ಧಾರ್ಮಿಕ ನಿಂದನೆ: ಕ್ರಮಕ್ಕೆ ಸಿಪಿಎಂ ಒತ್ತಾಯ
ಮಂಗಳೂರು, ಸೆ.2: ಫೇಸ್ಬುಕ್ ಮತ್ತು ಇತರ ಸಾಮಾಜಿಕ ಜಾಲ ತಾಣಗಳಲ್ಲಿ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಅಶ್ಲೀಲವಾಗಿ ನಿಂದಿಸುವವರನ್ನು ಪತ್ತೆ ಹಚ್ಚಿ ಬಂಧಿಸಿ ಅವರ ವಿರುದ್ಧ ಕಾನೂನುಕ್ರಮ ಜರಗಿಸಬೇಕೆಂದು ಸಿಪಿಎಂ ದ.ಕ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಶಾಂತಿ ಕದಡಿ ಕೋಮುಗಲಭೆಯನ್ನು ಸೃಷ್ಟಿಸುವ ಹುನ್ನಾರವು ಇದರ ಹಿಂದೆ ಇರುವ ಸಾಧ್ಯತೆ ಇದೆ. ಅಂತಹ ವ್ಯಕ್ತಿಗಳನ್ನು ಬಂಧಿಸಿ ಜಿಲ್ಲೆಯ ಶಾಂತಿ ಸೌಹಾರ್ದ ಕಾಪಾಡಲು ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿ ಒತ್ತಾಯಿಸಿದ್ದಾರೆ.
Next Story