Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿಯಿಂದ ಇಂಗ್ಲೆಂಡ್‌ಗೆ ಭರ್ಜರಿ...

ಐಸಿಸಿಯಿಂದ ಇಂಗ್ಲೆಂಡ್‌ಗೆ ಭರ್ಜರಿ ಅನುದಾನ: ಬಿಸಿಸಿಐ ಅಸಮಾಧಾನ

ಚಾಂಪಿಯನ್ಸ್ ಟ್ರೋಫಿ

ವಾರ್ತಾಭಾರತಿವಾರ್ತಾಭಾರತಿ3 Sept 2016 11:37 PM IST
share
ಐಸಿಸಿಯಿಂದ ಇಂಗ್ಲೆಂಡ್‌ಗೆ ಭರ್ಜರಿ ಅನುದಾನ: ಬಿಸಿಸಿಐ ಅಸಮಾಧಾನ

ಹೊಸದಿಲ್ಲಿ, ಸೆ.3: ಮುಂದಿನ ವರ್ಷ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಆಯೋಜನಾ ವೆಚ್ಚವಾಗಿ ಸುಮಾರು 135 ಮಿಲಿಯನ್ ಯುಎಸ್ ಡಾಲರ್ ಅನುದಾನ ಬಿಡುಗಡೆಗೊಳಿಸಲು ಐಸಿಸಿ ನಿರ್ಧರಿಸಿದೆ. ಐಸಿಸಿಯ ಈ ನಿರ್ಧಾರಕ್ಕೆ ಬಿಸಿಸಿಐ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜೂ.1 ರಿಂದ 18ರ ತನಕ ನಿಗದಿಯಾಗಿದೆ.

ಭಾರತದಲ್ಲಿ ಈ ವರ್ಷ ಮಾ.8 ರಿಂದ ಎ.3ರ ತನಕ ನಡೆದ ಟ್ವೆಂಟಿ-20 ವಿಶ್ವಕಪ್ ಟೂರ್ನಿಗೆ ಐಸಿಸಿ, ಬಿಸಿಸಿಐಗೆ ಆಯೋಜನಾ ವೆಚ್ಚವಾಗಿ 45 ಮಿಲಿಯನ್ ಯುಎಸ್ ಡಾಲರ್ ಮಂಜೂರು ಮಾಡಿತ್ತು. ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಭಾರತಕ್ಕೆ ನೀಡಿದ್ದಕ್ಕಿಂತ ಮೂರು ಪಟ್ಟು ಹೆಚ್ಚು ಬಜೆಟ್‌ನ್ನು ಇಂಗ್ಲೆಂಡ್‌ಗೆ ನೀಡಲು ನಿರ್ಧರಿಸಿರುವ ಐಸಿಸಿ ನಡೆ ಬಿಸಿಸಿಐ ಅಸಮಾಧಾನಕ್ಕೆ ಕಾರಣವಾಗಿದೆ.

ಐಸಿಸಿ ಯಾವುದೇ ಟೂರ್ನಿಯನ್ನು ಆಯೋಜಿಸಿದರೂ ನಿರ್ದಿಷ್ಟ ಬಜೆಟ್‌ನ್ನು ಆತಿಥೇಯ ರಾಷ್ಟ್ರಕ್ಕೆ ಮಂಜೂರು ಮಾಡುತ್ತದೆ. ಆತಿಥೇಯ ರಾಷ್ಟ್ರ ಸ್ಥಳೀಯ ಆಯೋಜನಾ ಸಮಿತಿ(ಎಲ್‌ಒಸಿ)ಯನ್ನು ನೇಮಕ ಮಾಡುತ್ತದೆ. ಎಲ್‌ಒಸಿ ಟೂರ್ನಿ ಆಯೋಜನೆಯ ಎಲ್ಲ ಖರ್ಚು-ವೆಚ್ಚದ ಜವಾಬ್ದಾರಿ ಹೊಂದಿರುತ್ತದೆ.

 ಬ್ರಿಟನ್‌ನಲ್ಲಿ 19 ದಿನಗಳ ಕಾಲ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೇವಲ 15 ಪಂದ್ಯಗಳು ನಡೆಯುತ್ತವೆ. ಭಾರತದಲ್ಲಿ ನಡೆದಿದ್ದ ಟ್ವೆಂಟಿ-20 ವಿಶ್ವಕಪ್ 27 ದಿನಗಳ ಕಾಲ ನಡೆದಿದ್ದು ಒಟ್ಟು 58 ಪಂದ್ಯಗಳು(ಪುರುಷರ 35, ಮಹಿಳೆಯರ 23 ಪಂದ್ಯಗಳು) ನಡೆದಿದ್ದವು.

ಮೇ-ಜೂನ್‌ನಲ್ಲಿ ನಡೆದ ಐಸಿಸಿ ವಾರ್ಷಿಕ ಸಮ್ಮೇಳನದಲ್ಲಿ ಚಾಂಪಿಯನ್ಸ್ ಟ್ರೋಫಿ 2017ರ ಡ್ರಾಫ್ಟ್ ಬಜೆಟ್‌ನ ಪ್ರತಿಯನ್ನು ಎಲ್ಲ ಸದಸ್ಯರಿಗೆ ಐಸಿಸಿ ವಿತರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X