Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊನ್ನಾವರ: ಕಾರ್ಮಿಕ ಸಂಘಟನೆಗಳಿಂದ...

ಹೊನ್ನಾವರ: ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Sept 2016 10:11 PM IST
share
ಹೊನ್ನಾವರ: ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಹೊನ್ನಾವರ, ಸೆ.2: ಕಾರ್ಮಿಕ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರೆ ನೀಡಿದ ದೇಶವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ತಿಲಕ್‌ಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಿದರು. ಬಂದ್ ಕರೆಗೆ ನೀರಸ ಪ್ರತಿಕ್ರಿಯೆ ಕಂಡು ಬಂದಿದ್ದು, ಬಸ್ ಸಂಚಾರ ಎಂದಿನಂತೆ ಇತ್ತು. ಅಂಗಡಿ ಮುಂಗಟ್ಟು, ಹೊಟೇಲ್‌ಗಳು ಎಂದಿನಂತೆ ತೆರೆದಿದ್ದವು. ಟೆಂಪೋಗಳ ಸಂಚಾರ ಸ್ಥಗಿತಗೊಂಡಿತ್ತು. ಸರಕಾರಿ ಕಚೇರಿ ಹಾಗೂ ಶಾಲಾ-ಕಾಲೇಜುಗಳು ಎಂದಿನಂತಿದ್ದವು. ಆಟೊರಿಕ್ಷಾಗಳ ಓಡಾಟ ಇಲ್ಲದೆ ಮಧ್ಯಾಹ್ನದವರೆಗೆ ಸಾರ್ವಜನಿಕರು ಪರದಾಡುವಂತಾಯಿತು.

   ಬಂದ್ ಕರೆ ಘೋಷಣೆಯಾದ್ದರಿಂದ ಗ್ರಾಮೀಣ ಪ್ರದೇಶದ ಜನರು ಪಟ್ಟಣಕ್ಕೆ ಆಗಮಿಸಿದ್ದುದು ವಿರಳವಾಗಿತ್ತು. ಪ್ರತಿಭಟನೆಯಲ್ಲಿ ಸಿಐಟಿಯು, ಅಂಗನವಾಡಿ ನೌಕರರ ಸಂಘ, ಕರ್ನಾಟಕ ಪ್ರಾಂತ ನೌಕರರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಆಶಾ ಕಾರ್ಯಕರ್ತೆಯರ ಸಂಘ, ಗ್ರಾಪಂ ನೌಕರರ ಸಂಘ, ಬಿಎಸ್ಸೆನ್ನೆಲ್ ನೌಕರರ ಸಂಘ ಮತ್ತಿತರರ ಕಾರ್ಮಿಕ ಸಂಘಟನೆಗಳ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪಟ್ಟಣದ ಶರಾವತಿ ಸರ್ಕಲ್‌ನಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ತಹಶೀಲ್ದಾರ್ ಕಚೇರಿಯಲ್ಲಿ ಜಮಾಯಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಬಳಿಕ ಮಾತನಾಡಿದ ಸಿಐಟಿಯು ಜಿಲ್ಲಾ ಅಧ್ಯಕ್ಷ ತಿಲಕಗೌಡ, ಜೀವನಾವಶ್ಯಕ ವಸ್ತುಗಳ, ಆಹಾರ ಧಾನ್ಯಗಳ ಬೆಲೆ ಗಗನಕ್ಕೇರಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಮಿತಿಮೀರಿ ಏರಿಕೆ ಮಾಡಿದ್ದಾರೆ. ಕಾರ್ಮಿಕರ ನೈಜ ವೇತನ ಕಡಿಮೆಯಾಗುತ್ತಿದೆ, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಇದಕ್ಕೆ ಕೇಂದ್ರ ಸರಕಾರವೇ ನೇರ ಹೊಣೆ, ಪಡಿತರ ಪದ್ಧತಿಯನ್ನು ಕುಂಠಿತಗೊಳಿಸಲಾಗುತ್ತಿದೆ ಎಂದರು.

ಕರ್ನಾಟಕ ಪ್ರಾಂತ ರೈತಸಂಘದ ತಾಲೂಕಾಧ್ಯಕ್ಷ ಗಣೇಶ ಭಂಡಾರಿ ಮಾತನಾಡಿ, ರೈತರು ನಮ್ಮ ದೇಶದ ಬೆನ್ನೆಲುಬು ಎಂದು ಘೋಷಣೆ ಮಾತ್ರ ಮಾಡುತ್ತಾರೆ. ಆದರೆ ರೈತರ ಬೆನ್ನು ಮುರಿಯುವ ಕೆಲಸ ಸರಕಾರ ಮಾಡುತ್ತಿದೆ. ರೈತ ಆಹಾರ ಬೆಳೆದರೆ ಮಾತ್ರ ಬದುಕು ಸಾಗಿಸಬಹುದಾಗಿದೆ. ಕೈಗಾರಿಕೋದ್ಯಮವೊಂದನ್ನೇ ಬೆಳೆಸುವುದರಿಂದ ಬಡ ರೈತರಿಗೆ ಯಾವುದೇ ಲಾಭವಿಲ್ಲ ಎಂದರು.

ಸಿಐಟಿಯು ತಾಲೂಕಾಧ್ಯಕ್ಷ ತಿಮ್ಮಪ್ಪ ಗೌಡ ಮಾತನಾಡಿದರು. ಹೋರಾಟದಲ್ಲಿ ಸಿಐಟಿಯು ತಾಲೂಕು ಖಜಾಂಚಿ ಮಂಜುನಾಥ ಗೌಡ, ಕಾರ್ಯದರ್ಶಿ ಗೀತಾ ನಾಯ್ಕ, ಭಾವನಾ ನಾಯ್ಕ, ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಸಾವಿತ್ರಿ ವೈದ್ಯ, ಅಕ್ಷರದಾಸೋಹ ಸಂಘದ ಅಧ್ಯಕ್ಷೆ ಶ್ರೀಮತಿ ನಾಯ್ಕ, ಆಟೊ ಚಾಲಕ ಮಾಲಕ ಸಂಘದ ಅಧ್ಯಕ್ಷ ಶಿವರಾಜ ಮೇಸ್ತ ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X