Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಂಪನ್ಮೂಲ...

‘ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಂಪನ್ಮೂಲ ಮಾರಾಟ ಮಾಡುವುದು ದೇಶಪ್ರೇಮವಲ್ಲ’

ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ7 Sept 2016 10:22 PM IST
share
‘ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಂಪನ್ಮೂಲ ಮಾರಾಟ ಮಾಡುವುದು ದೇಶಪ್ರೇಮವಲ್ಲ’

 ಚಿಕ್ಕಮಗಳೂರು, ಸೆ.7: ದೇಶದ ಸಂಪತ್ತನ್ನು ಬಹುರಾಷ್ಟ್ರೀಯ ಕಂಪೆನಿಗಳಿಗೆ ಮಾರಾಟ ಮಾಡುವುದು ದೇಶಪ್ರೇಮವೇ ಎಂದು ಸಿಪಿಐ(ಎಂಎಲ್) ಪಕ್ಷದ ರಾಜ್ಯ ಕಾರ್ಯದರ್ಶಿ ಬಿ. ರುದ್ರಯ್ಯ ಪ್ರಶ್ನಿಸಿದರು.

 ಅವರು ಸಿಪಿಐಎಂಎಲ್ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಆಯ್ದ ಕಾರ್ಯಕರ್ತರಿಗಾಗಿ ನಗರದ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ‘ಯಾವುದು ದೇಶಪ್ರೇಮ -ಯಾವುದು ದೇಶದ್ರೋಹ’ ಎಂಬ ವಿಚಾರ ಸಂಕಿರಣ ಕುರಿತು ವಿಚಾರ ಮಂಡನೆ ಮಾಡಿ ಮಾತನಾಡಿದರು. ಸಂಘ-ಪರಿವಾರದವರು ಘೋಷಣೆಯನ್ನು ಕೂಗಿದವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಬೀದಿಗಿಳಿದು ಹೋರಾಟ ಮಾಡಲು ಮುಂದಾಗಿದ್ದಾರೆ. ಆದರೆ ಕೇಂದ್ರದ ಮೋದಿ ಸರಕಾರ ಡಿಜಿಟಲ್ ಇಂಡಿಯಾ, ಮೇಕ್ ಇನ್ ಇಂಡಿಯಾದ ಹೆಸರಿನಲ್ಲಿ ವಿದೇಶಿ ಬಂಡವಾಳ ಹೂಡಿಕೆ ನಡೆಸುವುದರ ಮೂಲಕ ದೇಶದ ನೆಲ, ಜಲ, ಸಂಪನ್ಮೂಲಗಳನ್ನು ಬಹುರಾಷ್ಟ್ರೀಯ, ಕಾರ್ಪೊರೇಟ್ ಕಂಪೆನಿಗಳಿಗೆ ಮಾರಾಟ ಮಾಡುತ್ತಿರುವುದು ದೇಶಪ್ರೇಮವಲ್ಲ, ದೇಶದ್ರೋಹ. ಇದರ ವಿರುದ್ಧ ಹೊರಾಟಕ್ಕೆ ಮುಂದಾಗಲಿ ಎಂದರು. ದೇಶದ ಸೈನಿಕರ ವಿರುದ್ಧ ಕಾಶ್ಮೀರಿ ವಿದ್ಯಾರ್ಥಿಗಳು, ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಘಟಿಸಿದ ವಿಚಾರ ಸಂಕಿರಣದಲ್ಲಿ ಘೋಷಣೆ ಕೂಗಿದ್ದಾರೆ ಎನ್ನುವುದನ್ನು ದೇಶದ್ರೋಹಕ್ಕೆ ಹೋಲಿಕೆ ಮಾಡುವುದರ ಮೂಲಕ ಇಡೀ ರಾಜ್ಯದಲ್ಲಿ ಅಶಾಂತಿಯನ್ನು ಉಂಟು ಮಾಡುವುದರ ಮೂಲಕ ದೇಶಪ್ರೇಮ ಮತ್ತು ದೇಶದ್ರೋಹದ ಚರ್ಚೆಗೆ ಆಸ್ಪದ ನೀಡಿದ್ದಾರೆ ಎಂದು ಹೇಳಿದ ಅವರು, ಕಾಶ್ಮೀರ ಭಾರತದ ಸಿಂಧೂರ ಎಂದೇ ಹೇಳುವ ಜನರಿಗೆ ಕಾಶ್ಮೀರದ ಜನ ಭಾರತೀಯರೆನ್ನುವುದು ತಿಳಿಯದಿರುವುದು ವಿಪರ್ಯಾಸವಾಗಿದೆ ಎಂದರು.

ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಬೈಗೂರು ಮಂಜುನಾಥ ಮಾತನಾಡಿ, ಸಂಘ -ಪರಿವಾರದವರಿಗೆ ದೇಶವನ್ನು ಕಟ್ಟುವ ಗುತ್ತಿಗೆ ನೀಡಲಾಗಿಲ್ಲ. ದೇಶದ್ರೋಹದ ಬಗ್ಗೆ ಹೋರಾಟಕ್ಕಿಳಿದ ಸಂಘ -ಪರಿವಾರದವರು ಪ್ರಜಾಪ್ರಭುತ್ವ ದೇಶದಲ್ಲಿ ಹಿಂದೂರಾಷ್ಟ್ರ ಸ್ಥಾಪನೆ ಮಾಡುವ ಗುರಿ ಹೊಂದಿರುವುದು ದೇಶಪ್ರೇಮವೇ? ಬೋಲೋ ಭಾರತ್ ಮಾತಾಕೀ ಎಂಬ ಘೋಷಣೆ ಕೂಗಿದ ಮಾತ್ರಕ್ಕೆ ಇವರು ದೇಶಪ್ರೇಮಿಗಳೇ? ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಂಡ್ಯ ಪ್ರವೀಣ್ ಕೈವಾಡವಿರುವುದು ದೇಶಪ್ರೇಮವೇ ಎಂದು ಪ್ರಶ್ನಿಸಿದರು. ಪಕ್ಷದ ರಾಜ್ಯ ಸಮಿತಿ ಸದಸ್ಯೆಯರಾದ ಲಲಿತಾ ಮಾತನಾಡಿದರು. ವಿ ಪಕ್ಷದ ಚಿಕ್ಕಮಗಳೂರು ಕಾರ್ಯದರ್ಶಿ ಎನ್.ಪಿ. ವೆಂಕಟೇಶ್, ಎನ್.ಆರ್.ಪುರ ಕಾರ್ಯದರ್ಶಿ ಉಮೇಶ್, ಮೂಡಿಗೆರೆ ತಾಲೂಕು ಸಹ ಕಾರ್ಯದರ್ಶಿ ಗೋಪಾಲ್ ಬೆಳಗೂಡು, ಬೊಗಸೆ ನಾಗೇಶ್, ಲೋಕೇಶ್ ಕೆ.ಎಂ. ಬಸವರಾಜ್, ಪರಮೇಶ್ ಸಿ.ಎಚ್., ಮಂಜುನಾಥ್ ಡಿ.ಡಿ. ಮತ್ತಿತರರಿದ್ದರು. ಕೂದುವಳ್ಳಿ ಮಹೇಶ್ ನಿರೂಪಿಸಿ , ಜಗನ್ನಾಥ್ ಸ್ವಾಗತಿಸಿ, ಸಂದೀಪ್ ಬಿ.ಆರ್. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X