Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಪ್ಪೆಪದವಿನ ಮಹಿಳೆ ತಂಜಾವೂರಿನಲ್ಲಿ...

ಕುಪ್ಪೆಪದವಿನ ಮಹಿಳೆ ತಂಜಾವೂರಿನಲ್ಲಿ ಅಪಘಾತಕ್ಕೆ ಬಲಿ

ವಾರ್ತಾಭಾರತಿವಾರ್ತಾಭಾರತಿ7 Sept 2016 11:28 AM IST
share
ಕುಪ್ಪೆಪದವಿನ ಮಹಿಳೆ ತಂಜಾವೂರಿನಲ್ಲಿ ಅಪಘಾತಕ್ಕೆ ಬಲಿ

ಬಂಟ್ವಾಳ, ಸೆ. 7: ತಮಿಳುನಾಡಿನ ತಂಜಾವೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಇನ್ನೋವ ಕಾರೊಂದು ರಸ್ತೆ ಬದಿಯಿದ್ದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂಡುಬಿದಿರೆ ಸಮೀಪದ ಕುಪ್ಪೆಪದವಿನ ಮಹಿಳೆಯೋರ್ವಳು ಮೃತಪಟ್ಟು ಒಂದೇ ಕುಟುಂಬದ 7 ಮಂದಿ ಸಹಿತ 8 ಮಂದಿ ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.

ಮೂಡುಬಿದಿರೆ ಸಮೀಪದ ಕಿಳಿಂಜಾರು ಗ್ರಾಮದ ಕುಪ್ಪೆಪದವು ನಿವಾಸಿ ದಿ. ಖಾದರ್ ಬ್ಯಾರಿ ಎಂಬವರ ಪತ್ನಿ ಉಞಿಮಮ್ಮ (78) ಅಪಘಾತದಿಂದ ಮೃತಪಟ್ಟ ಮಹಿಳೆ.

ಉಞಿಮಮ್ಮರವರ ಮಗಳು ರುಖಿಯಾ(45), ರುಖಿಯಾರವರ ಮಕ್ಕಳಾದ ಝುಲೈಖಾ(25), ಹಾಝರಾ(18), ಖೈರುನ್ನಿಸಾ(15), ರುಖಿಯಾರ ಅಕ್ಕನ ಮಗಳು ಅಸ್ಮಾ(28), ಝುಲೈಖಾ ಅವರ ಮಕ್ಕಳಾದ ಫಾತಿಮಾ ಸನಾ(3), ಮುಹಮ್ಮದ್ ಮುಸ್ತಫಾ(ಒಂದೂವರೆ ವರ್ಷ) ಹಾಗೂ ಬಿ.ಸಿ.ರೋಡ್ ಸಮೀಪದ ಕೈಕಂಬ ಶಾಂತಿಯಂಗಡಿ ನಿವಾಸಿ ಎಸ್.ಹುಸೈನ್ ಎಂಬವರ ಪುತ್ರ ಕಾರು ಚಾಲಕ ಹಬೀಬ್ ರಹ್ಮಾನ್(28) ಅಪಘಾತದಿಂದ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಂಜಾವೂರು ಸರಕಾರಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಮಿಳುನಾಡಿನ ಮುತ್ತುಪೇಟೆ ದರ್ಗಾ ಸಂದರ್ಶನಕ್ಕೆಂದು ಉಞಿಮಮ್ಮ ಕುಟುಂಬ ಹಬೀಬ್ ರಹ್ಮಾನ್‌ಗೆ ಸೇರಿದ ಬಾಡಿಗೆ ಕಾರಿನಲ್ಲಿ ಸೋಮವಾರ ರಾತ್ರಿ 7 ಗಂಟೆಯ ಸುಮಾರಿಗೆ ಕುಪ್ಪೆಪದವು ಮನೆಯಿಂದ ಹೊರಟ್ಟಿದ್ದರು. ಬುಧವಾರ ರಾತ್ರಿ 1 ಗಂಟೆ ಸುಮಾರಿಗೆ ತಂಜಾವೂರು ತಲುಪಿದ ಇನ್ನೋವ ಕಾರು ಚಾಲಕನ ನಿಯಂತ್ರಣ ತಪ್ಪಿರಸ್ತೆ ಬದಿಯಿದ್ದ ಮರಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಅಪಘಾತದಿಂದ ತೀವ್ರ ಸ್ವರೂಪದ ಗಾಯಗೊಂಡ ಉಞಿಮಮ್ಮ ಮೃತಪಟ್ಟಿದ್ದಾರೆ. ಕಾರು ಚಾಲಕ ಹಬೀಬ್ ರಹ್ಮಾನ್ ತೀವ್ರ ಸ್ವರೂಪದ ಗಾಯಗೊಂಡಿದ್ದು, ಉಳಿದವರು ಸಣ್ಣ ಪುಟ್ಟ ಗಾಯಗೊಂಡಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X