Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದು ಭಾರತ-ಪೊರ್ಟೊರಿಕೊ ಸೌಹಾರ್ದ...

ಇಂದು ಭಾರತ-ಪೊರ್ಟೊರಿಕೊ ಸೌಹಾರ್ದ ಫುಟ್ಬಾಲ್ ಪಂದ್ಯ

ಭಾರತದ ಫುಟ್ಬಾಲ್ ತಂಡದ ನಾಯಕನಾಗಿ ಗೋಲ್‌ಕೀಪರ್ ಗುರುಪ್ರೀತ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ2 Sept 2016 11:27 PM IST
share
ಇಂದು ಭಾರತ-ಪೊರ್ಟೊರಿಕೊ ಸೌಹಾರ್ದ ಫುಟ್ಬಾಲ್  ಪಂದ್ಯ

ಮುಂಬೈ, ಸೆ.2: ಪೊರ್ಟೊರಿಕೊ ವಿರುದ್ಧ ಶನಿವಾರ ನಡೆಯಲಿರುವ ಅಂತಾರಾಷ್ಟ್ರೀಯ ಸೌಹಾರ್ದ ಪಂದ್ಯಕ್ಕೆ ಭಾರತದ ಫುಟ್ಬಾಲ್ ತಂಡದ ನಾಯಕನಾಗಿ ಗೋಲ್‌ಕೀಪರ್ ಗುರುಪ್ರೀತ್ ಸಿಂಗ್ ಸಂಧು ಅವರನ್ನು ಕೋಚ್ ಸ್ಟೀಫನ್ ಕಾನ್‌ಸ್ಟನ್‌ಟೈನ್ ಶುಕ್ರವಾರ ಆಯ್ಕೆ ಮಾಡಿದ್ದಾರೆ.

ಭಾರತಕ್ಕಿಂತ ಗರಿಷ್ಠ ರ್ಯಾಂಕಿನ ಪೊರ್ಟೊ ರಿಕೊ ವಿರುದ್ಧ ಪಂದ್ಯ ಇಲ್ಲಿನ ಅಂಧೇರಿಯ ಕ್ರೀಡಾ ಸಂಕೀರ್ಣದಲ್ಲಿ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಪೊರ್ಟೊ ರಿಕೊ ವಿರುದ್ಧ ನಾಳೆ(ಶನಿವಾರ)ನಡೆಯಲಿರುವ ಪಂದ್ಯದಲ್ಲಿ ಗುರುಪ್ರೀತ್ ಸಿಂಗ್ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ ಎಂದು ಪಂದ್ಯಪೂರ್ವ ಪತ್ರಿಕಾಗೋಷ್ಠಿಯಲ್ಲಿ ಸ್ಟೀಫನ್ ಘೋಷಿಸಿದರು. 24ರ ಹರೆಯದ ಸಿಂಗ್ ಭಾರತವನ್ನು ಮುನ್ನಡೆಸಲಿರುವ ಅತ್ಯಂತ ಕಿರಿಯ ಆಟಗಾರನಾಗಿದ್ದಾರೆ. ಸಿಂಗ್ ಯುರೋಪ್‌ನಲ್ಲಿ ವೃತ್ತಿಪರ ಫುಟ್ಬಾಲ್‌ನ್ನು ಆಡಿದ ಭಾರತದ ಏಕೈಕ ಆಟಗಾರನಾಗಿದ್ದಾರೆ.

 ಖಾಯಂ ನಾಯಕ ಹಾಗೂ ಸ್ಟ್ರೈಕರ್ ಸುನೀಲ್ ಚೆಟ್ರಿ ಸ್ಥಾನಕ್ಕೆ ಸಿಂಗ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ಸಿಂಗ್ ಆಯ್ಕೆಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಅರ್ಜುನ ಪ್ರಶಸ್ತಿ ವಿಜೇತ ಹಿರಿಯ ಗೋಲ್‌ಕೀಪರ್ ಸುಬ್ರತಾ ಪಾಲ್ ಆಡುವ ಬಳಗದಿಂದ ಹೊರಗುಳಿಯುವ ಸಾಧ್ಯತೆಯಿದೆ.

