Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ಸಿದ್ದರಾಮಯ್ಯ ತಮಿಳುನಾಡಿಗೆ ಕಾವೇರಿ ನೀರು...

ಸಿದ್ದರಾಮಯ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡದೆ ಇರಬಹುದಿತ್ತೇ ?

ಇಲ್ಲಿದೆ ಉತ್ತರ

ಗೌತಮ್ ಮಾಚಯ್ಯಗೌತಮ್ ಮಾಚಯ್ಯ7 Sept 2016 5:56 PM IST
share
ಸಿದ್ದರಾಮಯ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡದೆ ಇರಬಹುದಿತ್ತೇ  ?

ಸುಪ್ರೀಂಕೋರ್ಟ್ ಸೂಚನೆಯಂತೆ ತಮಿಳುನಾಡಿಗೆ ನೀರು ಬಿಡುವುದನ್ನು ಹೊರತುಪಡಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೇರೆ ಆಯ್ಕೆಗಳಿತ್ತೇ? ಇಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಬಂದ ಕೆಲ ಸಲಹೆಗಳಂತೆ ಸುಪ್ರೀಂಕೋರ್ಟ್ ಸೂಚನೆಯನ್ನು ಪಾಲಿಸದೇ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಬೇಕಿತ್ತು. ಆಗ ಜನರಿಗೆ ಪ್ರೀತಿಪಾತ್ರರಾಗುತ್ತಿದ್ದರು ಮತ್ತು ಮುಂದಿನ ಚುನಾವಣೆಯಲ್ಲಿ ಸುಲಭ ಗೆಲುವಿಗೆ ಕಾರಣವಾಗುತ್ತಿತ್ತು ಎಂದು ಹಿಂದೆ ಗಟ್ಟಿ ನಿರ್ಧಾರ ಕೈಗೊಂಡಿದ್ದ ಎಸ್.ಬಂಗಾರಪ್ಪ ಅವರ ನಿದರ್ಶನವನ್ನು ಉದಾಹರಿಸಿದ್ದರು.

1991ರಲ್ಲಿ ಬಂಗಾರಪ್ಪ ಬಿಗಿ ಕ್ರಮಗಳನ್ನು ಕೈಗೊಂಡು, ಕಾವೇರಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ವಿರುದ್ಧ ಹಿಂಸಾತ್ಮಕ ಬಂದ್ ಕೂಡಾ ಪ್ರಾಯೋಜಿಸಿದ್ದರು. ಆದರೆ ಇದು ಅವರಿಗೆ ರಾಜಕೀಯವಾಗಿ ನೆರವಾಯಿತೇ?

ಬಂಗಾರಪ್ಪ ಅವರನ್ನು ಅವರ ಪಕ್ಷವೇ ಹೊರಹಾಕಿತು. ಅವರು ಕಟ್ಟಿದ ಕರ್ನಾಟಕ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಸಾಧನೆ ಮಾಡಿತು. ಕಾವೇರಿ ಅವರನ್ನು ರಕ್ಷಿಸಲಿಲ್ಲ.

ಎಚ್.ಡಿ.ದೇವೇಗೌಡ ಅವರೂ ದೊಡ್ಡದಾಗಿ ಅಬ್ಬರಿಸಿದರು. ಆದರೆ ಕೇಂದ್ರ ಸರ್ಕಾರ ಅವರ ಸರ್ಕಾರವನ್ನು ವಜಾ ಮಾಡುವ ಎಚ್ಚರಿಕೆ ನೀಡಿದ ಬಳಿಕ ತಮಿಳುನಾಡಿಗೆ ನೀರು ಬಿಟ್ಟರು.

