Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿರಿಯಾನಿಗೆ ಕೈ ಹಾಕಿ ವ್ಯಾಪಾರಿಗಳ...

ಬಿರಿಯಾನಿಗೆ ಕೈ ಹಾಕಿ ವ್ಯಾಪಾರಿಗಳ ಗಂಜಿಗೆ ಕುತ್ತು ತಂದ ಸರಕಾರ

ವಾರ್ತಾಭಾರತಿವಾರ್ತಾಭಾರತಿ10 Sept 2016 3:04 PM IST
share
ಬಿರಿಯಾನಿಗೆ ಕೈ ಹಾಕಿ ವ್ಯಾಪಾರಿಗಳ ಗಂಜಿಗೆ ಕುತ್ತು ತಂದ ಸರಕಾರ

ಮೇವತ್,ಸೆ.10 : ಬಿರಿಯಾನಿಯಲ್ಲಿ ಗೋಮಾಂಸವನ್ನೂ ಸೇರಿಸಲಾಗುತ್ತಿದೆಯೆಂಬ ದೂರುಗಳ ಆಧಾರದಲ್ಲಿ ಹರ್ಯಾಣ ರಾಜ್ಯದ ಮೇವತ್ ಜಿಲ್ಲೆಯ ಹಲವೆಡೆ ಪೊಲೀಸ್ ಅಧಿಕಾರಿಗಳು ಬಿರಿಯಾನಿ ಮಾರಾಟಗಾರರ ಮೇಲೆ ನಿಗಾ ಇಟ್ಟಿರುವ ಕಾರಣ ಈಗ ಬಿರಿಯಾನಿ ಮಾರಾಟಗಾರರು ಮುಖ್ಯವಾಗಿ ರಸ್ತೆ ಬದಿ ವ್ಯಾಪಾರಿಗಳು ತೀವ್ರ ಸಂಕಷ್ಟದಲ್ಲಿದ್ದಾರೆಂದು ಹಿಂದುಸ್ತಾನ್ ಟೈಮ್ಸ್ ವರದಿಯೊಂದು ತಿಳಿಸಿದೆ.

ಮೇವತ್ ಜಿಲ್ಲೆಯ ಮುಸ್ಲಿಂ ಬಾಹುಳ್ಯ ಪ್ರದೇಶವಾದ ನುಹ್ ಚೌಕ್ ನಲ್ಲಿ ಬಿರಿಯಾನಿ ಮಾರಾಟಗಾರರು ಅಲ್ಲಿನ ಜನಪ್ರಿಯ ‘ಗೋಷ್ಟ್’ ಇನ್ನು ಮುಂದೆ ಉಪಯೋಗಿಸುವ ಹಾಗಿಲ್ಲ. ಕೆಂಪು ಮಾಂಸ (ಗೋಮಾಂಸ, ಆಡಿನಹಾಗೂ ಕೆಲವೊಮ್ಮೆ ಎತ್ತಿನ ಮಾಂಸ) ಇಲ್ಲಿನ ಜನರಿಗೆ ಇಷ್ಟವಾದರೂ ಗೋಮಾಂಸವನ್ನು ಉಪಯೋಗಿಸುವ ಹಾಗಿಲ್ಲವಾದುದರಿಂದಬಿರಿಯಾನಿ ತಯಾರಕರು ಹಾಗೂ ಮಾರಾಟಗಾರರುಕೆಂಪು ಮಾಂಸ (ರೆಡ್ ಮೀಟ್) ಉಪಯೋಗಿಸುವುದನ್ನು ಬಿಟ್ಟು ಈಗ ಕೇವಲ ಕೋಳಿ ಮಾಂಸವನ್ನಷ್ಟೇ ತಮ್ಮ ಬಿರಿಯಾನಿಗಳಿಗೆ ಉಪಯೋಗಿಸಲಾರಂಭಿಸಿದ್ದಾರೆ.

ಅಥವಾ ಬಕ್ರೀದ್ ಹಬ್ಬ ಹತ್ತಿರ ಬರುತ್ತಿದ್ದಂತೆಯೇಅಧಿಕಾರಿಗಳು ಹಲವಾರು ಕಡೆಗಳಿಂದ ಬಿರಿಯಾನಿ ಸ್ಯಾಂಪಲ್ಲುಗಳನ್ನು ಸಂಗ್ರಹಿಸಿಅವುಗಳನ್ನು ಪರೀಕ್ಷಿಸಲಾಗಿ ಗೋಮಾಂಸವಿದೆಯೆಂದು ಪತ್ತೆಯಾಗಿತ್ತು.

ಅಧಿಕಾರಿಗಳಿಗಿಂತ ಹೆಚ್ಚಾಗಿ ಇಲ್ಲಿನಮಾರಾಟಗಾರರಲ್ಲಿ ಸ್ವಘೋಷಿತ ಗೋರಕ್ಷಕರ ಬಗ್ಗೆ ಹೆಚ್ಚು ಭಯವಿದೆ. ರಾಜ್ಯ ಸರಕಾರದ ಗೋ ರಕ್ಷಾ ಹಾಗೂ ಗೋ ಸಂವರ್ಧನಾ ಯೋಜನೆಯನ್ವಯ ಗೋಹತ್ಯೆ, ಮಾರಾಟ ಹಾಗೂ ಗೋಮಾಂಸ ಸೇವನೆ ಅಪರಾಧವಾಗಿದೆ.

ಮೊಹಮ್ಮದ್ ಅಕ್ಬರ್ ಎಂಬ ರಸ್ತೆ ಬದಿ ಬಿರಿಯಾನಿ ಮಾರಾಟಗಾರ ಹೇಳುವಂತೆ ಕಳೆದ ವಾರದ ತನಕ ನುಹ್ ಪ್ರದೇಶದಲ್ಲಿ 30 ಮಂದಿ ರಸ್ತೆ ಬದಿಗಳಲ್ಲಿ ಬಿರಿಯಾನಿ ಮಾರಾಟ ಮಾಡುತ್ತಿದ್ದರೆ ಈಗ ಅವರ ಸಂಖ್ಯೆಅರ್ಧಕ್ಕಿಂತಲೂ ಕಡಿಮೆಯಾಗಿದೆ. ಕಳೆದ 12 ವರ್ಷಗಳಿಂದ ಇಲ್ಲಿ ಬಿರಿಯಾನಿ ಮಾರಾಟ ಮಾಡುತ್ತಿರುವ ಅಕ್ಬರ್ ಪ್ರಕಾರ ಇಂತಹ ಪರಿಸ್ಥಿತಿ ಬಿರಿಯಾನಿ ಮಾರಾಟಗಾರರಿಗೆ ಯಾವತ್ತೂ ಎದುರಾಗಿರಲಿಲ್ಲ.

‘‘ಮೇವತ್ ನ ಕೆಲ ಒಳ ಪ್ರದೇಶಗಳಿಂದ ನಮಗೆ ಗೋಮಾಂಸ ಪೂರೈಸಲಾಗುತ್ತಿತ್ತು. ಆದರೆ ಪೊಲೀಸರ ಕಾರ್ಯಾಚರಣೆಯ ನಂತರ ಅದು ನಿಂತಿದೆ,’’ಎಂದು ಹೆಸರು ಬಹಿರಂಗ ಪಡಿಸಲಿಚ್ಛಿಸದ ಬಿರಿಯಾನಿ ಮಾರಾಟಗಾರರೊಬ್ಬರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X