಂದ ನೋಡಿದರೂ ಅನುಸರಿಸಲು ಯೋಗ್ಯವಿಧಾನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X