Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂತ್ರಪಿಂಡ, ಮೇದೋಜಿರಕ ಗ್ರಂಥಿ ಯಶಸ್ವಿ...

ಮೂತ್ರಪಿಂಡ, ಮೇದೋಜಿರಕ ಗ್ರಂಥಿ ಯಶಸ್ವಿ ಕಸಿ

ವಾರ್ತಾಭಾರತಿವಾರ್ತಾಭಾರತಿ3 Sept 2016 11:51 PM IST
share

ಬೆಂಗಳೂರು, ಸೆ.3: ಅಂಗಾಂಗ ಕಸಿಯಲ್ಲಿ ಪರಿಣಿತಿ ಹೊಂದಿರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ವೈದ್ಯರ ತಂಡ ಮೂತ್ರಪಿಂಡ ಮತ್ತು ಮೇದೋಜಿರಕ (ಪ್ಯಾಂಕ್ರಿಯಾಟಿಕ್) ಗ್ರಂಥಿ ಕಸಿಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಪುಣೆಯ 22 ವರ್ಷದ ಯುವಕನನ್ನು ರಕ್ಷಿಸಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಬಹು ಅಂಗಾಂಗ ಕಸಿ ತಜ್ಞ ಡಾ.ಸುರೇಶ್ ರಾಘವಯ್ಯ ಮಾತನಾಡಿ, ಪುಣೆಯ ಶೇಖರ್ ಮಿಲಾನಿ 5 ವರ್ಷದವನಿದ್ದಾಗಲೇ ಮಧುಮೇಹಕ್ಕೆ ತುತ್ತಾಗಿದ್ದ ಮತ್ತು ಈ ರೋಗದಿಂದಾಗಿ ತನ್ನ ಎರಡೂ ಮೂತ್ರಪಿಂಡ ಕಳೆದುಕೊಂಡಿದ್ದ. ಪ್ರತಿದಿನ ಮೂರು ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದುದಲ್ಲದೆ, ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳುವ ಮೂಲಕ ಬದುಕುಳಿದಿದ್ದ ಎಂದರು.
ಇದೀಗ ಎರಡೂ ಕಿಡ್ನಿಗಳನ್ನು ಜೋಡಿಸಿರುವುದರಿಂದ ಮೊದಲಿನಂತೆ ಆತನ ಅಂಗಾಂಗಗಳೆಲ್ಲಾ ಕಾರ್ಯನಿರ್ವ ಹಿಸುತ್ತಿದ್ದು, ಇನ್‌ಸುಲಿನ್ ಮತ್ತು ಡಯಾಲಿಸಿಸ್‌ನಿಂದ ಸಂಪೂರ್ಣ ಮುಕ್ತಗೊಂಡಿದ್ದಾನೆ ಎಂದು ವಿವರಿಸಿದರು.
ಆಸ್ಪತ್ರೆ ಉಪಾಧ್ಯಕ್ಷ ಡಾ.ಎನ್.ಕೆ.ವೆಂಕಟರಮಣ ಮಾತನಾಡಿ, ‘ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದು ನಮ್ಮ ಆದ್ಯತೆ. ಈ ಹಿನ್ನೆಲೆಯಲ್ಲಿ ಕಾಲಕಾಲಕ್ಕೆ ನಾವು ವಿಶ್ವಮಟ್ಟದ ಚಿಕಿತ್ಸೆಗಳಿಗೆ ಪೂರಕವಾಗಿ ಆಸ್ಪತ್ರೆ ಮೂಲಸೌಕರ್ಯ ಮತ್ತು ಇತರೆ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸುತ್ತಲೆ ಇರುತ್ತೇವೆ’ ಎಂದರು.
ಅಂಗಾಂಗ ಕಸಿ ಮಾಡುವ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಭಾರತದಲ್ಲಿ ಅತ್ಯಂತ ಹೆಚ್ಚು ಬಹುಅಂಗಾಂಗ ಕಸಿ ಶಸ್ತ್ರಚಿಕಿತ್ಸೆ ನಡೆಸುವ ಆಸ್ಪತ್ರೆ ಎಂದೆನಿಸಿದೆ. ಪ್ಯಾಂಕ್ರಿಯಾಟಿಕ್ ಮತ್ತು ಕಿಡ್ನಿಯನ್ನು ಏಕಕಾಲದಲ್ಲಿ ಕಸಿ ಮಾಡಿರುವ ದೇಶದ ಏಕೈಕ ಆಸ್ಪತ್ರೆ ಇದಾಗಿದ್ದು, 2ವರ್ಷಗಳಲ್ಲಿ ಎರಡನೆ ಯಶಸ್ವಿ ಎಸ್‌ಪಿಕೆ ಕಸಿ ಇದಾಗಿದೆ ಎಂದು ಹೇಳಿದರು.
ಶಸ್ತ್ರಚಿಕಿತ್ಸೆಗೆ ಒಳಗಾದ ರೋಗಿ ಶೇಖರ್ ಮಿಲಾನಿ ಮಾತನಾಡಿ, ನನಗೆ ಪುನರ್ಜನ್ಮ ನೀಡಿದ ವೈದ್ಯರು ಮತ್ತು ಆಸ್ಪತ್ರೆಗೆ ಧನ್ಯವಾದ ಅರ್ಪಿಸುತ್ತಿದ್ದೇನೆ. ಮಧುಮೇಹದಿಂದ ಮುಕ್ತವಾಗಿ ಜೀವನ ಸಾಗಿಸುತ್ತೇನೆಂದು ನಾನು ಅಂದುಕೊಂಡಿರಲಿಲ್ಲ. ಆದರೆ, ಇಂದು ಯಶಸ್ವಿಯಾದ ಕಸಿ ಶಸ್ತ್ರಚಿಕಿತ್ರೆಯಿಂದಾಗಿ ನಾನು ಇನ್‌ಸುಲಿನ್ ಮತ್ತು ಡಯಾಲಿಸಿಸ್‌ನಿಂದ ಸಂಪೂರ್ಣ ಹೊರಬಂದಿದ್ದೇನೆ ಎಂದರು.
ಪ್ಯಾಂಕ್ರಿಯಾಟಿಕ್-ಕಿಡ್ನಿ ಕಸಿ ಕೇವಲ ಕಿಡ್ನಿ ವೈಫಲ್ಯವನ್ನು ತಡೆಯುವುದಲ್ಲದೆ, ಮಧು ಮೇಹ ಹೋಗಲಾಡಿಸಿ ರೋಗಿಯನ್ನು ಇನ್‌ಸುಲಿನ್‌ನಿಂದ ಮುಕ್ತಗೊಳಿಸುತ್ತದೆ. ಪ್ಯಾಂಕ್ರಿಯಾಟಿಕ್ ಕಸಿಯಿಂದ ನರಗಳ ಹಾನಿ, ಕಣ್ಣಿನ ಹಾನಿ ಮತ್ತು ರಕ್ತನಾಳಗಳಿಗೆ ಆಗುವ ಹಾನಿಯನ್ನು ತಪ್ಪಿಸಬಹುದು. ದೇಹದಲ್ಲಿನ ಸಕ್ಕರೆ ಅಂಶ ಸಾಮಾನ್ಯ ಸ್ಥಿತಿಗೆ ಬರುವುದರಿಂದ ಕಸಿ ಮಾಡಿದ ಮೂತ್ರಪಿಂಡ ದೀರ್ಘಕಾಲದವರೆಗೆ ಕಾರ್ಯ ನಿರ್ವಹಿಸಲಿದೆ ಎಂದು ವೈದ್ಯರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X