Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜೀನಾಮೆ ನೀಡುವುದಿಲ್ಲ, ರಾಷ್ಟ್ರಪತಿಗಳೇ...

ರಾಜೀನಾಮೆ ನೀಡುವುದಿಲ್ಲ, ರಾಷ್ಟ್ರಪತಿಗಳೇ ವಜಾಗೊಳಿಸಲಿ

ಅರುಣಾಚಲ ರಾಜ್ಯಪಾಲ

ವಾರ್ತಾಭಾರತಿವಾರ್ತಾಭಾರತಿ6 Sept 2016 11:55 PM IST
share

ಗುವಾಹಟಿ, ಸೆ.6: ಅರುಣಾಚಲ ಪ್ರದೇಶದ ರಾಜ್ಯಪಾಲ ಜ್ಯೋತಿಪ್ರಸಾದ ರಾಜಖೋವಾ ಅವರು ತನ್ನ ಹುದ್ದೆಗೆ ರಾಜೀನಾಮೆ ನೀಡಲು ನಿರಾಕರಿಸಿದ್ದು, ರಾಷ್ಟ್ರಪತಿಗಳೇ ತನ್ನನ್ನು ವಜಾಗೊಳಿಸಲಿ ಎಂದು ಹೇಳಿದ್ದಾರೆ. ‘ಅನಾರೋಗ್ಯದ ಕಾರಣ’ಗಳನ್ನು ನೀಡಿ ರಾಜೀನಾಮೆ ಸಲ್ಲಿಸುವಂತೆ ಕೇಂದ್ರವು ಅವರಿಗೆ ಸೂಚಿಸಿದೆ ಎನ್ನಲಾಗಿದೆ.

