Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರದಿಂದ ರಫ್ತು ಕುಸಿತಕ್ಕೆ ಅಂಕುಶ;...

ಕೇಂದ್ರದಿಂದ ರಫ್ತು ಕುಸಿತಕ್ಕೆ ಅಂಕುಶ; ಆರ್ಥಿಕ ಬೆಳವಣಿಗೆಗೆ ಪುನಶ್ಚೇತನ

ಪ್ರಾದೇಶಿಕ ಪತ್ರಿಕಾ ಸಂಪಾದಕರ ಸಮಾವೇಶದಲ್ಲಿ ನಿರ್ಮಲಾ

ವಾರ್ತಾಭಾರತಿವಾರ್ತಾಭಾರತಿ2 Sept 2016 11:07 PM IST
share

ಚೆನ್ನೈ,ಸೆ.2: ದೇಶದ ರಫ್ತು ಪ್ರಮಾಣದಲ್ಲಿ ಉಂಟಾಗಿದ್ದ ಕುಸಿತವನ್ನು ತಡೆಹಿಡಿಯಲಾಗಿದ್ದು, ಆರ್ಥಿಕ ಬೆಳವಣಿಗೆಯು ಸ್ಥಿರಗೊಂಡಿದೆಯೆಂದು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಅವರು ಚೆನ್ನೈನಲ್ಲಿ ಶುಕ್ರವಾರ ದಕ್ಷಿಣ ಭಾರತದ ರಾಜ್ಯಗಳ ಪ್ರಾದೇಶಿಕ ಸಂಪಾದಕ ಸಮಾವೇಶದಲ್ಲಿ ಮಾತನಾಡುತ್ತಿದ್ದರು. 2015-16ನೆ ಸಾಲಿನಲ್ಲಿ ದೇಶದ ರಫ್ತು ವೌಲ್ಯವು 262.30 ಶತಕೋಟಿ ಡಾಲರ್‌ಗಳಾಗಿದ್ದು, ಶೇ.15.5 ಶೇ. ಕುಸಿತವನ್ನು ದಾಖಲಿಸಿತ್ತು. ಆದರೆ ಚಹಾ, ತಂಬಾಕು, ಸಂಬಾರ ಪದಾರ್ಥಗಳು, ಹಣ್ಣ, ತರಕಾರಿಗಳು, ಔಷಧ, ಜವಳಿ ಸೇರಿದಂತೆ 12 ವಲಯಗಳಲ್ಲಿ ರಫ್ತು ವೌಲ್ಯದಲ್ಲಿ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿತ್ತು ಎಂದವರು ಹೇಳಿದರು.

