Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳ್ಳಭಟ್ಟಿ ದಂಧೆ ಆರೋಪ ರಾಜಕೀಯ ...

ಕಳ್ಳಭಟ್ಟಿ ದಂಧೆ ಆರೋಪ ರಾಜಕೀಯ ಪ್ರೇರಿತ

ಕಿರುಕುಳ ನೀಡಿದರೆ ಪ್ರತಿಭಟನೆ: ಹಾಡಿ ಜನರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ8 Sept 2016 9:49 PM IST
share

ಮಡಿಕೇರಿ, ಸೆ.8: ತಿತಿಮತಿ ಗ್ರಾಪಂ ವ್ಯಾಪ್ತಿಯ ಹಾಡಿಗಳಿರುವ ಪ್ರದೇಶದಲ್ಲಿ ಕಳ್ಳಭಟ್ಟಿ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಅಮಾಯಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದ್ದು, ಅಧಿಕಾರಿಗಳು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಗ್ರಾಪಂ ಸದಸ್ಯರು ಹಾಗೂ ಹಾಡಿಯ ಕೆಲವು ಪ್ರಮುಖರು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಪಂ ಸದಸ್ಯೆ ಪಿ.ಎಂ.ವಿಜಯಾ, ಕಳ್ಳಭಟ್ಟಿ ದಂಧೆ ಆರೋಪ ರಾಜಕೀಯರಿ ಪ್ರೇತವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುಬ್ರು, ರಾಮು, ಶಂಕರ ಹಾಗೂ ಪಾರ್ವತಿ ಎಂಬವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದ್ದು, ಇವರುಗಳು ಅಮಾಯಕರಾಗಿದ್ದಾರೆ. ಕಳ್ಳಭಟ್ಟಿ ದಂಧೆ ನಡೆಸುತ್ತಿರುವ ನೈಜ ಆರೋಪಿಗಳನ್ನು ಬಂಧಿಸದೆ ರಾಜಕೀಯ ದುರುದ್ದೇಶದಿಂದ ಗ್ರಾಪಂ ಸದಸ್ಯ ಸುಬ್ರು ವಿರುದ್ಧ ಅಬಕಾರಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಳ ಒಪ್ಪಂದದಂತೆ ಗ್ರಾಪಂ ಅಧ್ಯಕ್ಷ ಸ್ಥಾನದ ಅಧಿಕಾರ ತಲಾ ಎರಡೂವರೆ ವರ್ಷ ಹಂಚಿಕೆಯಾಗಬೇಕಾಗಿತ್ತು. ಈ ಒಪ್ಪಂದಕ್ಕೆ ವಿರುದ್ಧವಾಗಿ ನಡೆದುಕೊಳ್ಳುವ ಹುನ್ನಾರದಿಂದ ಸುಬ್ರು ಅವರನ್ನು ಕಳ್ಳಭಟ್ಟಿ ದಂಧೆಯ ಹೆಸರಿನಲ್ಲಿ ಸಿಲುಕಿಸಲಾಗಿದೆ ಎಂದು ವಿಜಯ ಆರೋಪಿಸಿದರು. ಹಾಡಿ ಭಾಗದಲ್ಲಿ ಕೆಲವರು ಔಷಧಕ್ಕಾಗಿ ಕಳ್ಳಭಟ್ಟಿ ತಯಾರಿಸುವುದು ನಮ್ಮ ಗಮನಕ್ಕೆ ಬಂದಿದೆ. ಹಾಡಿ ಮುಖಂಡರೆಲ್ಲಾ ಜನರ ಸಭೆ ನಡೆಸಿ ಕಳ್ಳಭಟ್ಟಿ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಸದ್ಯದಲ್ಲಿಯೇ ಮಾಡಲಾಗುವುದೆಂದು ಅವರು ತಿಳಿಸಿದರು.

ಪ್ರಮುಖರಾದ ಬೋಜ ಮಾತನಾಡಿ, ಗ್ರಾಪಂ ಅಧ್ಯಕ್ಷರು ಕಳ್ಳಭಟ್ಟಿ ದಂಧೆ ನಡೆಯುತ್ತಿರುವುದಕ್ಕೆ ತಾವೇ ಪ್ರತ್ಯಕ್ಷ ಸಾಕ್ಷಿ ಎಂದು ಹೇಳಿಕೊಂಡಿದ್ದು, ಇದು ಅತ್ಯಂತ ಖಂಡನೀಯವಾಗಿದೆ. ಹಾಡಿ ಪ್ರದೇಶದಲ್ಲಿ ವಾಸವಿಲ್ಲದ ಅಧ್ಯಕ್ಷರು ಕಳ್ಳಭಟ್ಟಿ ತಯಾರಿಕೆಯ ಸ್ಥಳ ಹಾಗೂ ವಸ್ತುಗಳನ್ನು ಸಾಕ್ಷೀಕರಿಸಲಿ ಎಂದು ಸವಾಲು ಹಾಕಿದರು.

ರಾಜಕೀಯ ದುರುದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಗ್ರಾಪಂ ಅಧ್ಯಕ್ಷರು ಹಾಡಿಗಳ ಅಭಿವೃದ್ಧಿಗೆ ಯಾವುದೇ ಕಾಳಜಿಯನ್ನು ತೋರುತ್ತಿಲ್ಲವೆಂದು ಆರೋಪಿಸಿದರು.

ಈ ಭಾಗದ ಜಿಪಂ ಸದಸ್ಯರು ಕೂಡ ಕಳೆದ ಹತ್ತು ವರ್ಷಗಳಿಂದ ಗಿರಿಜನರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಿಲ್ಲ. ಶಾಸಕರಾದ ಕೆ.ಜಿ.ಬೋಪಯ್ಯ ಅವರ ಶಿಫಾರಸಿನಿಂದ ತಲಾ ಐವರಿಗೆ ಟಿಲ್ಲರ್ ಹಾಗೂ ಮೋಟರ್ ವಿತರಣೆಯಾಗಿದೆ. ಇದನ್ನು ಸಹಿಸದ ಮಂದಿ ಕಳ್ಳಭಟ್ಟಿ ದಂಧೆಯ ಹಣೆಪಟ್ಟಿ ಕಟ್ಟಿ ಹಾಡಿಯ ಜನರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಕಳ್ಳಭಟ್ಟಿ ಸೇವಿಸಿ ವನ್ಯಜೀವಿಗಳು ಮೃತಪಟ್ಟಿವೆ ಎನ್ನುವ ಆರೋಪ ನಿರಾಧಾರವಾಗಿದ್ದು, ಈ ಬಗ್ಗೆ ಆಧಾರ ಒದಗಿಸಲಿ ಎಂದು ಬೋಜ ಒತ್ತಾಯಿಸಿದರು. ಅಬಕಾರಿ ಅಧಿಕಾರಿಗಳು ಅಮಾಯಕರ ವಿರುದ್ಧ ಕಿರುಕುಳ ಮುಂದುವರಿಸಿದರೆ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪಿ.ಪಿ.ರಾಜು, ಪಿ.ಸಿ.ರಾಮು, ಪಿ.ಆರ್.ಮಣಿ ಹಾಗೂ ಪೊನ್ನು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X