1955ರಲ್ಲಿ ಮುಂಬೈನಲ್ಲಿ ಕೊನೆಯ ಬಾರಿ ಭಾರತ ಹಾಗೂ ಯುಎಸ್‌ಎಸ್‌ಆರ್ ನಡುವೆ ಅಂತಾರಾಷ್ಟ್ರೀಯ ಫುಟ್ಬಾಲ್ ಪಂದ್ಯ ನಡೆದಿತ್ತು. ಫಿಫಾ ರ್ಯಾಂಕಿಂಗ್‌ನಲ್ಲಿ 152ನೆ ಸ್ಥಾನದಲ್ಲಿರುವ ಭಾರತಕ್ಕೆ 114ನೆ ಸ್ಥಾನದಲ್ಲಿರುವ ಪೊರ್ಟೊ ರಿಕೊ ವಿರುದ್ಧ ಜಯ ಸಾಧಿಸಿ ಫಿಫಾ ರ್ಯಾಂಕಿಂಗ್‌ನಲ್ಲಿ ಭಡ್ತಿ ಪಡೆಯುವ ವಿಶ್ವಾಸದಲ್ಲಿದೆ.

ಭಾರತ ಈವರ್ಷ ಆಡುತ್ತಿರುವ 5ನೆ ಅಂತಾರಾಷ್ಟ್ರೀಯ ಫುಟ್ಬಾಲ್ ಪಂದ್ಯ ಇದಾಗಿದೆ. ಪೊರ್ಟೊರಿಕೊ ತಂಡ ಸಂಪರ್ಕದ ವಿಮಾನವನ್ನು ತಪ್ಪಿಸಿಕೊಂಡ ಕಾರಣ ಇಂದು ಸಂಜೆ ನಗರಕ್ಕೆ ಆಗಮಿಸಿದೆ. ಎದುರಾಳಿ ಪೊರ್ಟೊರಿಕೊ ತಂಡ ತಡವಾಗಿ ಭಾರತಕ್ಕೆ ಆಗಮಿಸಿರುವ ಕಾರಣ ಭಾರತಕ್ಕೆ ಲಾಭವಾಗಲಿದೆ ಎಂಬ ವಾದವನ್ನು ಕೋಚ್ ಸ್ಟೀಫನ್ ತಳ್ಳಿಹಾಕಿದರು.

ಪೊರ್ಟೊರಿಕೊ ತಂಡದಲ್ಲಿ ಉತ್ತಮ ಆಟಗಾರರಿದ್ದು, ಅದೊಂದು ಶ್ರೇಷ್ಠ ತಂಡ. ಆ ತಂಡ ಮುಂಬೈಗೆ ತಡವಾಗಿ ಬಂದಿದ್ದರೂ ಆ ತಂಡದ ಗುಣಮಟ್ಟವನ್ನು ತಳ್ಳಿಹಾಕುವಂತಿಲ್ಲ. ಆ ತಂಡದಲ್ಲಿರುವ ಹೆಚ್ಚಿನ ಆಟಗಾರರು ಅಮೆರಿಕ ಮೂಲದವರು. ಯುರೋಪ್‌ನಲ್ಲಿ ಆಡಿರುವ ಅನುಭವ ಅವರಿಗಿದೆ ಎಂದು ಸ್ಟೀಫನ್ ತಿಳಿಸಿದರು.

ಭಾರತ ತಂಡದಲ್ಲಿರುವ 13 ಆಟಗಾರರಲ್ಲಿ 9 ಮಂದಿ ಅಂಡರ್-23 ವಯೋಮಿತಿಯವರು. ಭಾರತದ ಪರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗರಿಷ್ಠ ಗೋಲು ಬಾರಿಸಿರುವ ಸುನೀಲ್ ಚೆಟ್ರಿ ಭಾರತದ ಯುವ ಆಟಗಾರರನ್ನು ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X