Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿ.ಸಿ.ರೋಡ್‌ನಲ್ಲಿ ಭಾರತ್ ಬಂದ್ ಭಾಗಶಃ...

ಬಿ.ಸಿ.ರೋಡ್‌ನಲ್ಲಿ ಭಾರತ್ ಬಂದ್ ಭಾಗಶಃ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ2 Sept 2016 7:40 PM IST
share
ಬಿ.ಸಿ.ರೋಡ್‌ನಲ್ಲಿ ಭಾರತ್ ಬಂದ್ ಭಾಗಶಃ ಯಶಸ್ವಿ

ಬಂಟ್ವಾಳ, ಆ. 2: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಾರತ್ ಬಂದ್ ಬಂಟ್ವಾಳ ತಾಲೂಕು ಕೇಂದ್ರವಾದ ಬಿ.ಸಿ.ರೋಡ್‌ನಲ್ಲಿ ಭಾಗಶಃ ಯಶಸ್ವಿಯಾಗಿದೆ.

ಶುಕ್ರವಾರ ಬೆಳಗ್ಗಿನ ಕೆಲ ಹೊತ್ತುಗಳ ಕಾಲ ಕೆಎಸ್ಸಾರ್ಟಿಸಿ ಬಸ್‌ಗಳು ಸಂಚಾರ ನಡೆಸಿದರೆ ಜನಸಂಚಾರ ವಿರಳವಾಗಿದ್ದರಿಂದ ಬಳಿಕ ಸಂಚಾರವನ್ನು ಸ್ಥಗಿತಗೊಳಿಸಿದರೆ ಸಂಜೆ 5 ಗಂಟೆಯ ಬಳಿಕ ಪುನರಾರಂಭಗೊಂಡಿತು. ಮೂಡುಬಿದಿರೆ, ಕಾರ್ಕಳ, ವೇಣೂರು, ಮುಡಿಪು ಕಡೆಯಿಂದ ಬಿಸಿರೋಡ್‌ಗೆ ಆಗಮಿಸುವ ಖಾಸಗಿ, ಸರ್ವಿಸ್ ಬಸ್‌ಗಳು ಸಂಪೂರ್ಣ ಬಂದ್ ಆಗಿತ್ತು. ಪುತ್ತೂರು, ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಸರಕಾರಿ ಬಸ್‌ಗಳು ಸಂಚಾರ ಆರಂಭಿಸಿದವಾದರೂ ಮಂಗಳೂರಿನಲ್ಲಿ ಬಂದ್‌ಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದರಿಂದ ಬಸ್ ಸಂಚಾರಕ್ಕೆ ಪ್ರತಿರೋಧ ಉಂಟಾಗಬಹುದೆಂಬ ಆತಂಕದ ಹಿನ್ನಲೆಯಲ್ಲಿ ಬಸ್‌ಗಳು ಬಿ.ಸಿ.ರೋಡ್‌ವರೆಗೆ ಮಾತ್ರ ಸಂಚಾರ ಬೆಳೆಸಿದವು.

ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿದ್ದರಿಂದ ಶಾಲಾ ವಾಹನಗಳು ಸಂಪೂರ್ಣವಾಗಿ ತಟಸ್ಥವಾಗಿತ್ತು. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಖಾಸಗಿ ವಾಹನಗಳ ಸಂಚಾರ ಹೆಚ್ಚಿನ ಸಂಖ್ಯೆಯಲ್ಲಿರದೆ ವಿರಳವಾಗಿತ್ತು. ಸರಕಾರಿ ಹಾಗೂ ಖಾಸಗಿ ಬಸ್‌ಗಳ ಸಂಚಾರ ಸ್ಥಗಿತದ ಹಿನ್ನೆಲೆಯಲ್ಲಿ ಸದಾ ಜನಜಂಗುಳಿ ಹಾಗೂ ವಾಹನಗಳಿಂದ ಗಿಜಿಗೂಡುತ್ತಿದ್ದ ಬಿ.ಸಿ.ರೋಡು ಬಸ್ ತಂಗುದಾಣ ಬಿಕೋ ಎನಿಸುತ್ತಿತ್ತು. ಬಿ.ಸಿ.ರೋಡಿನಲ್ಲಿರುವ ಸರಕಾರಿ ಕಚೇರಿಗಳು, ಬ್ಯಾಂಕ್‌ಗಳು ಹಾಗೂ ಕೆಲವು ಅಂಗಡಿ ಮುಂಗಟ್ಟುಗಳು ತೆರೆದಿದ್ದರೂ ಜನರಿಲ್ಲದೆ ಕಾರ್ಯಚಟುವಟಿಕೆ ನೀರಸವಾಗಿತ್ತು.