ರವಿವಾರ ಇಲ್ಲಿಯ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ರಾಜಖೋವಾ, ರಾಷ್ಟ್ರಪತಿಗಳು ತಮ್ಮ ಅಸಂತುಷ್ಟಿಯನ್ನು ವ್ಯಕ್ತಪಡಿಸಲಿ. ತನ್ನ ವಜಾಕ್ಕೆ ಸರಕಾರವು ಸಂವಿಧಾನದ 156ನೆ ವಿಧಿಯನ್ನು ಬಳಸಿಕೊಳ್ಳಲಿ ಎಂದರು.
ಕೆಲವು ವಾರಗಳ ಹಿಂದೆ ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರಕಾರವನ್ನು ಮರುಸ್ಥಾಪಿಸಿದ್ದ ಸರ್ವೋಚ್ಚ ನ್ಯಾಯಾಲಯವು ಅದರ ಪತನಕ್ಕೆ ಕಾರಣವಾಗಿದ್ದ ರಾಜ್ಯಪಾಲ ರಾಜಖೋವಾ ಅವರ ಎಲ್ಲ ನಿರ್ಧಾರಗಳನ್ನು ರದ್ದುಗೊಳಿಸಿತ್ತಲ್ಲದೆ, ಅವರಿಗೆ ಛೀಮಾರಿಯನ್ನೂ ಹಾಕಿತ್ತು.
 ಅನಾರೋಗ್ಯದಿಂದ ತಾನು ಸಂಪೂರ್ಣ ವಾಗಿ ಚೇತರಿಸಿಕೊಂಡಿದ್ದು, ಆ.13ರಿಂದ ಕರ್ತವ್ಯಕ್ಕೆ ಮತ್ತೆ ಹಾಜರಾಗಿದ್ದೇನೆ. ತಾನು ಹುದ್ದೆಯನ್ನು ತೊರೆಯಬೇಕೆಂದು ಪ್ರಧಾನಿ ಮತ್ತು ಅವರ ಸಂಪುಟ ಬಯಸಿದ್ದರೆ ಅವರು ಅದನ್ನು ರಾಷ್ಟ್ರಪತಿಗಳಿಗೆ ತಿಳಿಸಬೇಕು ಮತ್ತು ಆಗ ಅವರು ಸಂವಿಧಾನದ ನಿರ್ದಿಷ್ಟ ನಿಯಮದಡಿ ಆದೇಶವನ್ನು ಹೊರಡಿಸುತ್ತಾರೆ. ಸರಕಾರದ ನಾಲ್ಕನೆ ದರ್ಜೆಯ ನೌಕರನನ್ನು ವಜಾಗೊಳಿಸಬೇಕಿದ್ದರೂ ಸರಕಾರ ಲಿಖಿತವಾಗಿ ತಿಳಿಸುತ್ತದೆ. ತಾನು ರಾಜ್ಯಪಾಲನಾಗಿದ್ದೇನೆ ಮತ್ತು ಇದು ಸಾಂವಿಧಾನಿಕ ಹುದ್ದೆಯಾಗಿದೆ ಎಂದು ರಾಜಖೋವಾ ಹೇಳಿದರು.
ಆ.27ರಂದು ರಾತ್ರಿ ಗುವಾಹಟಿಯ ಗಣ್ಯವ್ಯಕ್ತಿಯೋರ್ವರು ತನಗೆ ಕರೆ ಮಾಡಿ ಆರೋಗ್ಯದ ಕಾರಣ ನೀಡಿ, ತಾನು ರಾಜೀನಾಮೆ ಸಲ್ಲಿಸಬೇಕು ಎಂದು ಸರಕಾರವು ಬಯಸಿದೆ ಎಂದು ತಿಳಿಸಿದ್ದರು. ಆಘಾತಗೊಂಡ ತಾನು ತನ್ನ ರಾಜೀನಾಮೆಯನ್ನು ಬಯಸಿರುವ ವ್ಯಕ್ತಿ ತನಗೇ ನೇರವಾಗಿ ಕರೆ ಮಾಡಲಿ ಎಂದು ಅವರಿಗೆ ತಿಳಿಸಿದ್ದೆ. ಆದರೆ ಅಂತಹ ಯಾವುದೇ ಕರೆ ಬಾರದಿದ್ದಾಗ ತಾನು ಗೃಹಸಚಿವ ರಾಜನಾಥ ಸಿಂಗ್ ಅವರಿಗೆ ಕರೆ ಮಾಡಿ ಈ ಸುದ್ದಿ ನಿಜವೇ ಎಂದು ಪ್ರಶ್ನಿಸಿದ್ದೆ. ಆದರೆ ಆ ಬಗ್ಗೆ ತನಗೇನೂ ಗೊತ್ತಿಲ್ಲವೆಂದು ಹೇಳಿದ್ದ ಅವರು ತನ್ನ ಕಾರ್ಯ ನಿರ್ವಹಣೆಯನ್ನು ಪ್ರಶಂಸಿಸಿದ್ದರು. ಆದರೆ ತಾನು ಇನ್ನೋರ್ವ ಕೇಂದ್ರ ಸಚಿವರಿಗೆ ಕರೆ ಮಾಡಿದ್ದೆ ಮತ್ತು ಆ.30ರಂದು ತನಗೆ ವಾಪಸ್ ಕರೆ ಮಾಡಿದ್ದ ಅವರು ಉನ್ನತ ಮಟ್ಟದಲ್ಲಿ ನಿರ್ಧಾರವಾಗಿದೆ ಮತ್ತು ಆ.31ರೊಳಗೆ ಹುದ್ದೆಯನ್ನು ತೆರವುಗೊಳಿಸುವಂತೆ ತಿಳಿಸಿದ್ದರು ಎಂದು ಅವರು ವಿವರಿಸಿದರು.
ತನ್ನ ಸುದೀರ್ಘ ವೃತ್ತಿಜೀವನದಲ್ಲಿ ಒಂದೇ ಒಂದು ಕಳಂಕವಿಲ್ಲ. ರಾಜ್ಯಪಾಲ ಹುದ್ದೆಗಾಗಿ ಪ್ರಧಾನಿ ಅಥವಾ ಸ್ಥಳೀಯ ಮಟ್ಟದಲ್ಲಿ ಯಾವುದೇ ಬಿಜೆಪಿ ನಾಯಕನ್ನು ತಾನು ಸಂಪರ್ಕಿಸಿರಲಿಲ್ಲ. ಕೇಂದ್ರದ ನಿರ್ಧಾರ ತನಗೆ ಅವಮಾನವನ್ನುಂಟು ಮಾಡಿದೆ ಎಂದ ಅವರು, ತನ್ನನ್ನು ವಜಾಗೊಳಿಸಿ ರಾಷ್ಟ್ರಪತಿಗಳ ಆದೇಶ ಕೈ ಸೇರಿದ ತಕ್ಷಣ ರಾಜಭವನವನ್ನು ಖಾಲಿ ಮಾಡುವುದಾಗಿ ಹೇಳಿದರು.
ರಾಜಖೋವಾ ಈ ಹಿಂದೆ ಅಸ್ಸಾಂ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X