ಜಗತ್ತಿನಲ್ಲೇ ಅತಿ ದೊಡ್ಡ ಸಂಬಾರ ಪದಾರ್ಥಗಳ ಉತ್ಪಾದಕ, ರಫ್ತುದಾರ ಹಾಗೂ ಗ್ರಾಹಕ ದೇಶವಾದ ಭಾರತವು 2015-16ನೆ ಸಾಲಿನಲ್ಲಿ 16,238.23 ಕೋಟಿ ರೂ. ವೌಲ್ಯದ 8,43,255 ಟನ್ ಸಂಬಾರ ಪದಾರ್ಥಗಳನ್ನು ಹಾಗೂ ಸಂಬಾರ ಉತ್ಬನ್ನಗಳನ್ನು ರಫ್ತು ಮಾಡಿತ್ತು. 450 ಕೋಟಿ ರೂ. ವೌಲ್ಯದ 5,500 ಟನ್ ಏಲಕ್ಕಿ ರಫ್ತು ಮಾಡಲಾಗಿದು, ಇದು ಸಾರ್ವಕಾಲಿಕ ದಾಖಲಾಗಿದೆಯೆಂದು ಸಚಿವೆ ತಿಳಿಸಿದರು.
ಕಳೆದ ಸಾಲಿನಲ್ಲಿ 1,195 ಮಿಲಿಯ ಕೆ.ಜಿ. ಚಹಾ ಉತ್ಪಾದನೆಯ ಗುರಿಯಿರಿಸ ಲಾಗಿತ್ತಾದರೂ, 1,233 ಮಿಲಿಯ ಕೆ.ಜಿ. ಉತ್ಪಾದನೆಯಾಗಿದ್ದು, ಇದು ಕೂಡಾ ಸಾರ್ವಕಾಲಿಕ ದಾಖಲೆಯೆಂದು ನಿರ್ಮಲಾ ಸೀತಾರಾಮನ್ ಹರ್ಷ ವ್ಯಕ್ತಪಡಿಸಿದರು.
  ಕಳೆದ ನಾಲ್ಕು ವರ್ಷಗಳಲ್ಲಿ ಕಾಫಿ ಮಂಡಳಿ ಜಾರಿಗೊಳಿಸಿದ ವಿವಿಧ ಅಭಿವೃದ್ಧಿ ಯೋಜನೆಗಳಿಂದ ಸುಮಾರು ಒಂದು ಲಕ್ಷ ಸಣ್ಣ ಪ್ರಮಾಣದ ಕಾಫಿ ಬೆಳೆಗಾರರು ಪ್ರಯೋಜನವಾಗಿದೆ ಹಾಗೂ 2015-16ರಲ್ಲಿ 3.5 ಲಕ್ಷ ಮೆಟ್ರಿಕ್ ಟನ್ ದಾಖಲೆಯ ಕಾಫಿ ಉತ್ಪಾದನೆಯಾಗಲು ಸಾದ್ಯವಾಗಿದೆಯೆಂದರು. ಕಾಫಿ ಮಂಡಳಿಯು ತನ್ನ ಕಲ್ಯಾಣ ಕಾರ್ಯಕ್ರಮಗಳಿಂದಾಗಿ ಕಾರ್ಮಿಕರು ಹಾಗೂ ಸಣ್ಣ ಬೆಳೆಗಾರರ ಸುಮಾರು 38 ಸಾವಿರ ಮಕ್ಕಳ ಶಿಷ್ಯವೇತನ ಮತ್ತಿತರ ಸೌಲಭ್ಯಗಳನ್ನು ಒದಗಿಸಿಕೊಟ್ಟಿದೆಂದವರು ತಿಳಿಸಿದರು.
 ಕಳೆದ ಸಾಲಿನಲ್ಲಿ ಉತ್ಪಾದಕ ವಲಯದಲ್ಲಿ ಶೇ.9.3ರಷ್ಟು ಬೆಳವಣಿಗೆಯಾಗಿದ್ದು, ಇದು 5-6 ಶೇ. ಬೆಳವಣಿಗೆಯನ್ನು ಕಂಡ ಹಿಂದಿನ 3 ವಿತ್ತ ವರ್ಷಗಳಿಗಿಂತ ಅಧಿಕವೆಂದು ಅವರು ಸಭೆಯ ಗಮನಸೆಳೆದರು. ಮೋದಿ ಸರಕಾರ ಅಧಿಕಾರಕ್ಕೇರಿದ ಬಳಿಕ ದೇಶದ ಕೈಗಾರಿಕಾ ಲೈಸೆನ್ಸಿಂಗ್ ನೀಡಿಕೆ ನೀತಿಯನ್ನು ಸರಳಗೊಳಿಸಲಾಗಿದೆ ಹಾಗೂ ಅವುಗಳ ಸಿಂಧುತ್ವದ ಅವಧಿಯನ್ನು ವಿಸ್ತರಿಸಲಾಗಿದೆಯೆಂದು ಸಚಿವೆ ವಿವರಿಸಿದರು.
 ಉದ್ಯಮಗಳ ನಿರ್ವಹಣೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರಕಾರವು ಎಲ್ಲಾ ರಾಜ್ಯಗಳಲ್ಲಿ 340 ಅಂಶಗಳ ಕ್ರಿಯಾ ಯೋಜನೆಯನ್ನು ಎಲ್ಲಾ ರಾಜ್ಯಗಳ ಜೊತೆ ಹಂಚಿಕೊಂಡಿದೆ ಎಂದು ನಿರ್ಮಲಾ ತಿಳಿಸಿದರು.
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಸ್ಟಾರ್ಟಪ್ ಯೋಜನೆಯ ವಿವರಗಳನ್ನು ಅವರು ಈ ಸಂದರ್ಭದಲ್ಲಿ ನೀಡಿದರು. ಸ್ಟಾರ್ಟಪ್ ಉದ್ಯಮಿಗಳಿಗೆ ಸಾಮಾಗ್ರಿಗಳ ಸಂಗ್ರಹಣೆ ಕುರಿತ ನಿಯಮಗಳನ್ನು ಸಡಿಲಿಸಲಾಗಿದೆಯೆಂದರು. ಸಂಶೋಧನಾ ಕೇಂದ್ರಗಳ ಸ್ಥಾಪನೆಗೆ ಉತ್ತೇಜನ ನೀಡುವುದಕ್ಕಾಗಿ ಅಟಲ್ ಸಂಶೋಧನಾ ಮಿಶನ್ (ಎಐಎಂ) ಹಾಗೂ ಸ್ವ ಉದ್ಯೋಗ್ಯ ಹಾಗೂ ಪ್ರತಿಭಾ ಸದ್ಬಳಕೆ ಕಾರ್ಯಕ್ರಮ (ಎಸ್‌ಇಟಿಯು)ವನ್ನು ಆರಂಭಿಸಲಾಗಿದೆಯೆಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X