Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಾಗರಿಕ ಪರಮಾಣು ಸಹಕಾರಕ್ಕೆ ಒತ್ತು ನೀಡಿದ...

ನಾಗರಿಕ ಪರಮಾಣು ಸಹಕಾರಕ್ಕೆ ಒತ್ತು ನೀಡಿದ ಮೋದಿ, ಒಬಾಮ

ಪೂರ್ವ ಏಶ್ಯ ಶೃಂಗ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ8 Sept 2016 8:14 PM IST
share
ನಾಗರಿಕ ಪರಮಾಣು ಸಹಕಾರಕ್ಕೆ ಒತ್ತು ನೀಡಿದ ಮೋದಿ, ಒಬಾಮ

ವಿಯಂಟಿಯಾನ್ (ಲಾವೋಸ್), ಸೆ. 8: ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಲ್ಲಿ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮರನ್ನು ಭೇಟಿಯಾಗಿ ದ್ವಿಪಕ್ಷೀಯ ಭಾಗೀದಾರಿಕೆಯ ತುರ್ತು ಆದ್ಯತೆಗಳ ಬಗ್ಗೆ ಚರ್ಚೆ ನಡೆಸಿದರು. ಮಾತುಕತೆಯಲ್ಲಿ ನಾಗರಿಕ ಪರಮಾಣು ಸಹಕಾರ ಮತ್ತು ಹವಾಮಾನ ಬದಲಾವಣೆಯನ್ನು ಎದುರಿಸುವುದು ಪ್ರಮುಖವಾಗಿ ಪ್ರಸ್ತಾಪವಾಯಿತು.

‘‘ಇಲ್ಲಿ ನಡೆಯುತ್ತಿರುವ ಪೂರ್ವ ಏಶ್ಯ ಶೃಂಗಸಮ್ಮೇಳನದ ನೇಪಥ್ಯದಲ್ಲಿ, ಭಾರತ-ಅಮೆರಿಕ ಸಂಬಂಧದ ಬಗ್ಗೆ ಅಮೆರಿಕದ ಅಧ್ಯಕ್ಷರೊಂದಿಗೆ ಉತ್ತಮ ಮಾತುಕತೆ ನಡೆಸಿದೆ’’ ಎಂದು ಸಭೆಯ ಬಳಿಕ ಮೋದಿ ಟ್ವೀಟ್ ಮಾಡಿದರು.

ಇದು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಮೋದಿ ಮತ್ತು ಒಬಾಮ ನಡುವೆ ನಡೆದ ಎಂಟನೆ ಭೇಟಿಯಾಗಿದೆ.

‘‘ಭಾರತೀಯ ಆರ್ಥಿಕತೆಗೆ ಸುಧಾರಣೆ ತರುವ ಪ್ರಧಾನಿ ಮೋದಿ ಅವರ ಉಪಕ್ರಮಗಳನ್ನು ಒಬಾಮ ಶ್ಲಾಘಿಸಿದರು. ಮುಖ್ಯವಾಗಿ, ಜಿಎಸ್‌ಟಿ ಮಸೂದೆಯು ಅಂಗೀಕಾರವಾಗಿರುವುದು ಹೆಚ್ಚಿನ ಆರ್ಥಿಕ ಚಟುವಟಿಕೆಗಳಿಗೆ ಕಾರಣವಾಗುತ್ತದೆ ಎಂಬ ವಿಶ್ವಾಸವನ್ನು ಒಬಾಮ ವ್ಯಕ್ತಪಡಿಸಿದರು’’ ಎಂದು ಮೂಲಗಳು ತಿಳಿಸಿವೆ.

 ಮಾತುಕತೆಯ ವೇಳೆ ಒಬಾಮ ಮೋದಿ ಅವರ ಉದ್ಯಮಶೀಲತೆ ಮತ್ತು ಹೊಸತನದ ಪ್ರಯತ್ನಗಳನ್ನೂ ಶ್ಲಾಘಿಸಿದರು ಹಾಗೂ ಇದು ಭಾರತದಂಥ ದೇಶದ ಹಿತದೃಷ್ಟಿಯಿಂದ ಮಹತ್ವದ್ದಾಗಿದೆ ಎಂದು ಬಣ್ಣಿಸಿದರು ಎಂದು ಅವು ಹೇಳಿದವು.

ತಾನು ಯಾವತ್ತೂ ಭಾರತದ ಸ್ನೇಹಿತನಾಗಿದ್ದೇನೆ ಹಾಗೂ ‘‘ಭಾರತದ ಪ್ರಭಾವಶಾಲಿ ಭಾಗೀದಾರನಾಗಿ ಮುಂದುವರಿಯುವೆ ಹಾಗೂ ನನ್ನಿಂದಾಗುವ ಎಲ್ಲ ನೆರವನ್ನು ನೀಡುವೆ’’ ಎಂದು ಅಮೆರಿಕದ ಅಧ್ಯಕ್ಷ ಹೇಳಿದರು.

ನಾನಿನ್ನೂ ತಾಜ್‌ಮಹಲ್ ನೋಡಿಲ್ಲ

 ಅಧಿಕಾರಾವಧಿ ಮುಗಿದ ಬಳಿಕ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿ ಅಮೆರಿಕದ ಅಧ್ಯಕ್ಷ ಬರಾಕ್‌ ಒಬಾಮ ಅವರನ್ನು ಈ ಸಂದರ್ಭದಲ್ಲಿ ಆಹ್ವಾನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಒಬಾಮ, ಭಾರತಕ್ಕೆ ಹೋಗುವ ಯಾವುದೇ ಅವಕಾಶವನ್ನು ಸ್ವಾಗತಿಸುವುದಾಗಿ ಹೇಳಿದರು.

‘‘ನಾನು ಮತ್ತು ಪತ್ನಿ ಮಿಶೆಲ್ ಈವರೆಗೆ ತಾಜ್‌ಮಹಲ್ ನೋಡಿಲ್ಲ’’ ಎಂದು ಅವರು ಲಘು ಧಾಟಿಯಲ್ಲಿ ಹೇಳಿದರು.

ಕಳೆದ ವರ್ಷ ತಾಜ್‌ಮಹಲ್‌ಗೆ ಭೇಟಿ ನೀಡುವ ಒಬಾಮ ಅವರ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಸೌದಿ ಅರೇಬಿಯದ ದೊರೆ ಅಬ್ದುಲ್ಲಾ ಅವರ ನಿಧನದ ಹಿನ್ನೆಲೆಯಲ್ಲಿ ಅವರು ಭಾರತದ ಭೇಟಿಯನ್ನು ಮೊಟಕುಗೊಳಿಸಿ ಸೌದಿಗೆ ತೆರಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X