Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಂಚಕನ ‘ಪ್ರೇಮ ಪಾಶಕ್ಕೆ’ ಸಿಲುಕಿ ರೂ....

ವಂಚಕನ ‘ಪ್ರೇಮ ಪಾಶಕ್ಕೆ’ ಸಿಲುಕಿ ರೂ. 94.5 ಲಕ್ಷ ಕಳೆದುಕೊಂಡ ವೃದ್ಧೆ!

ವಾರ್ತಾಭಾರತಿವಾರ್ತಾಭಾರತಿ8 Sept 2016 7:28 PM IST
share
ವಂಚಕನ ‘ಪ್ರೇಮ ಪಾಶಕ್ಕೆ’ ಸಿಲುಕಿ ರೂ. 94.5 ಲಕ್ಷ ಕಳೆದುಕೊಂಡ ವೃದ್ಧೆ!

ಪುಣೆ, ಸೆ.8: ಮದುವೆಯಾಗುವ ಭರವಸೆ ನೀಡಿ 64ರ ಹರೆಯದ ಮಹಿಳೆಯೊಬ್ಬಳಿಗೆ ರೂ. 94.5 ಲಕ್ಷ ವಂಚನೆಯೆಸಗಿರುವ ಆರೋಪಿಯೊಬ್ಬನ ವಿರುದ್ಧ ಚತುಃಶೃಂಗಿಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಂಡನ್‌ನವನೆನ್ನಲಾಗಿರುವ ಹಾರ್ಲಿ ಬೆನ್ಸನ್ ಎಂಬಾತ ಆರೋಪಿಯಾಗಿದ್ದು, ಮಹಿಳೆ ಮಂಗಳವಾರ ಪೊಲೀಸ್ ದೂರು ದಾಖಲಿಸಿದ್ದಳು.
ಫರ್ಗ್ಯೂಸನ್ ಕಾಲೇಜು ರಸ್ತೆಯಾಚೆಗಿನ ಮಾಡೆಲ್ ಕಾಲನಿಯ ನಿವಾಸಿಯಾಗಿರುವ ಈ ವಿಧವೆ ಮಹಿಳೆಯೊಂದಿಗೆ ಶಂಕಿತನು ಫೇಸ್‌ಬುಕ್‌ನ ಮೂಲಕ ಸ್ನೇಹ ಬೆಳೆಸಿಕೊಂಡಿದ್ದನು. ಬೆನ್ಸನ್ ಹಾಗೂ ಮಹಿಳೆ ಸೆಲ್ ಫೋನ್ ನಂಬರ್‌ಗಳನ್ನು ವಿನಿಮಯಿಸಿಕೊಂಡು 2016ರ ಮೇಯಲ್ಲಿ ಪರಸ್ಪರ ಎಸ್‌ಎಂಎಸ್ ಹಾಗೂ ವಾಟ್ಸ್‌ಆ್ಯಪ್ ಸಂದೇಶಗಳನ್ನು ಕಳುಹಿಸಲಾರಂಭಿಸಿದ್ದರು.
ಆರೋಪಿಯು ಒಂದೆರಡು ತಿಂಗಳ ಹಿಂದೆ ಮಹಿಳೆಗೆ ತನ್ನ ಪ್ರೇಮವನ್ನು ನಿವೇದಿಸಿ, ಮದುವೆಯಾಗುವ ಭರವಸೆ ನೀಡಿದ್ದನು. ತಾನು ಭಾರತದಲ್ಲಿ ವಾಸವಾಗಲು ಬಯಸುತ್ತಿದ್ದೇನೆನ್ನುವ ಮೂಲಕ ಆತ ಮಹಿಳೆಯ ವಿಶ್ವಾಸ ಗಳಿಸಿದ್ದನೆಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯ ಗಂಡ 2014ರಲ್ಲಿ ನಿಧನವಾಗಿದ್ದು, ಮಗಳು ಅಮೆರಿಕದಲ್ಲಿ ನೆಲೆಸಿದ್ದಾಳೆ. ಹೀಗಾಗಿ ಮಹಿಳೆ ನಗರದಲ್ಲಿ ಒಬ್ಬಂಟಿಯಾಗಿದ್ದಳು. ಆಕೆ ಈ ಹಿಂದೆ ಕೇಂದ್ರ ಸರಕಾರದ ಪ್ರತಿಷ್ಠಿತ ಸಂಶೋಧನ ಸಂಸ್ಥೆಯೊಂದರಲ್ಲಿ ಅಧ್ಯಾಪಿಕೆಯಾಗಿ ಕೆಲಸ ಮಾಡುತ್ತಿದ್ದು, ಈಗ ನಿವೃತ್ತಳಾಗಿದ್ದಾಳೆ. ಈ ವರ್ಷ ಜು.27ರಂದು ಮಹಿಳೆಗೆ ಕರೆ ಮಾಡಿದ್ದ ಬೆನ್ಸನ್, ತಾನು ಪುಣೆಗೆ ಸ್ಥಳಾಂತರವಾಗುತ್ತಿದ್ದೇನೆ. ತನ್ನಲ್ಲಿ 95 ಸಾವಿರ ಡಾಲರ್ ವೌಲ್ಯದ ಚಿನ್ನ ಹಾಗೂ ವಜ್ರಗಳಿವೆಯೆಂದು ಆತ ಹೇಳಿದ್ದನೆಂದು ಪೊಲೀಸ್ ನಿರೀಕ್ಷಕ ಯು.ಬಿ.ಶಿಂಗಾಡೆ ವಿವರಿಸಿದ್ದಾರೆ.
ಒಂದೆರಡು ದಿನಗಳ ಬಳಿಕ ಮತ್ತೆ ಮಹಿಳೆಗೆ ಕರೆ ಮಾಡಿದ್ದ ಬೆನ್ಸನ್, ತನ್ನನ್ನು ಭಾರತದ ಕಸ್ಟಂಸ್ ಅಧಿಕಾರಿಗಳು ದಿಲ್ಲಿ ವಿಮಾನ ನಿಲ್ದಾಣದಲ್ಲಿ ಹಿಡಿದಿದ್ದು, ಚಿನ್ನ ಹಾಗೂ ವಜ್ರಗಳಿಗಾಗಿ ದಂಡ ಪಾವತಿಸುವಂತೆ ಆಗ್ರಹಿಸುತ್ತಿದ್ದಾರೆ. ತಾನು ಆ ದಂಡ ಪಾವತಿಸುವಷ್ಟು ನಗದು ಹಣ ತಂದಿಲ್ಲವೆಂದು ಹೇಳಿದ್ದನು.
ಬೆನ್ಸನ್ ತನಗೆ ಕೆಲವು ಬ್ಯಾಂಕ್ ಖಾತೆಗಳ ನಂಬರ್‌ಗಳನ್ನು ನೀಡಿ ಅವುಗಳಿಗೆ ಹಣ ಹಾಕುವಂತೆ ವಿನಂತಿಸಿದ್ದನು. ತಾನು ಕೆಲವು ಸಮಯದೊಳಗೆ ಆ ಖಾತೆಗಳಿಗೆ ರೂ. 94.5 ಲಕ್ಷ ಜಮೆ ಮಾಡಿದ್ದೆನು. ಹಣ ಪಡೆದ ಬಳಿಕ ಬೆನ್ಸನ್ ತನ್ನ ಸೆಲ್ ಫೋನನ್ನು ನಿಷ್ಕ್ರಿಯಗೊಳಿಸಿದನೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಆರೋಪಿಗೆ ಹಣ ಕೊಡುವುದಕ್ಕಾಗಿ ಮಹಿಳೆ ತನ್ನ ಜಮೀನಿನ ತುಂಡೊಂದನ್ನು ಮಾರಿದ್ದಳು. ಪೊಲೀಸರು ಬ್ಯಾಂಕ್ ಖಾತೆಗಳ ವಿವರ ಪಡೆದಿದ್ದು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆಂದು ಶಿಂಗಾಡೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X