Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನೆರೆರಾಷ್ಟ್ರದಿಂದ ಭೀತಿವಾದದ ಉತ್ಪಾದನೆ...

ನೆರೆರಾಷ್ಟ್ರದಿಂದ ಭೀತಿವಾದದ ಉತ್ಪಾದನೆ ಮತ್ತು ರಫ್ತು: ಪಾಕ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ8 Sept 2016 8:59 PM IST
share
ನೆರೆರಾಷ್ಟ್ರದಿಂದ ಭೀತಿವಾದದ ಉತ್ಪಾದನೆ ಮತ್ತು ರಫ್ತು: ಪಾಕ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಭೀತಿವಾದದ ಈ ಜಾಗತಿಕ ರಫ್ತನ್ನು ನಾವು ನಿಲ್ಲಿಸಬೇಕಾದ ಕಾಲವೀಗ ಬಂದಿದೆ. ನಾವು ಭಯೋತ್ಪಾದಕರನ್ನು ಮಾತ್ರವಲ್ಲ,ಅವರ ಇಡೀ ಬೆಂಬಲ ವ್ಯವಸ್ಥೆಯನ್ನೂ ಗುರಿಯಾಗಿಸಿಕೊಳ್ಳಬೇಕಾಗಿದೆ. ಮತ್ತು ಭೀತಿವಾದವನ್ನು ತಮ್ಮ ಸರಕಾರದ ನೀತಿಯನ್ನಾಗಿ ಮಾಡಿಕೊಳ್ಳುವವರ ವಿರುದ್ಧ ನಮ್ಮ ಅತ್ಯಂತ ಕಠಿಣವಾದ ಕ್ರಮ ಮೀಸಲಾಗಿರಬೇಕು

