Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆ್ಯಂಬುಲೆನ್ಸ್‌ಗಾಗಿ ಪರದಾಡಿ ರಾತ್ರಿಯಿಡೀ...

ಆ್ಯಂಬುಲೆನ್ಸ್‌ಗಾಗಿ ಪರದಾಡಿ ರಾತ್ರಿಯಿಡೀ ಆಸ್ಪತ್ರೆಯ ಹೊರಗೆ ಮಗಳ ಶವದೊಂದಿಗೆ ಕಳೆದ ತಾಯಿ

ವಾರ್ತಾಭಾರತಿವಾರ್ತಾಭಾರತಿ4 Sept 2016 11:42 PM IST
share

ಮೀರತ್, ಸೆ.4: ಕಾನಪುರದ ಆಸ್ಪತ್ರೆಯೊಂದರಲ್ಲಿ ತಂದೆಯೋರ್ವ ಗಂಭೀರ ಅನಾರೋಗ್ಯಕ್ಕೊಳಗಾಗಿದ್ದ ತನ್ನ ಮಗನನ್ನು ಹೆಗಲ ಮೇಲೆ ಹೊತ್ತುಕೊಂಡು ವಾರ್ಡ್‌ನಿಂದ ವಾರ್ಡಿಗೆ ಅಲೆದಾಡಿಸಲ್ಪಟ್ಟು ಕೊನೆಗೂ ತನ್ನ ಕರುಳಕುಡಿಯನ್ನು ಕಳೆದುಕೊಂಡ ದಾರುಣ ಘಟನೆ ನೆನಪಿನಿಂದ ಮಾಸುವ ಮುನ್ನವೇ ಮೀರತ್‌ನಲ್ಲಿ ಅಂತಹುದೇ ಇನ್ನೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ತನ್ನ ಎರಡೂವರೆ ವರ್ಷದ ಪುತ್ರಿಯ ಶವವನ್ನು ತನ್ನ ಗ್ರಾಮಕ್ಕೆ ಸಾಗಿಸಲು ಪರದಾಡಿದ ತಾಯಿಯೋರ್ವಳು ಕೊನೆಗೂ ಆ್ಯಂಬುಲೆನ್ಸ್ ದೊರೆಯದೆ ರಾತ್ರಿಯಿಡೀ ಶವದೊಂದಿಗೆ ಜಿಲ್ಲಾಸ್ಪತ್ರೆಯ ತುರ್ತುಚಿಕಿತ್ಸಾ ಘಟಕದ ಹೊರಗೆ ಕಳೆದಿದ್ದಾಳೆ. ಆಕೆಯ ಗ್ರಾಮ ಬೇರೊಂದು ಜಿಲ್ಲೆಯಲ್ಲಿರುವುದರಿಂದ ಆ್ಯಂಬುಲೆನ್ಸ್ ಚಾಲಕರು ಶವ ಸಾಗಿಸಲು ನಿರಾಕರಿಸಿದ್ದರು.

 ಬಾಘಪತ್ ಜಿಲ್ಲೆಯ ಗೌರಿಪುರ ಗ್ರಾಮದ ನಿವಾಸಿ ಇಮ್ರಾನಾಳ ಮಗು ಗುಲ್ನಾದ್ ತೀವ್ರ ಜ್ವರದಿಂದ ಬಳಲುತ್ತಿದ್ದು ಆಕೆಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ರಾತ್ರಿ ಆಕೆಯ ದೇಹಸ್ಥಿತಿ ತೀರ ಹದಗೆಟ್ಟಿದ್ದು, ವೈದ್ಯರು ಇಲ್ಲಿಯ ಲಾಲಾ ಲಜಪತ್ ರಾಯ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಇಮ್ರಾನಾ ಮಗುವನ್ನು ಅಲ್ಲಿಗೆ ಮಗುವನ್ನು ಒಯ್ದಳಾದರೂ ಅದು ದಾರಿಮಧ್ಯೆಯೇ ಕೊನೆಯುಸಿರೆಳೆದಿತ್ತು.
ಮಗಳ ಶವವನ್ನು ಊರಿಗೆ ಒಯ್ಯಲು ಆ್ಯಂಬುಲೆನ್ಸ್‌ಗಾಗಿ ಆಕೆ ಗೋಗರೆದಳೂ, ತಾನು ಬೇರೆ ಜಿಲ್ಲೆಗೆ ಅ್ಯಂಬುಲೆನ್ಸ್ ಒಯ್ಯುವಂತಿಲ್ಲ ಎಂದು ಹೇಳಿ ಚಾಲಕ ನಿರಾಕರಿಸಿದ್ದ.
ಜಿಲ್ಲಾಸ್ಪತ್ರೆಯ ಅಧಿಕಾರಿಗಳು ನೆರವಾಗಬಹುದು ಎಂಬ ನಿರೀಕ್ಷೆಯಿಂದ ಇಮ್ರಾನಾ ಖಾಸಗಿ ಆ್ಯಂಬುಲೆನ್ಸ್‌ಗೆ 200 ರೂ. ನೀಡಿ ಮಗಳ ಶವವನ್ನು ಅಲ್ಲಿಗೆ ಒಯ್ದಿದ್ದಳು. ಆದರೆ ಅಲ್ಲಿಯೂ ಆಕೆಗೆ ಆ್ಯಂಬುಲೆನ್ಸ್ ಸೇವೆಯನ್ನು ನಿರಾಕರಿಸಲಾಗಿತ್ತು. ಖಾಸಗಿ ಆ್ಯಂಬುಲೆನ್ಸ್‌ಗಳು 2,500 ರೂ. ಕೇಳಿದ್ದು ಅಷ್ಟೊಂದು ಹಣ ಆಕೆಯ ಬಳಿಯಿರಲಿಲ್ಲ.
ಹೀಗಾಗಿ ಇಮ್ರಾನಾ ರಾತ್ರಿಯಿಡೀ ಮಗುವಿನ ಶವವನ್ನು ಮಡಿಲಲ್ಲಿಟ್ಟುಕೊಂಡು ತುರ್ತುಚಿಕಿತ್ಸಾ ಘಟಕದ ಹೊರಗೆ ಕಳೆದಿದ್ದಳು.
ಮರುದಿನ ಬೆಳಗ್ಗೆ ಕೆಲವು ಹೃದಯವಂತರು ಆಕೆಯ ಸ್ಥಿತಿಯನ್ನು ಕಂಡು ಮರುಕಗೊಂಡು ಹಣವನ್ನು ಒಟ್ಟುಗೂಡಿಸಿ ಖಾಸಗಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಟ್ಟಿದ್ದರು.
ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ಜಿಲ್ಲಾಧಿಕಾರಿ ಜಗತ್‌ರಾಜ್ ತ್ರಿಪಾಠಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X