Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನಕ್ಕೆ...

ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನಕ್ಕೆ ಭರ್ಜರಿ ಜಯ

ಏಕೈಕ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ8 Sept 2016 12:31 PM IST
share
ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನಕ್ಕೆ ಭರ್ಜರಿ ಜಯ

ಮ್ಯಾಂಚೆಸ್ಟರ್, ಸೆ.8: ಇಂಗ್ಲೆಂಡ್ ಬೌಲರ್‌ಗಳನ್ನು ಚೆನ್ನಾಗಿ ದಂಡಿಸಿದ ಶಾರ್ಜೀಲ್ ಖಾನ್ ಹಾಗೂ ಖಾಲಿದ್ ಲತೀಫ್ ಪಾಕಿಸ್ತಾನ ತಂಡಕ್ಕೆ ಏಕೈಕ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ 9 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ತಂದುಕೊಟ್ಟರು. ಈ ಮೂಲಕ ಪಾಕ್ ತಂಡ ಇಂಗ್ಲೆಂಡ್ ಪ್ರವಾಸವನ್ನು ಗೆಲುವಿನೊಂದಿಗೆ ಕೊನೆಗೊಳಿಸಿತು.

ಇಲ್ಲಿನ ಓಲ್ಡ್ ಟ್ರಾಫೋರ್ಡ್‌ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ವೇಗದ ಬೌಲರ್ ವಹಾಬ್ ರಿಯಾಝ್(3-18), ಇಮಾದ್ ವಾಸಿಂ(2-17) ಹಾಗೂ ಹಸನ್ ಅಲಿ(2-24) ಅಮೋಘ ಬೌಲಿಂಗ್‌ನ ನೆರವಿನಿಂದ ಪಾಕಿಸ್ತಾನ ತಂಡ ಇಂಗ್ಲೆಂಡ್‌ನ್ನು 135 ರನ್ ಗೆ ನಿಯಂತ್ರಿಸಿ ಗೆಲುವಿಗೆ ಸುಲಭ ಸವಾಲು ಪಡೆದಿತ್ತು.

 ಕೇವಲ 136 ರನ್ ಗುರಿ ಪಡೆದಿದ್ದ ಪಾಕಿಸ್ತಾನ ಇನ್ನೂ 31 ಎಸೆತಗಳು ಬಾಕಿ ಇರುವಾಗಲೇ ಒಂದು ವಿಕೆಟ್ ನಷ್ಟದಲ್ಲಿ 139 ರನ್ ಗಳಿಸಿತು.

  ಎಡಗೈ ಬ್ಯಾಟ್ಸ್‌ಮನ್ ಶಾರ್ಜೀಲ್ 59 ರನ್ ಗಳಿಸಿ ಔಟಾದರು. ಇನ್ನೋರ್ವ ಆರಂಭಿಕ ಬ್ಯಾಟ್ಸ್‌ಮನ್ ಲತೀಫ್ ಔಟಾಗದೆ 59 ರನ್ ಗಳಿಸಿದರು. ಲತೀಫ್‌ರೊಂದಿಗೆ ಮೊದಲ ವಿಕೆಟ್‌ಗೆ 69 ಎಸೆತಗಳಲ್ಲಿ 107 ರನ್ ಜೊತೆಯಾಟ ನಡೆಸಿದ ಶಾರ್ಜೀಲ್ 36 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 3 ಸಿಕ್ಸರ್‌ಗಳನ್ನು ಸಿಡಿಸಿದರು.

ಟ್ವೆಂಟಿ-20ಯಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿದ ಲತೀಫ್ 42 ಎಸೆತಗಳನ್ನು ಎದುರಿಸಿದ್ದು 8 ಬೌಂಡರಿ, 2 ಸಿಕ್ಸರ್ ಬಾರಿಸಿ ಔಟಾಗದೆ 59 ರನ್ ಗಳಿಸಿದರು.

ಎಪ್ರಿಲ್‌ನಲ್ಲಿ ಕೋಲ್ಕತಾದಲ್ಲಿ ನಡೆದಿದ್ದ ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ವೆಸ್ಟ್‌ಇಂಡೀಸ್ ವಿರುದ್ಧ ಕೊನೆಯ ಓವರ್‌ನಲ್ಲಿ ಸೋತಿದ್ದ ತಂಡವನ್ನೇ ಇಂಗ್ಲೆಂಡ್ ಕಣಕ್ಕಿಳಿಸಿತ್ತು.

ಪಾಕಿಸ್ತಾನ ಸರ್ಫರಾಝ್ ಅಹ್ಮದ್ ನಾಯಕತ್ವದಲ್ಲಿ ಟ್ವೆಂಟಿ-20ಯಲ್ಲಿ ಮೊದಲ ಜಯ ದಾಖಲಿಸಿತು. ಉಭಯ ತಂಡಗಳು ಟೆಸ್ಟ್ ಸರಣಿಯನ್ನು 2-2 ರಿಂದ ಡ್ರಾಗೊಳಿಸಿದ್ದವು. ಇಂಗ್ಲೆಂಡ್ ತಂಡ ಏಕದಿನ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡಿತ್ತು.

 18 ರನ್‌ಗೆ 3 ವಿಕೆಟ್‌ಗಳನ್ನು ಉರುಳಿಸಿದ್ದ ವೇಗದ ಬೌಲರ್ ವಹಾಬ್ ರಿಯಾಝ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇಂಗ್ಲೆಂಡ್‌ನ ಇನಿಂಗ್ಸ್‌ನಲ್ಲಿ ಅಲೆಕ್ಸ್ ಹೇಲ್ಸ್(37),ರಾಯ್(21) ,ಬಟ್ಲರ್(16), ನಾಯಕ ಮೋರ್ಗನ್(14)ಹಾಗೂ ಮೊಯಿನ್ ಅಲಿ(13) ಎರಡಂಕೆ ಸ್ಕೋರ್ ದಾಖಲಿಸಿದರು.

ಸಂಕ್ಷಿಪ್ತ ಸ್ಕೋರ್

ಇಂಗ್ಲೆಂಡ್: 20 ಓವರ್‌ಗಳಲ್ಲಿ 135/7

(ಅಲೆಕ್ಸ್ ಹೇಲ್ಸ್ 37, ಜೇಸನ್ ರಾಯ್ 21, ರಿಯಾಝ್ 3-18)

ಪಾಕಿಸ್ತಾನ: 14.5 ಓವರ್‌ಗಳಲ್ಲಿ 139/1

(ಶಾರ್ಜೀಲ್ ಖಾನ್ 59, ಖಾಲಿದ್ ಲತೀಫ್ ಔಟಾಗದೆ 59, ರಶೀದ್ 1-29)

ಪಂದ್ಯಶ್ರೇಷ್ಠ: ವಹಾಬ್ ರಿಯಾಝ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X