Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ...

ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿಕೊಟ್ಟ 8 ಮುಸ್ಲಿಂ ಯುವಕರು

ವಾರ್ತಾಭಾರತಿವಾರ್ತಾಭಾರತಿ7 Sept 2016 9:57 AM IST
share
ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿಕೊಟ್ಟ 8 ಮುಸ್ಲಿಂ ಯುವಕರು

ಮುಂಬೈ,ಸೆ.7: ಥಾಣೆ ಜಿಲ್ಲೆಯ ಕೌಸಾ ಗ್ರಾಮದಲ್ಲಿ ಇತ್ತೀಚೆಗೆ ನಡುರಾತ್ರಿಯಲ್ಲಿ ಮೃತಪಟ್ಟ ಹಿಂದೂ ವ್ಯಕ್ತಿಯೊಬ್ಬನ ಅಂತ್ಯಕ್ರಿಯೆ ನಡೆಸಿಕೊಟ್ಟ ಎಂಟು ಮುಸ್ಲಿಂ ಯುವಕರು ಮತೀಯ ಸಾಮರಸ್ಯದ ಸಂಕೇತವಾಗಿ ಹೊರಹೊಮ್ಮಿ ಅಸಹಿಷ್ಣುತೆಯ ಹಲವು ಘಟನೆಗಳಿಂದ ತತ್ತರಿಸಿರುವ ದೇಶದಲ್ಲಿ ಬೆಳ್ಳಿ ಚುಕ್ಕೆಗಳಾಗಿ ಮೂಡಿದ್ದಾರೆ.

65 ವರ್ಷದ ವಮನ್ ಕದಮ್ ಇತ್ತೀಚೆಗೆ ಮೃತಪಟ್ಟಾಗ ಆತನ ಅಂತ್ಯಕ್ರಿಯೆ ನಡೆಸಲು ಆತನ ಪತ್ನಿಯಲ್ಲದೆ ಬೇರಾರೂ ಇರಲಿಲ್ಲ. ಇದನ್ನು ತಿಳಿದು ಸಹಾಯಕ್ಕೆ ಧಾವಿಸಿದ ಮುಂಬ್ರಾದ ಎಂಟು ಮಂದಿ ಮುಸ್ಲಿಂ ಯುವಕರು ತಾವು ಕದಮ್ ಅವರ ಅಂತ್ಯಕ್ರಿಯೆ ನೆರವೇರಿಸುವುದಾಗಿ ಹೇಳಿ ಅದಕ್ಕೆ ಅಗತ್ಯವಿರುವ ಹಗ್ಗ, ಮಡಿಕೆ, ಬಿದಿರಿನ ಕೋಲು, ಅಗರಬತ್ತಿ, ಬಟ್ಟೆ ಹಾಗೂ ಚಾಪೆಯನ್ನು ಖರೀದಿಸಿ ನಂತರ ಕದಮ್ ಅವರ ಮೃತದೇಹವನ್ನು ತಮ್ಮ ಹೆಗಲಲ್ಲಿ ಹೊತ್ತು ರುದ್ರಭೂಮಿಗೆ ತೆರಳಿ ಮುಂಜಾನೆ 3 ಗಂಟೆ ಸುಮಾರಿಗೆ ಹಿಂದೂ ಪದ್ಧತಿಯಂತೆ ಅಂತ್ಯಕ್ರಿಯೆ ನೆರವೇರಿಸಿದರು.

ಈ ಯುವಕರ ಮಾನವೀಯತೆಯನ್ನು ಕೊಂಡಾಡಿ, ಮುಂಬ್ರಾ-ಕಲ್ವಾ ಶಾಸಕ ಜಿತೇಂದ್ರ ಅವ್ಹದ್ ತಮ್ಮ ಫೇಸ್ ಬುಕ್ ಪುಟದಲ್ಲಿ ಚಿತ್ರವೊಂದನ್ನು ಪೋಸ್ಟ್ ಮಾಡಿದ್ದಾರೆ. ‘‘ದ್ವೇಷ ಕೆಲಸ ಮಾಡುವುದಿಲ್ಲ. ಮುಂಬ್ರಾದಲ್ಲಿ ಸಹೋದರತೆ ಸಾರುವ ಘಟನೆಗಳು ಪ್ರತಿ ನಿತ್ಯ ನಡೆಯುತ್ತದೆ,’’ ಎಂದು ಅವರು ಬರೆದಿದ್ದಾರೆ. ಮುಂಬ್ರಾ ಮುಸ್ಲಿಂ ಬಾಹುಳ್ಯ ಪ್ರದೇಶವೆಂಬುದನ್ನು ಇಲ್ಲಿ ಸ್ಮರಿಸಬಹುದು.

ಈ ಅಪರೂಪದ ಕೈಂಕರ್ಯ ನಡೆಸಿದ ಮುಸ್ಲಿಂ ಯುವಕರನ್ನು ಖಲೀಲ್ ಪಾವ್ನೆ, ಫಹದ್ ದಾಬಿರ್, ನವಾರ್ ದಾಬಿರ್, ರಾಹಿಲ್ ದಾಬಿರ್, ಶಬಾನ್ ಖಾನ್, ಮಕ್ಸೂದ್ ಖಾನ್, ಫಾರೂಕ್ ಖಾನ್ ಹಾಗೂ ಮುಹಮ್ಮದ್ ಕಸಮ್ ಶೇಖ್ ಎಂದು ಗುರುತಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X