Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೋಮೇಶ್ವರ ಬೀಚ್ ನಲ್ಲಿ ಹೀಗೊಂದು...

ಸೋಮೇಶ್ವರ ಬೀಚ್ ನಲ್ಲಿ ಹೀಗೊಂದು ‘ಸುನಾಮಿ’ ಕಾರ್ಯಾಚರಣೆ!

ಸುನಾಮಿ ಅಣಕು ಪ್ರದರ್ಶನದಿಂದ ಬೀಚ್ ನೋಡಲು ಬಂದವರು ಗಾಬರಿ...!

ವಾರ್ತಾಭಾರತಿವಾರ್ತಾಭಾರತಿ8 Sept 2016 4:21 PM IST
share
ಸೋಮೇಶ್ವರ ಬೀಚ್ ನಲ್ಲಿ ಹೀಗೊಂದು ‘ಸುನಾಮಿ’ ಕಾರ್ಯಾಚರಣೆ!

ಮಂಗಳೂರು, ಸೆ.8: ಸೋಮೇಶ್ವರ ಬೀಚ್ ಸೌಂದರ್ಯ ನೋಡಲು ಬಂದಿದ್ದ ಕೆಲವರಿಗೆ ಇಂದು ಬೆಳಗ್ಗೆ 11:45ರ ಹೊತ್ತಿಗೆ ಗಾಬರಿ ಕಾಡಿತ್ತು. ಬೀಚ್‌ನುದ್ದಕ್ಕೂ ಪೊಲೀಸರು, ಕೋಸ್ಟ್ ಗಾರ್ಡ್‌ಗಳು, ಎನ್‌ಡಿಆರ್‌ಎಫ್‌ನ ಸಿಬ್ಬಂದಿ ಸುನಾಮಿ ಎಚ್ಚರಿಕೆ ನೀಡುತ್ತಾ ಸಾಗಿದ್ದರೆ, ಇತ್ತ ಬೀಚ್ ನೋಡಲು ಬಂದಿದ್ದ ಕೆಲವರು ಆತಂಕದಿಂದ ಅಲ್ಲಿದ್ದ ಸುರಕ್ಷಾ ವಾಹನಗಳನ್ನು ಹತ್ತಿದರು. ಕೆಲವರಂತೂ ಗಾಬರಿಯಿಂದ ಮೊಬೈಲ್ ಫೋನ್ ಬಿಟ್ಟು ಬಂದಿದ್ದೇವೆ ಎಂದು ಮತ್ತೆ ತಾವಿದ್ದ ಜಾಗಕ್ಕೆ ತೆರಳಿ ಮೊಬೈಲ್ ಹಿಡಿದು ವಾಹನ ಹತ್ತಿದ ಪ್ರಸಂಗವೂ ನಡೆಯಿತು. ಸೋಮೇಶ್ವರ ಬೀಚ್‌ನಲ್ಲಿ ‘ಸುನಾಮಿ’ ಅಣುಕು ಪ್ರದರ್ಶನದ ವೇಳೆ ಕಂಡು ಬಂದ ದೃಶ್ಯ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೇತೃತ್ವದಲ್ಲಿ ಇಂದು ದ.ಕ., ಉಡುಪಿ ಹಾಗೂ ಕಾರವಾರ ಜಿಲ್ಲೆಗಳನ್ನು ಒಳಗೊಂಡಂತೆ ಸುನಾಮಿ ವಿಪತ್ತು ನಿರ್ವಹಣಾ ಕುರಿತಂತೆ ಅಣಕು ಪ್ರದರ್ಶನ ನಡೆಯಿತು. ದ.ಕ. ಜಿಲ್ಲಾಡಳಿತದ ವಿವಿಧ ಇಲಾಖೆಗಳ ನೇತೃತ್ವದಲ್ಲಿ ಸೋಮೇಶ್ವರದ ಬೆಟ್ಟಂಪಾಡಿ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ, ಕರಾವಳಿ ತಟ ರಕ್ಷಣಾ ಪಡೆ, ಗೃಹ ರಕ್ಷಕ ದಳ, ಕಂದಾಯ, ಸ್ಥಳೀಯ ಗ್ರಾ.