Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬುಧವಾರ ಪ್ಯಾರಾಲಿಂಪಿಕ್ ಗೇಮ್ಸ್ ಆರಂಭ

ಬುಧವಾರ ಪ್ಯಾರಾಲಿಂಪಿಕ್ ಗೇಮ್ಸ್ ಆರಂಭ

ಭಾರತದಿಂದ ಗರಿಷ್ಠ ಸ್ಪರ್ಧಿಗಳು ಕಣಕ್ಕೆ

ವಾರ್ತಾಭಾರತಿವಾರ್ತಾಭಾರತಿ6 Sept 2016 11:06 PM IST
share
ಬುಧವಾರ ಪ್ಯಾರಾಲಿಂಪಿಕ್ ಗೇಮ್ಸ್ ಆರಂಭ

ರಿಯೋ ಡಿ ಜನೈರೊ, ಸೆ.6: ಪ್ಯಾರಾಲಿಂಪಿಕ್ ಗೇಮ್ಸ್ ಬುಧವಾರ ಬ್ರೆಝಿಲ್‌ನಲ್ಲಿ ಆರಂಭವಾಗಲಿದೆ. ಈ ಬಾರಿ ಗರಿಷ್ಠ ಸಂಖ್ಯೆಯ ಅಥ್ಲೀಟ್‌ಗಳು ಭಾರತವನ್ನು ಪ್ರತಿನಿಧಿಸಲಿದ್ದು, ಪದಕಗಳ ಸಂಖ್ಯೆ ಹೆಚ್ಚಿಸುವ ವಿಶ್ವಾಸ ಮೂಡಿಸಿದ್ದಾರೆ.

ಸೆ.7ರಿಂದ 18ರ ತನಕ ನಡೆಯಲಿರುವ ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಭಾರತದ ಒಟ್ಟು 19 ಅಥ್ಲೀಟ್‌ಗಳು 10 ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

ಭಾರತ ತಂಡದಲ್ಲಿ 2004ರ ಅಥೆನ್ಸ್ ಗೇಮ್ಸ್‌ನಲ್ಲಿ ಭಾರತಕ್ಕೆ ಪ್ಯಾರಾಲಿಂಪಿಕ್ಸ್‌ನಲ್ಲಿ ಮೊತ್ತ ಮೊದಲ ಬಾರಿ ಚಿನ್ನದ ಪದಕ ಗೆದ್ದುಕೊಟ್ಟಿದ್ದ ದೇವೇಂದ್ರ ಝಜಾರಿಯಾ ಅವರಿದ್ದಾರೆ. ಈ ಬಾರಿ ಅವರು ಜಾವೆಲಿನ್ ಎಸೆತದಲ್ಲಿ ಪದಕ ಗೆಲ್ಲುವತ್ತ ಚಿತ್ತವಿರಿಸಿದ್ದಾರೆ.

2016ರ ಪ್ಯಾರಾಲಿಂಪಿಕ್ಸ್‌ನಲ್ಲಿ ವಿಶ್ವದ 4,300 ಅಥ್ಲೀಟ್‌ಗಳು 23 ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕಕ್ಕಾಗಿ ಹೋರಾಟ ನಡೆಸಲಿದ್ದಾರೆ.

ಈ ಬಾರಿಯ ಗೇಮ್ಸ್‌ನಲ್ಲಿ ಆರ್ಚರಿ, ಅಥ್ಲೆಟಿಕ್ಸ್, ಸೈಕ್ಲಿಂಗ್, ಕುದುರೆ ಸವಾರಿ, ಸಣ್ಣದೋಣಿ ಸ್ಪರ್ಧೆ, ಫುಟ್ಬಾಲ್(5 ಹಾಗೂ 7 ಆಟಗಾರರಿರುವ ತಂಡ), ಗೋಲ್‌ಬಾಲ್, ಜುಡೊ, ಪ್ಯಾರಾ-ಟ್ರ್ರಿಯಾಥ್ಲಾನ್, ಪವರ್‌ಲಿಫ್ಟಿಂಗ್, ರೋವಿಂಗ್, ಸೈಲಿಂಗ್, ಶೂಟಿಂಗ್, ಸ್ವಿಮ್ಮಿಂಗ್, ಟೇಬಲ್ ಟೆನಿಸ್, ವಾಲಿಬಾಲ್, ವೀಲ್‌ಚೇರ್ ಬಾಸ್ಕೆಟ್‌ಬಾಲ್, ವೀಲ್‌ಚೇರ್ ಫೆನ್ಸಿಂಗ್, ವೀಲ್‌ಚೇರ್ ಟೆನಿಸ್, ವೀಲ್‌ಚೇರ್ ರಗ್ಬಿಯಲ್ಲದೆ, ಕಾಯಕ್-ದೋಣಿ ಸ್ಪರ್ಧೆ ಹಾಗೂ ಟ್ರಿಯಾಥ್ಲಾನ್ ಈ ಬಾರಿ ಪ್ಯಾರಾಲಿಂಪಿಕ್ಸ್‌ನಲ್ಲಿ ಮೊದಲ ಬಾರಿ ಕಾಣಿಸಿಕೊಳ್ಳಲಿವೆ.

