Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹಬ್ಬದ ಗದ್ದಲಗಳಲ್ಲಿ ಗಣೇಶನಿಗೆ ಅವಮಾನ

ಹಬ್ಬದ ಗದ್ದಲಗಳಲ್ಲಿ ಗಣೇಶನಿಗೆ ಅವಮಾನ

-ಎಲ್. ಸುಮಿತ್ರಾ, ಬೆಂಗಳೂರು-ಎಲ್. ಸುಮಿತ್ರಾ, ಬೆಂಗಳೂರು4 Sept 2016 11:45 PM IST
share

ಮಾನ್ಯರೆ,

ಗಣೇಶ ಹಬ್ಬ ಹತ್ತಿರ ಬರುತ್ತಿದೆ. ಹಿಂದೆಲ್ಲ ಚೌತಿಯೆಂದರೆ ಮನೆಮನದ ಹಬ್ಬ. ಆದರೆ ಇತ್ತೀಚೆಗೆ ಮುಂಬಯಿ, ಮಹಾರಾಷ್ಟ್ರದ ಪ್ರಭಾವದಿಂದ ಚೌತಿಯೂ ಸಾರ್ವಜನಿಕ ಗದ್ದಲವಾಗಿ ಪರಿಣಮಿಸಿದೆ. ಜೊತೆಗೆ ರಾಜಕೀಯವೂ ಈ ಹಬ್ಬದ ಜೊತೆಗೆ ಕಲಬೆರಕೆಯಾಗಿ, ಹಲವು ಅನಾಹುತಗಳಿಗೂ ಕಾರಣವಾಗುತ್ತಿದೆ. ಸಾರ್ವಜನಿಕ ಮೆರವಣಿಗೆಯ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ದಾಂಧಲೆಗಳನ್ನು ನಡೆಸುತ್ತಾರೆ. ಸಮಾಜದ ಸ್ವಾಸ್ಥವನ್ನು ಕೆಡಿಸಲು ಇದನ್ನು ಬಳಸುತ್ತಾರೆ. ಗಣೇಶ ವಿಘ್ನ ನಿವಾರಕ. ಆದರೆ ಆತನ ಹೆಸರಿನಲ್ಲೇ ಕೆಲವು ವಿಘ್ನಗಳು ಜಾಗೃತಗೊಳ್ಳುತ್ತವೆ.

ಇದೇ ಸಂದರ್ಭದಲ್ಲಿ ಗಣೇಶಹಬ್ಬದ ಹೆಸರಿನಲ್ಲಿ ನಮ್ಮ ಕೆರೆ, ನದಿಗಳನ್ನು ಸರ್ವ ರೀತಿಯಲ್ಲೂ ಕಲುಷಿತಗೊಳಿಸಲಾಗುತ್ತದೆ. ಭಾರತೀಯ ಸಂಸ್ಕೃತಿ ಅದರಲ್ಲೂ ಹಿಂದೂ ಧರ್ಮೀಯರು ನದಿಯನ್ನು, ಕೆರೆಗಳನ್ನು ಪೂಜನೀಯ ಭಾವದಿಂದ ನೋಡುತ್ತಾರೆ. ಆದರೆ ಹಬ್ಬದ ಹೆಸರಿನಲ್ಲಿ ನಾವೇ ಪರಿಸರವನ್ನು ಅದರಲ್ಲೂ ಬದುಕಿಗೆ ಅನಿವಾರ್ಯವಾಗಿರುವ ಕೆರೆಗಳನ್ನು, ನದಿಗಳನ್ನು ಕಲುಷಿತಗೊಳಿಸಿದರೆ ಹೇಗೆ? ಇದು ನಾವು ಗಣೇಶ ಹಬ್ಬಕ್ಕೆ ಮಾಡುವ ಅವಮಾನವಲ್ಲವೇ? ಗಣೇಶ ಹಬ್ಬ ಪ್ರಕೃತಿಗೆ ಸಂಬಂಧಿಸಿದ್ದು. ಪ್ರಕೃತಿಗೆ ಗೌರವ ನೀಡುವುದೇ ಗಣೇಶನಿಗೆ ನೀಡುವ ಗೌರವ. ಹಬ್ಬದ ಗದ್ದಲ ಸಂಭ್ರಮದ ಹೆಸರಲ್ಲಿ ಪ್ರಕೃತಿಯನ್ನು ಅವಮಾನಿಸಿದರೆ, ಅದನ್ನು ಕೆಡಿಸಿದರೆ ಅದರಿಂದ ನಮಗೆ ಖಂಡಿತ ಗಣೇಶ ಒಳಿತನ್ನು ಮಾಡಲಾರ. ಹಾಗೆಯೇ ಗಣೇಶ ಹಬ್ಬ ನಮ್ಮ ಮನಸ್ಸನ್ನು ಒಳ್ಳೆಯದರ ಕಡೆಗೆ ಕೊಂಡು ಹೋಗಬೇಕು. ದ್ವೇಷ ಅಶಾಂತಿ ಅಳಿದು ಅಲ್ಲಿ ಒಳಿತು ಸ್ಥಾಪನೆಯಾಗಬೇಕು. ಈ ನಿಟ್ಟಿನಲ್ಲಿ ಗಣೇಶ ಚತುರ್ಥಿ ಅರ್ಥಪೂರ್ಣವಾಗಿ ಆಚರಣೆಯಾಗಲಿ.

share
-ಎಲ್. ಸುಮಿತ್ರಾ, ಬೆಂಗಳೂರು
-ಎಲ್. ಸುಮಿತ್ರಾ, ಬೆಂಗಳೂರು
Next Story
X