ಪಂ., ಸ್ಥಳೀಯ ಪೊಲೀಸ್ ಸೇರಿದಂತೆ 20 ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿಗಾಗಿ ಆಗಮಿಸಿದ್ದ ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ ಸಿಬ್ಬಂದಿ ಕೂಡಾ ಈ ಸಂದರ್ಭ ಸೋಮೇಶ್ವರ ಬೀಚ್‌ನಲ್ಲಿದ್ದ ಕಾರಣ, ತಂಡ 25 ಮಂದಿ ಸಿಬ್ಬಂದಿಯನ್ನೂ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲಾಗಿತ್ತು. ಅಣುಕು ಪ್ರದರ್ಶನದನ್ವಯ, ಹೈದಾರಾಬಾದ್‌ನ ಇನ್‌ಕಾಯ್ಸೊ ಸಂಸ್ಥೆಯಿಂದ 11:30ರ ವೇಳೆಗೆ ಪಾಕಿಸ್ತಾನ ಕರಾವಳಿಯಿಂದ ಈ ಮೂರು ಜಿಲ್ಲೆಗಳಿಗೆ ಸುನಾಮಿ ಬರುವ ಬಗ್ಗೆ ಎಚ್ಚರಿಕೆಯನ್ನು ನೀಡಲಾಗಿತ್ತು. ಅದರಂತೆ ವಿವಿಧ ಇಲಾಖೆಗಳ ರಕ್ಷಣಾ ಸಿಬ್ಬಂದಿ ವಾಹನಗಳಲ್ಲಿ ತೆರಳಿ ಬೆಟ್ಟಂಪಾಡಿ ಗ್ರಾಮದ ಜನರನ್ನು ಅವರ ಮನೆಗಳಿಂದ ಸುರಕ್ಷಿತವಾಗಿ ಸುರಕ್ಷಾ ವಾಹನಗಳಲ್ಲಿ ಸೋಮೇಶ್ವರದ ಉಚ್ಚಿಲ ಬೋವಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಗಂಜಿ ಕೇಂದ್ರಕ್ಕೆ ತಲುಪಿಸಿದರು. ಅಸ್ವಸ್ಥರಾಗಿದ್ದವರನ್ನು ಆ್ಯಂಬುಲೆನ್ಸ್‌ಗಳಲ್ಲಿ ತರಿಸಿ ಪ್ರಾಥಮಿಕ ಚಿಕಿತ್ಸೆ ಒದಗಿಸುವ ಅಣುಕು ಕೂಡಾ ಪ್ರದರ್ಶನದ ಭಾಗವಾಗಿತ್ತು. ಇದಕ್ಕಾಗಿ ಪರಿಹಾರ ಕೇಂದ್ರದಲ್ಲಿ ವೈದ್ಯಕೀಯ ನೆರವು ಕೇಂದ್ರದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ವಿವಿಧ ಇಲಾಖೆಗಳ ಸುಮಾರು 250ಕ್ಕೂ ಅಧಿಕ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲು ಪಡೆದಿದ್ದರು ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಪತ್ತು ಸಮನ್ವಯ ಅಧಿಕಾರಿ ಡಾ.ಪ್ರದೀಪ್ ಮಾಹಿತಿ ನೀಡಿದರು. ಕಾರ್ಯಾಚರಣೆಯ ಉಪ ಮುಖ್ಯಸ್ಥರಾಗಿ ಸಹಾಯಕ ಆಯುಕ್ತ ಡಾ. ಅಶೋಕ್, ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪ ಕಾರ್ಯಾಚರಣಾ ಸಂಯೋಜಕ ಪ್ರಭು ವಿ.ವಿ., ಎಸಿಪಿ ಶ್ರುತಿ, ಗೃಹ ರಕ್ಷಕ ದಳದ ಡಾ. ಮುರಳಿ ಮೋಹನ ಚೂಂತಾರು, ಸಬ್ ಇನ್ಸ್‌ಪೆಕ್ಟರ್ ಭಾರತಿ ಸಹಕರಿಸಿದರು. 

