Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೌದಿ ಸರಕಾರವನ್ನು ಶಿಕ್ಷಿಸಿ: ಮುಸ್ಲಿಮ್...

ಸೌದಿ ಸರಕಾರವನ್ನು ಶಿಕ್ಷಿಸಿ: ಮುಸ್ಲಿಮ್ ಜಗತ್ತಿಗೆ ಇರಾನ್ ಅಧ್ಯಕ್ಷರ ಕರೆ

ವಾರ್ತಾಭಾರತಿವಾರ್ತಾಭಾರತಿ7 Sept 2016 8:01 PM IST
share
ಸೌದಿ ಸರಕಾರವನ್ನು ಶಿಕ್ಷಿಸಿ: ಮುಸ್ಲಿಮ್ ಜಗತ್ತಿಗೆ ಇರಾನ್ ಅಧ್ಯಕ್ಷರ ಕರೆ

ಟೆಹರಾನ್ (ಇರಾನ್), ಸೆ. 7: ಹಜ್ ಯಾತ್ರೆಯನ್ನು ನಿಭಾಯಿಸುತ್ತಿರುವ ರೀತಿಗಾಗಿ ಹಾಗೂ ಈ ವಲಯದಲ್ಲಿನ ಕೃತ್ಯಗಳಿಗಾಗಿ ಸೌದಿ ಅರೇಬಿಯ ಸರಕಾರವನ್ನು ಶಿಕ್ಷಿಸುವಂತೆ ಇರಾನ್ ಅಧ್ಯಕ್ಷ ಹಸನ್ ರೂಹಾನಿ ಬುಧವಾರ ಮುಸ್ಲಿಮ್ ಜಗತ್ತಿಗೆ ಕರೆ ನೀಡಿದ್ದಾರೆ.


 ‘‘ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಸೌದಿ ಸರಕಾರವನ್ನು ಶಿಕ್ಷಿಸಲು ಈ ವಲಯದ ದೇಶಗಳು ಮತ್ತು ಇಸ್ಲಾಮ್ ಜಗತ್ತು ಸಂಘಟಿತ ಪ್ರಯತ್ನಗಳನ್ನು ನಡೆಸಬೇಕು’’ ಎಂದು ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಇರಾನ್ ನಾಯಕ ಹೇಳಿದರು ಎಂದು ಸರಕಾರಿ ಸುದ್ದಿ ಸಂಸ್ಥೆ ಇರ್ನ ವರದಿ ಮಾಡಿದೆ.
‘‘ಸೌದಿ ಸರಕಾರದೊಂದಿಗೆ ನಾವು ಹೊಂದಿರುವ ಸಮಸ್ಯೆಗಳು ಕೇವಲ ಹಜ್‌ಗೆ ಸಂಬಂಧಪಟ್ಟಿದ್ದೇ ಆಗಿದ್ದಲ್ಲಿ, ಅದಕ್ಕೊಂದು ಪರಿಹಾರ ಕಂಡುಕೊಳ್ಳಲು ಬಹುಶಃ ಸಾಧ್ಯವಾಗುತ್ತಿತ್ತು’’ ಎಂದರು.


‘‘ಆದರೆ, ದುರದೃಷ್ಟವಶಾತ್, ಈ ಸರಕಾರ ಈ ವಲಯದಲ್ಲಿ ಅಪರಾಧಗಳನ್ನು ನಡೆಸುತ್ತಿದೆ, ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಹಾಗೂ ವಾಸ್ತವವಾಗಿ ಇರಾಕ್, ಸಿರಿಯ ಮತ್ತು ಯಮನ್‌ಗಳಲ್ಲಿ ಮುಸ್ಲಿಮರ ರಕ್ತ ಹರಿಸುತ್ತಿದೆ’’ ಎಂದು ಆರೋಪಿಸಿದರು.


ಶನಿವಾರ ವಾರ್ಷಿಕ ಹಜ್ ಯಾತ್ರೆ ಆರಂಭಗೊಳ್ಳುವುದಕ್ಕೆ ಪೂರ್ವಭಾವಿಯಾಗಿ ಈ ಎರಡು ಪ್ರಾದೇಶಿಕ ಎದುರಾಳಿಗಳು ಪರಸ್ಪರ ಹಲ್ಲು ಮಸೆಯುತ್ತಿದ್ದು, ಅವುಗಳ ನಡುವಿನ ಸಂಬಂಧ ಈಗಾಗಲೇ ತಳಕ್ಕಿಳಿದಿದೆ.


ಹಜ್‌ಗೆ ಒದಗಿಸಲಾಗುವ ಭದ್ರತೆ ಮತ್ತು ಸೌಕರ್ಯಗಳ ವಿಚಾರದಲ್ಲಿ ಇರಾನ್ ಮತ್ತು ಸೌದಿ ಅರೇಬಿಯಗಳ ನಡುವೆ ಮೇ ತಿಂಗಳಲ್ಲಿ ನಡೆದ ಮಾತುಕತೆ ಮುರಿದು ಬಿದ್ದಿರುವುದನ್ನು ಸ್ಮರಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ, ತನ್ನ ಪ್ರಜೆಗಳು ಹಜ್‌ಗೆ ಹೋಗುವುದನ್ನು ಇರಾನ್ ನಿಷೇಧಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X