-ಪ್ರಧಾನಿ ಮೋದಿ

ವಿಯೆಂಟಿಯಾನ್,ಸೆ.8: ಪಾಕಿಸ್ತಾನದ ವಿರುದ್ಧ ಗುರುವಾರ ಇಲ್ಲಿ ಕಟು ಟೀಕಾಪ್ರಹಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ನಮ್ಮ ನೆರೆ ರಾಷ್ಟ್ರವೊಂದು ಭೀತಿವಾದದ ಉತ್ಪಾದನೆ ಮತ್ತು ರಫ್ತಿನಲ್ಲಿ ತೊಡಗಿಕೊಂಡಿದೆ ಎಂದು ಹೇಳಿದರಲ್ಲದೆ, ಈ ‘ಪ್ರಚೋದಕ’ ರಾಷ್ಟ್ರವನ್ನು ದೂರವಿಡುವಂತೆ ಮತ್ತು ಅದರ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಂತರರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದರು.
ಇಲ್ಲಿ 11ನೇಪೂರ್ವ ಏಷ್ಯಾ ಶೃಂಗಸಭೆ(ಇಎಎಸ್)ಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು ಪಾಕಿಸ್ತಾನವನ್ನು ಹೆಸರಿಸದೆ ಈ ಆರೋಪವನ್ನು ಮಾಡಿದರು. ನೆರೆರಾಷ್ಟ್ರದಿಂದ ಭೀತಿವಾದದ ಈ ರಫ್ತು ಶಾಂತಿಯ ಅವಕಾಶವನ್ನು ಕುಗ್ಗಿಸುತ್ತಿದೆ ಮತ್ತು ಹಿಂಸೆಗೆ ಅವಕಾಶವನ್ನು ಹೆಚ್ಚಿಸುತ್ತಿದೆ. ಜೊತೆಗೆ ಶಾಂತಿ ಮತ್ತು ಸರ್ವರ ಪ್ರಗತಿಗೆ ಅಪಾಯವನ್ನುಂಟು ಮಾಡುತ್ತಿದೆ ಎಂದರು. ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಚೀನಾ ಪ್ರಧಾನಿ ಲೀ ಕೆಕಿಯಾಂಗ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಾಲ್ಕು ದಿನಗಳ ಹಿಂದೆ ಬ್ರಿಕ್ಸ್ ಶೃಂಗಸಭೆಯಲ್ಲಿ ಮಾಡಿದ್ದ ಭಾಷಣದಲ್ಲಿ ಮೋದಿ ಅವರು, ಭೀತಿವಾದದ ವಿರುದ್ಧ ಹೋರಾಡಲು ಜಂಟಿ ಪ್ರಯತ್ನಗಳನ್ನು ತೀವ್ರಗೊಳಿಸುವಂತೆ ಇತರ ಬ್ರಿಕ್ಸ್ ರಾಷ್ಟ್ರಗಳಿಗೆ ಕರೆ ನೀಡಿದ್ದರಲ್ಲದೆ ಭಯೋತ್ಪಾದನೆಯ ಬೆಂಬಲಿಗರು ಮತ್ತು ಪ್ರವರ್ತಕರನ್ನು ದೂರವಿಡಲು ಬ್ರಿಕ್ಸ್ ಗುಂಪು ಸಂಘಟಿತ ಪ್ರಯತ್ನಗಳನ್ನು ಮಾಡಬೇಕೆಂದು ಕೋರಿದ್ದರು.
ಭೀತಿವಾದದ ಈ ಜಾಗತಿಕ ರಫ್ತನ್ನು ನಾವು ನಿಲ್ಲಿಸಬೇಕಾದ ಕಾಲವೀಗ ಬಂದಿದೆ. ನಾವು ಭಯೋತ್ಪಾದಕರನ್ನು ಮಾತ್ರವಲ್ಲ,ಅವರ ಇಡೀ ಬೆಂಬಲ ವ್ಯವಸ್ಥೆಯನ್ನೂ ಗುರಿಯಾಗಿಸಿಕೊಳ್ಳಬೇಕಾಗಿದೆ. ಮತ್ತು ಭೀತಿವಾದವನ್ನು ತಮ್ಮ ಸರಕಾರದ ನೀತಿಯನ್ನಾಗಿ ಮಾಡಿಕೊಳ್ಳುವವರ ವಿರುದ್ಧ ನಮ್ಮ ಅತ್ಯಂತ ಕಠಿಣವಾದ ಕ್ರಮ ಮೀಸಲಾಗಿರಬೇಕು ಎಂದು ಮೋದಿ ಹೇಳಿದರು.
ಭೀತಿವಾದವು ಮುಕ್ತ ಮತ್ತು ಬಹುಮಖಿ ಸಮಾಜಕ್ಕೆ ಅತ್ಯಂತ ಗಂಭೀರ ಸವಾಲಾಗಿದೆ ಎಂದ ಅವರು, ಈ ಪಿಡುಗಿನ ವಿರುದ್ಧ ಹೋರಾಟಕ್ಕೆ ಸಂಘಟಿತ ಪ್ರಯತ್ನ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು.
ಪ್ರಾದೇಶಿಕ ಒಗ್ಗೂಡುವಿಕೆ ಮತ್ತು ಸಹಕಾರವನ್ನು ಹೆಚ್ಚಿಸುವ ಪ್ರಯತ್ನಗಳಲ್ಲಿ ಆಸಿಯಾನ್ ರಾಷ್ಟ್ರಗಳು ಮುಂಚೂಣಿಯಲ್ಲಿರುತ್ತವೆ ಮತ್ತು ಕೇಂದ್ರ ಪಾತ್ರವನ್ನು ನಿರ್ವಹಿಸುತ್ತವೆ ಎಂದು ಅವರು ಆಶಯವನ್ನು ವ್ಯಕ್ತಪಡಿಸಿದರು.
ಇಎಎಸ್ ಅಣ್ವಸ್ತ್ರ ಪ್ರಸರಣ ತಡೆ ಕುರಿತಂತೆ ಹೇಳಿಕೆಯೊಂದನ್ನು ಅಂಗೀಕರಿಸುತ್ತಿದೆ ಮತ್ತು ಭಾರತವು ತನ್ನ ಧ್ಯೇಯೋದ್ದೇಶಗಳನ್ನು ಬಲಗೊಳಿಸಲು ಬದ್ಧವಾಗಿದೆ. ಇದು ಉಭಯ ಪಕ್ಷಗಳ ನಿಲುವಿನಲ್ಲಿ ಸಮಾನತೆಯನ್ನು ಸೂಚಿಸುತ್ತಿದೆ ಎಂದು ಅವರು ಹೇಳಿದರು.
ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆಯ ಸಾಕಾರವನ್ನು ಬೆಂಬಲಿಸುವುದಕ್ಕೆ ಭಾರತವು ಬದ್ಧವಾಗಿದೆ ಎಂದ ಅವರು, ಪ್ರದೇಶದಲ್ಲಿ ಹಾಲಿ ನಡೆಯುತ್ತಿರುವ ಆರ್ಥಿಕ ಒಗ್ಗೂಡುವಿಕೆಯನ್ನು ಇನ್ನಷ್ಟು ಗಾಢಗೊಳಿಸುವುದಕ್ಕಾಗಿ ಏಷ್ಯಾ-ಪ್ಯಾಸಿಫಿಕ್ ಆರ್ಥಿಕ ಸಹಕಾರದಲ್ಲಿ ಭಾರತವು ಸಹ ಮಹತ್ವದ ಪಾತ್ರವನ್ನು ವಹಿಸಬಹುದಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X