ಮಾತಿನಂತೆ ನಡೆದುಕೊಂಡ ಏಕೈಕ ಸಿಎಂ ಎಂದರೆ ಎಸ್.ಎಂ.ಕೃಷ್ಣ. ಸುಪ್ರೀಂಕೋರ್ಟ್ ತೀರ್ಪಿನ ಅನುಷ್ಠಾನಕ್ಕೆ ನಿರಾಕರಿಸಿ ಅವರು ಬೆಂಗಳೂರಿನಿಂದ ಮಂಡ್ಯಕ್ಕೆ ಪಾದಯಾತ್ರೆ ಕೈಗೊಂಡರು. ಆದರೆ ಸುಪ್ರೀಂಕೋರ್ಟ್ ನ್ಯಾಯಾಂಗ ನಿಂದನೆಯ ಎಚ್ಚರಿಕೆ ನೀಡಿದ ಬಳಿಕ, ಬೇಷರತ್ ಕ್ಷಮೆ ಯಾಚಿಸಿ ನೀರು ಹರಿಸಿದರು.

ಸೈದ್ಧಾಂತಿಕವಾಗಿ ಕಾವೇರಿ ಅಲೆಯಲ್ಲಿ ಅವರು ಮುಂದಿನ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕಿತ್ತು. ಆದರೆ ಕೃಷ್ಣ ಹಾಗೂ ಕಾಂಗ್ರೆಸ್ ಪಕ್ಷ ಕೊಚ್ಚಿಕೊಂಡು ಹೋಯಿತು.

ಸಿದ್ಧರಾಮಯ್ಯ ತಮ್ಮ ಸರ್ಕಾರವನ್ನು ಕಾವೇರಿಗಾಗಿ ಬಲಿಕೊಟ್ಟರೆ, ಒಂದಷ್ಟು ಜನಬೆಂಬಲವನ್ನೇನೋ ಪಡೆಯುತ್ತಿದ್ದರು. ಆದರೆ ಅದು ಅವರು ಅಧಿಕಾರಕ್ಕೆ ಮರಳುವುದನ್ನು ಖಾತ್ರಿಪಡಿಸುತ್ತಿರಲಿಲ್ಲ. ಕಾವೇರಿ ಭಾವನಾತ್ಮಕ ವಿಷಯವಾದರೂ, ಅದು ದಕ್ಷಿಣ ಕರ್ನಾಟಕಕ್ಕೆ ಅದರಲ್ಲೂ ಮಂಡ್ಯ ಭಾಗಕ್ಕೆ ಮಾತ್ರ ಸೀಮಿತವಾದ ವಿಷಯ. ಇದು ರಾಜ್ಯದ ಇತರ ಭಾಗದ ಮತಗಳ ಮೇಲೆ ಪರಿಣಾಮ ಬೀರುವ ಪರಿಣಾಮ ಕ್ಷೀಣ.

ಈ ಹಿಂದಿನ ಮುಖ್ಯಮಂತ್ರಿಗಳು ಮಾಡಿದಂತೆ ಕಾವೇರಿ ನೀರನ್ನು ಬಿಡುವ ಮೂಲಕ ಸಿದ್ದರಾಮಯ್ಯ ಸರಿಯಾದ ಕ್ರಮವನ್ನೇ ತೆಗೆದು ಕೊಂಡಿದ್ದಾರೆ.

ಇಲ್ಲದಿದ್ದರೆ ಸುಪ್ರಿಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಕಳಂಕ ಹೊತ್ತ ಕರ್ನಾಟಕ  ಅದರ ದೂರಗಾಮಿ ಪರಿಣಾಮಗಳನ್ನು ಎದುರಿಸಬೇಕಾಗುತ್ತಿತ್ತು

ಇದು ಲೇಖಕರ ಕೆಳಗೆ ನೀಡಲಾದ ಇಂಗ್ಲಿಷ್ ಫೇಸ್‌ಬುಕ್ ಪೋಸ್ಟ್ ನ ಕನ್ನಡ ಅನುವಾದ

share
ಗೌತಮ್ ಮಾಚಯ್ಯ
ಗೌತಮ್ ಮಾಚಯ್ಯ
Next Story
X