Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಲಯಾಳ ಮನೋರಮಾಕ್ಕೆ ಕಚ್ಚಿದ ಬೀದಿ ನಾಯಿ...

ಮಲಯಾಳ ಮನೋರಮಾಕ್ಕೆ ಕಚ್ಚಿದ ಬೀದಿ ನಾಯಿ ಹಾವಳಿಯ ನಕಲಿ ಫೋಟೋ

ವಾರ್ತಾಭಾರತಿವಾರ್ತಾಭಾರತಿ5 Sept 2016 8:38 PM IST
share
ಮಲಯಾಳ ಮನೋರಮಾಕ್ಕೆ ಕಚ್ಚಿದ ಬೀದಿ ನಾಯಿ ಹಾವಳಿಯ ನಕಲಿ ಫೋಟೋ

ತಿರುವನಂತಪುರ,ಸೆ.5: ಕೇರಳದ ಅಗ್ರಗಣ್ಯ ಪತ್ರಿಕೆಯಾದ ಮಲಯಾಳ ಮನೋರಮಾ ಇದೀಗ ಬೀದಿ ನಾಯಿ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿದೆ. ಪತ್ರಿಕೆಯ ಆಗಸ್ಟ್ 31ರ ಸಂಚಿಕೆಯಲ್ಲಿ ಮಹಿಳೆಯೊಬ್ಬರ ಮೇಲೆ ಬೀದಿ ನಾಯಿಗಳು ದಾಳಿ ಮಾಡುತ್ತಿರುವ ಚಿತ್ರ ಪ್ರಕಟವಾಗಿತ್ತು. ಆದರೆ ಅದು ನಕಲಿ ಫೋಟೊ ಎನ್ನುವುದು ಈಗ ಬಹಿರಂಗವಾಗಿದೆ.

ಪಾಲಕ್ಕಾಡ್ ಜಿಲ್ಲೆಯ ಮನ್ನಾರ್‌ಕಾಡು ದೇವಸ್ಥಾನ ಸಮೀಪ ಈ ಘಟನೆ ನಡೆದಿದೆ ಎಂದು ವರದಿ ಮಾಡಿತ್ತು. "ಗೃಹಿಣಿಯೊಬ್ಬರ ಮೇಲೆ ಅರಕ್ಕುರುಶಿ ದೇವಸ್ಥಾನದ ಬಳಿ ಬೀದಿ ನಾಯಿಗಳು ದಾಳಿ ಮಾಡಿದವು. ಆಕೆಯ ಬೊಬ್ಬೆ ಕೇಳಿ ಸ್ಥಳೀಯರು ಬಂದು ಆಕೆಯನ್ನು ರಕ್ಷಿಸಿದರು. 8-10 ಬೀದಿನಾಯಿಗಳು ಸದಾ ಇಲ್ಲಿ ರಸ್ತೆ ಮೇರಿರುತ್ತವೆ. ಮಕ್ಕಳು ಮಾತ್ರವಲ್ಲ; ದೊಡ್ಡವರು ಕೂಡಾ ರಸ್ತೆ ಮೇಲೆ ನಡೆಯಲು ಭೀತಿಪಡುವ ಪರಿಸ್ಥಿತಿ ಇದೆ" ಎಂದು ಚಿತ್ರಶೀರ್ಷಿಕೆ ಪ್ರಕಟವಾಗಿತ್ತು.

ಈ ಚಿತ್ರವನ್ನು ನೋಡಿದ ಅರಕ್ಕುರುಶಿ ಭಗವತಿ ದೇವಸ್ಥಾನದ ಅರ್ಚಕ ಶ್ರೀಕುಮಾರ್, ಇಲ್ಲಿ ಬೀದಿನಾಯಿಗಳು ಇವೆಯಾದರೂ, ಕಳೆದ ಒಂದು ವರ್ಷದಲ್ಲಿ ನಾಯಿ ಕಚ್ಚಿದ ಘಟನೆ ನಡೆದಿಲ್ಲ ಎಂದು ಆಕ್ಷೇಪಿಸಿದ್ದರು. ಈ ಚಿತ್ರದಲ್ಲಿ ದೇವಸ್ಥಾನದ ಹುಂಡಿ ಕಾಣುತ್ತಿದ್ದು, ಈಗ ಹುಂಡಿ ಕೇಸರಿ ಬಣ್ಣ ಹೊಂದಿಲ್ಲ. ಅಂತೆಯೇ ಚಿತ್ರದಲ್ಲಿ ಕಾಣುವ ಫ್ಲೆಕ್ಸ್ ಕಳೆದ ವರ್ಷದ ಗಣೇಶೋತ್ಸವದ್ದು ಎಂದು ಪತ್ತೆ ಮಾಡಿದ್ದಾರೆ.

ಕಳೆದ ವರ್ಷದ ಫೋಟೊವನ್ನು ತಿದ್ದಿ, ಪ್ರಕಟಿಸಲಾಗಿದೆ ಎಂದು ಅವರು ಆಪಾದಿಸಿದ್ದಾರೆ. ಈ ಚಿತ್ರದಲ್ಲಿ ಕಾಣುತ್ತಿರುವ ಮಹಿಳೆ ದೇವಸ್ಥಾನದ ಕೆಲಸದಾಕೆ. ಆಕೆಯನ್ನು ಚಿತ್ರದಲ್ಲಿ ನೋಡಿದ ತಕ್ಷಣ ಈ ಬಗ್ಗೆ ಆಕೆಯನ್ನು ವಿಚಾರಿಸಿದ್ದೆ. ಕಳೆದ ವರ್ಷ ದೇವಸ್ಥಾನಕ್ಕೆ ಬರುವಾಗ ಬಿದ್ದಾಗ ತೆಗೆದ ಚಿತ್ರ ಎಂದು ಸ್ಪಷ್ಟಪಡಿಸಿದ್ದಾಗಿ ವಿವರಿಸಿದ್ದಾರೆ.

ದೇವಾಲಯದಲ್ಲಿ ಅಂದು ನಡೆದ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡ ಒಬ್ಬರು ಈ ಚಿತ್ರವನ್ನು ಕ್ಲಿಕ್ಕಿಸಿ ಸ್ಟುಡಿಯೊಗೆ ನೀಡಿದ್ದಾರೆ. ಅದನ್ನು ಈಗ ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ ಎನ್ನುವುದು ಅವರ ವಾದ.

ಇದು ವಿವಾದಕ್ಕೆ ತಿರುಗುತ್ತಿದ್ದಂತೆ ಪತ್ರಿಕೆ ಸ್ಥಳೀಯ ಮುದ್ರಣದಲ್ಲಿ ಸ್ಪಷ್ಟನೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X