ಭಾರತ ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಈ ತನಕ ಒಟ್ಟು 8 ಪದಕಗಳನ್ನು ಜಯಿಸಿದೆ. ಇದರಲ್ಲಿ 2 ಚಿನ್ನ, 3 ಬೆಳ್ಳಿ ಹಾಗೂ ಮೂರು ಕಂಚಿನ ಪದಕಗಳಿವೆ. ಈ ಪೈಕಿ ಒಂದು ಚಿನ್ನ, ಮೂರು ಬೆಳ್ಳಿ ಹಾಗು ಎರಡು ಕಂಚಿನ ಪದಕಗಳನ್ನು ಅಥ್ಲೆಟಿಕ್ಸ್ ವಿಭಾಗದಲ್ಲಿ ಜಯಿಸಿದೆ. ಸ್ವಿಮ್ಮಿಂಗ್ ಹಾಗೂ ಪವರ್‌ಲಿಫ್ಟಿಂಗ್‌ನಲ್ಲಿ ಕ್ರಮವಾಗಿ ತಲಾ ಒಂದು ಚಿನ್ನ ಹಾಗೂ ಕಂಚಿನ ಪದಕ ಜಯಿಸಿದೆ.

ಭಾರತದ ಪ್ಯಾರಾಲಿಂಪಿಕ್ಸ್ ತಂಡ:

 ಪುರುಷರು: ಮರಿಯಪ್ಪನ್ ತಂಗವೇಲು(ಹೈಜಂಪ್), ವರುಣ್ ಸಿಂಗ್(ಹೈಜಂಪ್), ಶರದ್ ಕುಮಾರ್(ಹೈಜಂಪ್), ರಾಂಪಾಲ್ ಚಾಹರ್(ಹೈಜಂಪ್), ಸುಂದರ್ ಸಿಂಗ್ ಗುರ್ಜರ್(ಜಾವೆಲಿನ್ ಎಸೆತ), ದೇವೇಂದ್ರ ಝಜಾರಿಯಾ(ಜಾವೆಲಿನ್ ಎಸೆತ), ರಿಂಕು(ಜಾವೆಲಿನ್ ಎಸೆತ), ನರೇಂದ್ರ ರಣಬೀರ್(ಜಾವೆಲಿನ್ ಎಸೆತ), ಸಂದೀಪ್(ಜಾವೆಲಿನ್ ಎಸೆತ), ಅಮಿತ್ ಕುಮಾರ್ (ಕ್ಲಬ್ ಥ್ರೊ), ಧರ್ಮಬೀರ್(ಕ್ಲಬ್ ಥ್ರೊ), ಅಂಕುರ್ ಧಾಮಾ(1,500 ಮೀ.), ಬಾಷಾ ಫರ್ಮನ್(ಪವರ್‌ಲಿಫ್ಟಿಂಗ್), ಸುಯಾಶ್ ನಾರಾಯಣ್ ಜಾಧವ್(ಸ್ವಿಮ್ಮಿಂಗ್), ನರೇಶ್ ಕುಮಾರ್ ಶರ್ಮ(ಶೂಟಿಂಗ್) ವೀರೇಂದ್ರ ಧಂಕಾ(ಜಾವೆಲಿನ್, ಶಾಟ್‌ಪುಟ್).

ಮಹಿಳೆಯರು: ಪೂಜಾ(ಆರ್ಚರಿ), ದೀಪಾ ಮಲಿಕ್(ಶಾಟ್‌ಪುಟ್), ಕರಮ್‌ಜ್ಯೋತಿ ದಲಾಲ್(ಡಿಸ್ಕಸ್).

ಪದಕ ವಿಜೇತರಾಗುವ ಭಾರತದ ಪ್ಯಾರಾಲಿಂಪಿಯನ್‌ಗೆ ಕ್ರೀಡಾ ಸಚಿವಾಲಯ ಬಹುಮಾನ ಘೋಷಣೆ

   ಹೊಸದಿಲ್ಲಿ, ಸೆ.6: ರಿಯೋಡಿ ಜನೈರೊದಲ್ಲಿ ಬುದವಾರ ಆರಂಭವಾಗಲಿರುವ ಪ್ಯಾರಾಲಿಂಪಿಕ್ಸ್ ಗೇಮ್ಸ್‌ನಲ್ಲಿ ಪದಕ ಗೆಲ್ಲಲಿರುವ ಅಥ್ಲೀಟ್‌ಗಳಿಗೆ ಕ್ರೀಡಾ ಸಚಿವಾಲಯ ಬಹುಮಾನ ನೀಡಲು ನಿರ್ಧರಿಸಿದೆ. ಕಳೆದ ತಿಂಗಳು ನಡೆದ ಒಲಿಂಪಿಕ್ ಗೇಮ್ಸ್‌ನಲ್ಲಿ ಪದಕ ವಿಜೇತರಿಗೆ ನೀಡಿದ್ದಷ್ಟೇ ಬಹುಮಾನ ಮೊತ್ತವನ್ನು ಪ್ಯಾರಾಲಿಂಪಿಯನ್‌ಗೂ ಸರಕಾರ ಘೋಷಿಸಿದೆ.

‘‘ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವವರಿಗೆ 75 ಲಕ್ಷ ರೂ., ಬೆಳ್ಳಿ ಪದಕ ಗೆಲ್ಲುವವರಿಗೆ 50 ಲಕ್ಷ ರೂ. ಹಾಗೂ ಕಂಚಿನ ಪದಕ ಗೆಲ್ಲುವವರಿಗೆ 30 ಲಕ್ಷ ರೂ. ನಗದು ಬಹುಮಾನವನ್ನು ಕ್ರೀಡಾ ಸಚಿವಾಲಯ ನೀಡಲಿದೆ’’ ಎಂದು ಸಚಿವಾಲಯ ತನ್ನ ಅಧಿಕೃತ ಟ್ವಿಟರ್‌ನಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X