Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಲ್ಲಿ ವರ್ಷಕ್ಕೆ ಎಷ್ಟು ಲಕ್ಷ ನವಜಾತ...

ಭಾರತದಲ್ಲಿ ವರ್ಷಕ್ಕೆ ಎಷ್ಟು ಲಕ್ಷ ನವಜಾತ ಶಿಶುಗಳು ಸಾವೀಗೀಡಾಗುತ್ತಿವೆ ಗೊತ್ತೇ ?

ನಾಚಿಕೆಗೇಡು

ವಾರ್ತಾಭಾರತಿವಾರ್ತಾಭಾರತಿ5 Sept 2016 3:07 PM IST
share
ಭಾರತದಲ್ಲಿ ವರ್ಷಕ್ಕೆ ಎಷ್ಟು ಲಕ್ಷ ನವಜಾತ ಶಿಶುಗಳು ಸಾವೀಗೀಡಾಗುತ್ತಿವೆ ಗೊತ್ತೇ ?

ನೈಜೀರಿಯಕ್ಕಿಂತ ಕೆಟ್ಟದಾಗಿದೆ ನಮ್ಮ ದೇಶದ ಪರಿಸ್ಥಿತಿ

ಕೊಲಂಬೊ,ಸೆಪ್ಟಂಬರ್ 5: ಆವಶ್ಯಕ ಚಿಕಿತ್ಸೆ ಮತ್ತು ಉಪಚಾರ ಸಿಗದ ಹಿನ್ನೆಲೆಯಲ್ಲಿ ಜಗತ್ತಿನಲ್ಲಿ ಒಂದುವರ್ಷದಲ್ಲಿ 55 ಲಕ್ಷ ಶಿಶುಗಳು ಸಾವನ್ನಪ್ಪುತ್ತಿವೆ. ಕೊಲಂಬೊದಲ್ಲಿ ನಡೆದ ಜಾಗತಿಕಾರೋಗ್ಯ ಸಂಘಟನೆಯ ಪ್ರತಿನಿಧಿಗಳ ರೀಜನಲ್ ಸಮಿತಿ ಸಭೆಯಲ್ಲಿ ಈ ಆಘಾತಕಾರಿ ಸತ್ಯ ಬಹಿರಂಗವಾಗಿದೆ. ಮುಖ್ಯವಾಗಿ ಬೆಳವಣಿಗೆ ಕುಂಠಿತ, ಹುಟ್ಟುವಾಗಿನ ಪ್ರತಿಕೂಲ ಸ್ಥಿತಿ, ವೈರಸ್ ಬಾಧೆ ಮುಂತಾದ ಕಾರಣದಿಂದ ಹುಟ್ಟುವ ಮೊದಲು, ಹುಟ್ಟಿದ 28 ದಿವಸಗಳಿಗಿಂತ ಮೊದಲು ನವಜಾತ ಶಿಶುಗಳು ಸಾವಿಗೆ ಶರಣಾಗುತ್ತಿವೆ. ಸರಿಯಾದ ಚಿಕಿತ್ಸೆ ಉಪಚಾರ ನೀಡಿದ್ದೇ ಆದರೆ ಇಂತಹ ಮೂರು ಲಕ್ಷ ಮಕ್ಕಳನ್ನಾದರೂ ರಕ್ಷಿಸಲು ಸಾಧ್ಯವಿದೆ ಎಂದು ಸಭೆಯಲ್ಲಿ ಪ್ರತಿನಿಧಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಾಯಿ-ಶಿಶು ಸಾವು, ಝಿಕಾ ವೈರಸ್ ಪ್ರತಿರೋಧಕ್ಕೆ ಶೀಘ್ರ ಕ್ರಮ, ಜಗತ್ತಿನ ವಿವಿಧ ಕಡೆಗಳಲ್ಲಿ ಬಡಕುಟುಂಬದ ಶಿಶುಗಳಿಗೆ ಅಂಟುತ್ತಿರುವ ಸಾಂಕ್ರಾಮಿಕ ರೋಗಗಳನ್ನು ತಡೆಯುವುದು ಜಾಗತಿಕ ಆರೋಗ್ಯಸಂಘಟನೆಯ ಪ್ರತಿನಿಧಿಗಳ ಐದು ದಿವಸಗಳ ಸಭೆಯ ಮುಖ್ಯ ಅಜೆಂಡಾವಾಗಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನೆಡ್ಡಾ ಸಹಿತ ಹದಿನೊಂದು ದೇಶಗಳ ಆರೋಗ್ಯ ಸಚಿವರುಸಭೆಯಲ್ಲಿ ಭಾಗವಹಿಸಿದ್ದಾರೆ.

ಶಿಶುಮರಣಗಳಲ್ಲಿ ಅರ್ಧಾಂಶಕ್ಕೂ ಹೆಚ್ಚು ಭಾರತ ಸಹಿತ ಐದುರಾಷ್ಟ್ರಗಳಲ್ಲಿ ಸಂಭವಿಸುತ್ತಿವೆ. ಇವುಗಳಲ್ಲಿ ಅತೀ ಹೆಚ್ಚು ಶಿಶುಗಳ ಸಾವು ಭಾರತದಲ್ಲಿಯೇ ನಡೆಯುತ್ತಿವೆ.ನೈಜೀರಿಯ ಎರಡನೆ ಸ್ಥಾನದಲ್ಲಿದೆ. ಭಾರತದಲ್ಲಿ ವರ್ಷದಲ್ಲಿ 7.79 ಲಕ್ಷ ಶಿಶುಗಳ ಸಾವು ಸಂಭವಿಸುತ್ತಿವೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ. ನೈಜೀರಿಯಾದಲ್ಲಿ(2.76ಲಕ್ಷ), ಪಾಕಿಸ್ತಾನದಲ್ಲಿ(2.02ಲಕ್ಷ),ಚೀನ(1.57ಲಕ್ಷ), ಕಾಂಗೊ(1.18ಲಕ್ಷ) ಇತರ ಅತಿಹೆಚ್ಚು ಶಿಶು ಮರಣ ಸಂಭವಿಸುವ ರಾಷ್ಟ್ರಗಳೆಂದು ಸಭೆಯಲ್ಲಿಪ್ರಸ್ತಾವವಾಗಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X