Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜ್ಯೋತಿ ಸಂಜೀವಿನಿ ಯೋಜನೆಯಲ್ಲಿ ಲೋಪ

ಜ್ಯೋತಿ ಸಂಜೀವಿನಿ ಯೋಜನೆಯಲ್ಲಿ ಲೋಪ

ಕ್ರಮ ಕೈಗೊಳ್ಳಲು ಒತ್ತಾಯಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ3 Sept 2016 9:44 PM IST
share
ಜ್ಯೋತಿ ಸಂಜೀವಿನಿ ಯೋಜನೆಯಲ್ಲಿ ಲೋಪ

ಸಾಗರ, ಸೆ.3: ಜ್ಯೋತಿ ಸಂಜೀವಿನಿ ಯೋಜನೆಯಲ್ಲಿ ಉಂಟಾಗುತ್ತಿರುವ ಲೋಪವನ್ನು ಸರಿಪಡಿಸಿ, ಅದನ್ನು ಶಿಕ್ಷಕರು ಉಪಯೋಗಿಸಿಕೊಳ್ಳಲು ಅನುಕೂಲವಾಗುವಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಶನಿವಾರ ಪ್ರಾಥಮಿಕ ಶಾಲಾ ಭಡ್ತಿ ಮುಖ್ಯ ಶಿಕ್ಷಕರ ಸಂಘದ ಸ್ಥಳೀಯ ಶಾಖೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಿ.ಗಣಪತಪ್ಪ ಮಾತನಾಡಿ, ಸರಕಾರ ಜ್ಯೋತಿ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ತಂದಿದ್ದರೂ ಅದು ಶಿಕ್ಷಕ ಸಮೂಹ ಸಮರ್ಪಕವಾಗಿ ಉಪಯೋಗಿಸಿಕೊಳ್ಳದ ಸ್ಥಿತಿ ನಿರ್ಮಾಣವಾಗಿದೆ. ಶಿಕ್ಷಕರ ಮಾಹಿತಿಯನ್ನು ಎಚ್‌ಆರ್‌ಎಂಎಸ್‌ಗೆ ಜೋಡಿಸುವಲ್ಲಿ ಆಗಿರುವ ಲೋಪದಿಂದ ಯೋಜನೆ ಫಲಾನುಭವಿಗಳಾಗಬೇಕಾಗಿದ್ದ ಶಿಕ್ಷಕರು ಆರೋಗ್ಯ ಖರ್ಚಿಗೆ ಸ್ವಂತ ಹಣವನ್ನು ಉಪಯೋಗಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಯೋಜನೆಯು 7 ಮಾರಣಾಂತಿಕ ಕಾಯಿಲೆಗಳಿಗೆ ಅನ್ವಯ ಆಗುತ್ತದೆ. ಕರ್ತವ್ಯನಿರತ ಕೆಲವು ಶಿಕ್ಷಕರು ಅಪಘಾತ, ಕಾಯಿಲೆ ಇನ್ನಿತರೆ ಸಂದರ್ಭದಲ್ಲಿ ಯೋಜನೆ ವ್ಯಾಪ್ತಿಗೆ ಬರುವ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಹೋದರೆ, ಮಾಹಿತಿ ಕೊರತೆಯಿಂದ ಸೌಲಭ್ಯ ಪಡೆಯಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ನೋಂದಾವಣೆಯಲ್ಲಿ ಆಗುತ್ತಿರುವ ಲೋಪವನ್ನು ತಕ್ಷಣ ಸರಿಪಡಿಸಿ, ಶಿಕ್ಷಕರಿಗೆ ತುರ್ತು ಸಂದರ್ಭದಲ್ಲಿ ಯೋಜನೆ ಸದುಪಯೋಗಪಡಿಸಿಕೊಳ್ಳಲು ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಭಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಟಿ.ಸ್ವಾಮಿ ಮಾತನಾಡಿ, ಸರಕಾರ ನೌಕರರ ಹಿತದೃಷ್ಟಿಯಿಂದ ಜಾರಿಗೆ ತಂದ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಅಗತ್ಯಕ್ರಮ ಕೈಗೊಳ್ಳಬೇಕು. ರೋಗಿಗಳು ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಸರಿಯಾದ ಮಾಹಿತಿ ಹಾಗೂ ದಾಖಲೆಗಳು ಇಲ್ಲದೆ ಇರುವ ಬಗ್ಗೆ ಆಸ್ಪತ್ರೆ ಮುಖ್ಯಸ್ಥರು ಆಕ್ಷೇಪಿಸುತ್ತಿದ್ದಾರೆ. ಶಿಕ್ಷಕರು ಅತ್ಯಂತ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಇಂತಹ ಸೌಲಭ್ಯವಿದ್ದೂ ಪಡೆಯಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಭಡ್ತಿ ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷ ಕೆ.ಕೆ.ಚನ್ನಪ್ಪ, ಪ್ರಧಾನ ಕಾರ್ಯದರ್ಶಿ ಸಿ.ನಾಗರಾಜ, ಸಹ ಕಾರ್ಯದರ್ಶಿ ಪ್ರಭು ಇ.ಎನ್., ರಮೇಶ್ ನಾರಾಯಣ, ಬೂದ್ಯಪ್ಪ ಕೆ.ಎಚ್., ಚಂದ್ರಪ್ಪ, ಮನೋಹರ, ಕೃಷ್ಣಪ್ಪ, ಡಿ.ಕೆ.ಮೋಳೆ ಮತ್ತಿತರರು ಹಾಜರಿದ್ದರು.

ನಾಳೆ ಮಾಂಸ ಮಾರಾಟ ನಿಷೇಧ ಚಿಕ್ಕಮಗಳೂರು, ಸೆ.3: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸೆ.5ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.

  ನಗರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆಗಳು, ಮಾಂಸ ಮಾರಾಟ ಅಂಗಡಿಗಳನ್ನು ಹಾಗೂ ಮಾಂಸಾಹಾರಿ ಹೊಟೇಲ್‌ಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ನಗರಸಭೆ ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X