ಉಳಿದಂತೆ ತಾಲೂಕಿನ ಬಂಟ್ವಾಳ ಪೇಟೆ, ಕಲ್ಲಡ್ಕ, ಮೆಲ್ಕಾರ್, ಪಾಣೆಮಂಗಳೂರು, ಫರಂಗಿಪೇಟೆ, ತುಂಬೆ ಮೊದಲಾದ ಕಡೆಗಳಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ತಾಲೂಕಿನ ಗ್ರಾಮೀಣ ಭಾಗವಾದ ವಾಮದಪದವು, ಸರಪಾಡಿ, ಕಕ್ಯಪದವು, ಬಿಯಪಾದೆ, ಕೂರಿಯಾಳ ಸಹಿತ ಮಂಗಳೂರಿನಿಂದ ಧರ್ಮಸ್ಥಳ ಮಧ್ಯೆ ಸಂಚರಿಸುವ ನಿತ್ಯ ಪ್ರಯಾಣಿಕರು ಮುಷ್ಕರದಿಂದ ತೊಂದರೆಗೊಳಗಾದರು. 

ವಿಟ್ಲದಲ್ಲಿ ಯಶಸ್ವಿ ಬಂದ್

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ವಿಟ್ಲದಲ್ಲಿ ಯಶಸ್ವಿಯಾಯಿತು. ಔಷಧಿ, ಹಾಲು ಅಂಗಡಿಗಳನ್ನು ಹೊರತುಪಡಿಸಿ ಉಳಿದ ಅಂಗಡಿ ಮುಂಗಟ್ಟುಗಳು ಬೆಳಗ್ಗಿನಿಂದಲೇ ಬಾಗಿಲು ಮುಚ್ಚಿದ್ದವು. ಕಾರ್ಮಿಕ ವರ್ಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ವಿಟ್ಲದ ವಿವಿಧ ಕಾರ್ಮಿಕ ಸಂಘಟನೆಗಳಾದ ಸಿಐಟಿಯು, ಫೆಡರೇಶನ್ ಆಫ್ ಕರ್ನಾಟಕ ಆಟೊರಿಕ್ಷಾ ಯೂನಿಯನ್, ಬಿಎಸ್ಸೆನ್ನೆಲ್, ಮೆಸ್ಕಾಂ ಕಾರ್ಮಿಕ ಸಂಘಟನೆ, ಎಸ್‌ಎಫ್‌ಐ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾಕಾರರನ್ನುದ್ದೇಶಿಸಿ ಸಿಐಟಿಯು ಮುಖಂಡ ರಾಮಣ್ಣ ವಿಟ್ಲ ಮಾತನಾಡಿದರು.

ವಿಟ್ಲ ಫೆಡರೇಶನ್ ಆಫ್ ಕರ್ನಾಟಕ ಆಟೊರಿಕ್ಷಾ ಯೂನಿಯನ್‌ನ ಅಧ್ಯಕ್ಷ ವಸಂತ, ಶಿವಪ್ಪನಾಯ್ಕ, ಆಟೊರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಇಬ್ರಾಹೀಂ ಬಿ., ದಲಿತ್ ಸೇವಾ ಸಮಿತಿಯ ಚಂದ್ರಶೇಖರ, ಮೋಹನ್‌ದಾಸ, ಬಿಎಸ್ಸೆನ್ನೆಲ್ ಕಾರ್ಮಿಕ ಸಂಘಟನೆಯ ಚಂದ್ರಹಾಸ, ವಿಜಯಕುಮಾರ್, ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷ ತುಳಸೀದಾಸ್ ವಿಟ್ಲ, ಸಲೀಂ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ. ತಾಲೂಕಿನಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ ರವೀಶ್ ಸಿ.ಆರ್., ನಗರ ಠಾಣೆ ಎಸ್ಸೈ ನಂದಕುಮಾರ್, ಗ್ರಾಮಾಂತರ ಠಾಣೆ ಎಸ್ಸೈ ಎ.ಕೆ.ರಕ್ಷಿತ್ ಗೌಡ, ವಿಟ್ಲ ಠಾಣೆ ಎಸ್ಸೈ ಪ್ರಕಾಶ್ ದೇವಾಡಿಗ ಭಸದ್ರತೆಯ ಉಸ್ತುವಾರಿ ವಹಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X