Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾರ್ವಜನಿಕವಾಗಿ ಮುಜುಗರಕ್ಕೆ...

ಸಾರ್ವಜನಿಕವಾಗಿ ಮುಜುಗರಕ್ಕೆ ಕಾರಣವಾಗಿರುವ ಡೊಳ್ಳುಹೊಟ್ಟೆಯ ಸಿಬ್ಬಂದಿ ವಿರುದ್ಧ ಸೇನೆ ಕಠಿಣ ಕ್ರಮ

ವಾರ್ತಾಭಾರತಿವಾರ್ತಾಭಾರತಿ2 Sept 2016 8:09 PM IST
share
ಸಾರ್ವಜನಿಕವಾಗಿ ಮುಜುಗರಕ್ಕೆ ಕಾರಣವಾಗಿರುವ ಡೊಳ್ಳುಹೊಟ್ಟೆಯ ಸಿಬ್ಬಂದಿ ವಿರುದ್ಧ ಸೇನೆ ಕಠಿಣ ಕ್ರಮ

ಹೊಸದಿಲ್ಲಿ,ಸೆ.2: ತನ್ನ ಸಿಬ್ಬಂದಿಗಳನ್ನು ಕಾಡುತ್ತಿರುವ ಬೊಜ್ಜಿನ ಸಮಸ್ಯೆಯ ವಿರುದ್ಧ ಭೂ ಸೇನೆಯೀಗ ಸಮರ ಸಾರಿದೆ. ಇದಕ್ಕಾಗಿ ನೂತನ ನಿರ್ದೇಶನಗಳನ್ನು ಹೊರಡಿಸಿರುವ ಅದು, ತನ್ನ ಧಡೂತಿ ಸಿಬ್ಬಂದಿಗಳು ಸಮವಸ್ತ್ರದಲ್ಲಿ ಅಸಡ್ಡಾಳವಾಗಿ ಕಾಣುವುದರೊಂದಿಗೆ ಸಾರ್ವಜನಿಕವಾಗಿ ಮುಜುಗರವನ್ನುಂಟು ಮಾಡುತ್ತಿದ್ದಾರೆ ಎಂದು ಹೇಳಿದೆ.

ಕೆಲವು ಸೇನಾಧಿಕಾರಿಗಳ ಸೊಂಟದ ಸುತ್ತಳತೆಯ ಬಗ್ಗೆ ಸರಕಾರದ ಉನ್ನತ ಅಧಿಕಾರಿಗಳ ಟೀಕೆಯಿಂದ ಎಚ್ಚೆತ್ತುಕೊಂಡಿರುವ ಸೇನೆಯ ಕೇಂದ್ರಕಚೇರಿಯು, ಹೆಚ್ಚುತ್ತಿರುವ ಬೊಜ್ಜು ಪ್ರವೃತ್ತಿಯನ್ನು ತಡೆಯಲು ಕಠಿಣ ಕ್ರಮಗಳನ್ನು ಶಿಫಾರಸು ಮಾಡಿದೆ.

ಅಧಿಕಾರಿಗಳಲ್ಲಿ ಬೊಜ್ಜು ಗಂಭೀರ ಪರಿಣಾಮಗಳನ್ನು ಬೀರುತ್ತಿದೆ. ಯುದ್ಧ ಸನ್ನದ್ಧತೆಯ ಮೇಲೆ ವ್ಯತಿರಿಕ್ತ ಪರಿಣಾಮದ ಜೊತೆಗೆ ಕಾಯಿಲೆಗಳಿಗೆ ಕಾರಣವಾಗಿ ಅವರ ಆಯುಷ್ಯವನ್ನೂ ಕುಂದಿಸುತ್ತಿದೆ. ಅಲ್ಲದೆ ಸಮವಸ್ತ್ರದಲ್ಲಿ ಅಸಡ್ಡಾಳವಾಗಿ ಕಾಣಿಸುವ ಮೂಲಕ ಇಂತಹವರು ಸೇನೆಗೆ ಸಾರ್ವಜನಿಕವಾಗಿ ಮುಜುಗರವನ್ನುಂಟು ಮಾಡುತ್ತಿದ್ದಾರೆ ಎಂದು ಅದು ಆ.8ರಂದು ತನ್ನೆಲ್ಲ ಕಮಾಂಡ್‌ಗಳಿಗೆ ರವಾನಿಸಿರುವ ನಿರ್ದೇಶನದಲ್ಲಿ ಹೇಳಿದೆ.

 ಅಧಿಕಾರಿಗಳು ಮತ್ತು ಯೋಧರು ದೇಹತೂಕವನ್ನು ಹೆಚ್ಚಿಸಿಕೊಂಡಿರುವುದು ಕಂಡು ಬಂದರೆ ಅವರನ್ನು ವಾರ್ಷಿಕ ಬೊಜ್ಜು ವೌಲ್ಯಮಾಪನಕ್ಕೊಳಪಡಿಸಲಾಗುವುದು ಮತ್ತು ಅವರ ಚಿತ್ರಗಳನ್ನು ಅವರ ವೌಲ್ಯಮಾಪನ ಕಡತಗಳಿಗೆ ಲಗತ್ತಿಸಲಾಗುವದು.

ಧಡೂತಿ ದೇಹ ಹೊಂದಿರುವ ಸಿಬ್ಬಂದಿಗಳನ್ನು ವಿದೇಶಗಳಲ್ಲಿ ನಿಯೋಜನೆಗೆ, ವೃತ್ತಿಜೀವನದ ಕೋರ್ಸ್‌ಗಳಿಗೆ ಮತ್ತು ‘ಎ’ವರ್ಗದ ನಗರಗಳಿಗೆ ವರ್ಗಾವಣೆಗಳಿಗೆ ಪರಿಗಣಿಸದಿರಲೂ ಸೇನೆಯು ನಿರ್ಧರಿಸಿದೆ.

ಈಗಲೂ ತನ್ನ ಬಿಡುವಿಲ್ಲದ ದಿನಚರಿಯಲ್ಲಿ ಪ್ರತಿ ದಿನ 10 ಕಿ.ಮೀ.ಓಡುವ,ತನ್ನ ದೈಹಿಕ ಕ್ಷಮತೆಗಾಗಿ ಹೆಸರಾಗಿರುವ ಭೂ ಸೇನೆಯ ವರಿಷ್ಠ ದಲ್ಬೀರ್ ಸಿಂಗ್ ಅವರೇ ಖುದ್ದಾಗಿ ಧಡೂತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X