ಪ್ರದರ್ಶನ ನೋಡಲು ಬಂದಿದ್ದೆವು, ಗಾಡಿ ಹತ್ತಿಸಿದರು...!

‘‘ನಮಗೆ ಸುನಾಮಿ ಸಂದರ್ಭ ಸುರಕ್ಷಾ ಕ್ರಮಗಳ ಕುರಿತಂತೆ ಅಣುಕು ಪ್ರದರ್ಶನ ನಡೆಯಲಿದೆ ಎಂದು ತಿಳಿದಿತ್ತು. ಏನು ಮಾಡುತ್ತಾರೆ ನೋಡೋಣವೆಂದು ಮನೆಯಿಂದ ಬೀಚ್ ಹತ್ತಿರ ನಡೆದುಕೊಂಡು ಬರಬೇಕಾದರೆ, ನಮ್ಮನ್ನು ಪೊಲೀಸು ಜೀಪಿನಲ್ಲಿ ಹತ್ತಿಸಿದರು. ಮನೆಗೆ ಕರೆ ಮಾಡೋಣವೆಂದರೆ ಕರೆ ಹೋಗುತ್ತಿಲ್ಲ. ಒಟ್ಟಿನಲ್ಲಿ ಮನೆಯವರು ಗಾಬರಿಯಾಗಿರಬಹುದು’’ ಎಂದು ಸೈಂಟ್ ಆ್ಯಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರಾದ ಪ್ರೀತಿ ಮತ್ತು ನಿಶಿ ಅಣುಕು ಪ್ರದರ್ಶನದ ಅನುಭವ ಹಂಚಿಕೊಂಡರು.

ತುರ್ತು ಸಂದರ್ಭದಲ್ಲಿ ಇಲಾಖೆಗಳ ನಡುವೆ ಸಮನ್ವಯತೆಗೆ ಸಹಕಾರಿ: ಎಡಿಸಿ
‘‘ಸೋಮೇಶ್ವರ ಬೆಟ್ಟಂಪಾಡಿ ಗ್ರಾಮದ ಜನರಿಗೆ ನಿನ್ನೆಯೇ ಸುನಾಮಿ ಅಣುಕು ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಲಾಗಿತ್ತು. ಸಮುದ್ರದಿಂದ ಸುಮಾರು 50 ಮೀಟರ್ ದೂರದಲ್ಲಿ 200 ಮನೆಗಳಿದ್ದು, ಸುಮಾರು 300 ಮಂದಿಯ ರಕ್ಷಣಾ ಕಾರ್ಯಚರಣೆಯನು ಅಣುಕು ಪ್ರದರ್ಶನದ ಮೂಲಕ ಮಾಡಲು ಕ್ರಮ ಕೈಗೊಳ್ಳಲಾಗಿತ್ತು. ಈ ಅಣುಕು ಕಾರ್ಯಾಚರಣೆ ತುರ್ತು ಅಪಾಯಗಳ ಸಂದರ್ಭ ಇಲಾಖೆಗಳ ನಡುವೆ ಸಮನ್ವಯತೆಯನ್ನು ಕಾಯ್ದುಕೊಳ್ಳುವುದು, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಒದಗಿಸುವುದು ಹಾಗೂ ಅಗತ್ಯ ಸೌಲಭ್ಯಗಳ ಬಗ್ಗೆ ಗಮನ ಹರಿಸುವ ನಿಟ್ಟಿನಲ್ಲಿ ಪ್ರಮುಖವಾಗಿದೆ’’ ಎಂದು ಅಣುಕು ಕಾರ್ಯಾಚರಣೆಯ ಮುಖ್ಯಸ್ಥ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X