Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: ದೇವಸ್ವಂ ದೇವಳಗಳಲ್ಲಿ ಆಯುಧ...

ಕೇರಳ: ದೇವಸ್ವಂ ದೇವಳಗಳಲ್ಲಿ ಆಯುಧ ತರಬೇತಿ ನಿಷೇಧ

ವಾರ್ತಾಭಾರತಿವಾರ್ತಾಭಾರತಿ8 Sept 2016 4:45 PM IST
share
ಕೇರಳ: ದೇವಸ್ವಂ ದೇವಳಗಳಲ್ಲಿ ಆಯುಧ ತರಬೇತಿ ನಿಷೇಧ

ತಿರುವನಂತಪುರಂ,ಸೆಪ್ಟಂಬರ್ 8: ಇನ್ನುಮುಂದೆ ಕೇರಳದ ದೇವಸ್ವಂ ಬೋರ್ಡ್(ಮುಜರಾಯಿ ಅಧೀನವಿರುವ) ದೇವಳಗಳಲ್ಲಿ ಆಯುಧ, ದೈಹಿಕ ತರಬೇತಿಯನ್ನು ನಿಷೇಧಿಸಲಾಗುವುದು. ಇದಕ್ಕೆ ಸಂಬಂಧಿಸಿದ ಕೇರಳ ಪೊಲೀಸ್ ಕಾನೂನು ಪ್ರಕಾರ ದೇವಸ್ವಂ ಖಾತೆ ತಯಾರಿಸಿದ ಆದೇಶಕ್ಕೆ ಕಾನೂನು ಖಾತೆ ಅಂಗೀಕಾರ ನೀಡಿದೆ. ದೇವಸ್ವಂ ಕಾರ್ಯದರ್ಶಿ ಆದೇಶವನ್ನು ಕಾನೂನು ಕಾರ್ಯದರ್ಶಿಯ ಸಲಹೆಗೊಪ್ಪಿಸಲಾಗಿತ್ತು. 1988 ಧಾರ್ಮಿಕ ಕಾನೂನಿನ್ವಯ ರಾಜಕೀಯ ಆವಶ್ಯಕತೆಗೆ ಆರಾಧನಾಲಯಗಳನ್ನು ಬಳಸುವಂತಿಲ್ಲ ಎಂದು ವರದಿಯಾಗಿದೆ. ಈ ಕಾನೂನು ಪ್ರಕಾರ ದೇವಸ್ಥಾನದ ಆವರಣದೊಳಗೆ ಆಯುಧ ತರಬೇತಿ, ದೈಹಿಕ ಕಸರತ್ತು ತರಬೇತಿ ನಡೆಸುವುದನ್ನು ತಡೆಯಬಹುದಾಗಿದೆ ಎಂದು ಕಾನೂನು ಖಾತೆಯ ಕಾರ್ಯದರ್ಶಿ ದೇವಸ್ವಂ ಖಾತೆಗೆ ಸಲಹೆ ನೀಡಿದ್ದಾರೆ.

ಈ ನಡುವೆ , ದೇವಸ್ವಂ ಬೋರ್ಡ್‌ನ ದೇವಳಗಳಲ್ಲಿ ಆಯುಧ ತರಬೇತಿ ಅನುಮತಿಸಲು ಸಾಧ್ಯವಿಲ್ಲ ಎಂದು ತಿರುವಾಂಕೂರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಪ್ರಯಾರ್ ಗೋಪಾಲಕೃಷ್ಣನ್ ಹೇಳಿದ್ದಾರೆ. ಆದರೆ ಆಯುಧ ತರಬೇತಿ ನಡೆಯುತ್ತಿದೆ ಎಂದು ತನಗೆ ದೂರು ಸಿಕ್ಕಿಲ್ಲ. ಸಿಕ್ಕಿದರೆ ಸಂಬಂಧಿಸಿದವರೊಂದಿಗೆ ಮಾತಾಡಿ ಅದನ್ನು ಕೊನೆಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ. ಅದಕ್ಕೆ ಅವರು ಸಿದ್ಧರಿಲ್ಲದಿದ್ದರೆ ಅವರ ವಿರುದ್ಧ ಕಾನೂನು ಕ್ರಮಗಳನ್ನು ಜರಗಿಸಲಾಗುವುದು ಎಂದಿದ್ದಾರೆ.

ಆರೆಸ್ಸೆಸ್‌ನ್ನು ಗುರಿಯಾಗಿಟ್ಟು ಸರಕಾರ ಹೊಸ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಎ ದೇವಸ್ವಂ ಬೋರ್ಡ್ ದೇವಳಗಳಲ್ಲಿ ಆರೆಸ್ಸೆಸ್ ಶಾಖಾ ಇರುವುದರ ವಿರುದ್ಧ ದೇವಸ್ವಂ ಸಚಿವ ಕಡಕಂಪಳ್ಳಿ ಸುರೇಂದ್ರನ್ ಕೆಲವು ದಿವಸದ ಹಿಂದೆ ಹೇಳಿಕೆ ನೀಡಿದ್ದರು. ದೇವಳಗಳಲ್ಲಿ ಆರೆಸ್ಸೆಸ್ ಶಾಖೆ ಇರುವುದರ ವಿರುದ್ಧ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಕೆಲವು ದಿವಸಗಳಿಂದ ವಿರೋಧ ವ್ಯಕ್ತಪಡಿಸುತ್ತಾಬಂದಿದ್ದಾರೆ. ಕೇರಳದಲ್ಲಿ ಆರೆಸ್ಸೆಸ್‌ಗೆ ಐದು ಸಾವಿರಕ್ಕೂ ಅಧಿಕ ಶಾಖೆಗಳಿವೆ. ದೇವಸ್ವಂ ಬೋರ್ಡ್ ಅಧೀನದ ದೇವಳಗಳಲ್ಲಿ ಶಾಖೆಗಳಿಲ್ಲ ಎಂದು ಸಂಘಪರಿವಾರ ಹೇಳುತ್ತಿದೆ.

ಆರೆಸ್ಸೆಸ್‌ನ್ನು ನಿಯಂತ್ರಿಸುವ ಶ್ರಮ ಯಶಸ್ವಿಯಾಗಲಿಕ್ಕಿಲ್ಲ. ಇಂದಿರಾಗಾಂಧಿ ಯತ್ನಿಸಿಯೂ ಅದು ಸಾಧ್ಯವಾಗಿಲ್ಲ. ಅದನ್ನು ಮುಖ್ಯಮಂತ್ರಿ ಪಿಣರಾಯಿವಿಜಯನ್ ಮಾಡಲು ಹೊರಟಿದ್ದಾರೆ. ಆರೆಸ್ಸೆಸ್ ಕಾನೂನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕುಮ್ಮನಂ ರಾಜಶೇಖರನ್ ಹೇಳಿದ್ದಾರೆ. ಶಾಖಾ ಚಟುವಟಿಕೆಗಳ ಮೂಲಕ ದೇವಳಗಳನ್ನು ಆಯುಧ ಸಂಗ್ರಹಾಲಯಗಳಾಗಿ ಆರೆಸ್ಸೆಸ್ ಪರಿವರ್ತಿಸುತ್ತಿದೆ ಎಂದು ಸಚಿವ ಕಡಕಂಪಳ್ಳಿ ಸುರೇಂದ್ರನ್ ಫೇಸ್‌ಬುಕ್ ಮೂಲಕ ಆರೋಪಿಸಿದ್ದಾರೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X