Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರದಿಂದ ಸರಕಾರಿ ಶಾಲೆಗಳ ಖಾಸಗೀಕರಣ...

ಸರಕಾರದಿಂದ ಸರಕಾರಿ ಶಾಲೆಗಳ ಖಾಸಗೀಕರಣ ಸಲ್ಲದು: ಶಾಸಕ ದತ್ತ

ಶಿಕ್ಷಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ10 Sept 2016 10:25 PM IST
share
ಸರಕಾರದಿಂದ ಸರಕಾರಿ ಶಾಲೆಗಳ ಖಾಸಗೀಕರಣ ಸಲ್ಲದು: ಶಾಸಕ ದತ್ತ

ಕಡೂರು, ಸೆ.10: ಸರಕಾರ ಒಂದು ಕಡೆ ಕನ್ನಡ ಶಾಲೆಗಳನ್ನು ಉಳಿಸಿ ಎಂದು ಹೇಳುತ್ತದೆ. ಇನ್ನೊಂದು ಕಡೆ ಆರ್‌ಟಿಇ ಯೋಜನೆಯಡಿ ಸರಕಾರಿ ಶಾಲೆಯ ಪ್ರತೀ ಐದು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವುದರ ಮೂಲಕ ಖಾಸಗಿ ಶಾಲೆಗಳಿಗೆ ಉತ್ತೇಜನ ನೀಡುತ್ತಿದೆ. ಈ ಪದ್ಧತಿಯನ್ನು ಸರಕಾರ ತಿರಸ್ಕರಿಸಬೇಕಿದೆ ಎಂದು ಶಾಸಕ ವೈ.ಎಸ್.ವಿ. ದತ್ತ ತಿಳಿಸಿದರು.

ಅವರು ಶನಿವಾರ ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿಯ ವತಿಯಿಂದ ಗಣಪತಿ ಪೆಂಡಾಲ್ ಆವರಣದಲ್ಲಿ ಡಾ. ಎಸ್. ರಾಧಾಕೃಷ್ಣನ್‌ರ ಜನ್ಮದಿನೋತ್ಸವದ ಅಂಗವಾಗಿ 55ನೆ ಶಿಕ್ಷಕರ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಆರ್‌ಟಿಇ ಯೋಜನೆಯಡಿ ಪ್ರತಿ ಮಗುವಿಗೆ ಖಾಸಗಿ ಶಾಲೆಗೆ 25,000 ರೂ. ನೀಡುತ್ತಾ ಈ ಯೋಜನೆಗಾಗಿ 2,400 ಕೋಟಿ ರೂ.ವ್ಯಯ ಮಾಡುತ್ತಿದೆ. ಇದು ಕೇಂದ್ರ ಸರಕಾರದ ಯೋಜನೆಯಾಗಿದ್ದರೂ ರಾಜ್ಯ ಸರಕಾರವೇ ಪೂರ್ಣ ಹಣ ಭರಿಸಬೇಕಿದೆ. ಹಲವಾರು ರಾಜ್ಯಗಳು ಈ ಯೋಜನೆಯನ್ನು ತಿರಸ್ಕರಿಸಿವೆ. ನಮ್ಮ ರಾಜ್ಯ ಸರಕಾರವು ಈ ಯೋಜನೆಯನ್ನು ತೆಗೆದು ತಿರಸ್ಕರಿಸಬೇಕಿದೆ ಎಂದು ತಿಳಿಸಿದರು. ಸಾಹಿತಿ ಡಾ. ಶ್ರೀಕಂಠಕೂಡಿಗಿ ಉಪನ್ಯಾಸ ನೀಡಿ ಮಾತನಾಡಿ, ಶಿಕ್ಷಣದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಅದರ ಜೊತೆಗೆ ಜಾತಿ ಭಾವನೆಗಳು ಹೆಚ್ಚಾಗಿವೆ. ಉನ್ನತ ಶಿಕ್ಷಣ ಪಡೆದವರೇ ಹೆಚ್ಚು ಹೆಚ್ಚು ಜಾತಿವಾದಿಗಳು, ಭಯೋತ್ಪಾದಕರಾಗುತ್ತಿದ್ದಾರೆ. ಶಿಸ್ತು ಶಿಕ್ಷಣದ ಒಂದು ಅಂಗ. ಶಿಕ್ಷಕನಾದವನಿಗೆ ರಾಜಕಾರಣ ಇರಬಾರದು, ದೇಶದ ಪ್ರಥಮ ಶತ್ರು ಎಂದರೆ ರಾಜಕಾರಣಿಗಳು, ಉನ್ನತ ಮಟ್ಟದ ಅಧಿಕಾರಿಗಳೇ ದೇಶದ್ರೋಹಿಗಳು. ಇವರುಗಳಿಂದ ಈ ದೇಶಕ್ಕೆ ಭವಿಷ್ಯವಿಲ್ಲ ಎಂದು ತಿಳಿಸಿದರು.

 ಜಿಪಂ ಸದಸ್ಯ ಕೆ.ಆರ್. ಮಹೇಶ್ ಒಡೆಯರ್ ಮಾತನಾಡಿ, ಸಮಾಜವನ್ನು ತಿದ್ದಿ ಬೆಳೆಸುವವರು, ಜೀವನ ಶೈಲಿಯನ್ನು ಬದಲಿಸುವವರು ಶಿಕ್ಷಕರು. ಶಿಕ್ಷಣದ ನೀತಿಗಳು, ಧೋರಣೆಗಳನ್ನು ನೋಡಿದರೆ ಶಿಕ್ಷಕರನ್ನು ನೋವಿಗೆ ಗುರಿ ಮಾಡುತ್ತದೆ. ಸರಕಾರವೇ ಶಿಕ್ಷಕರ ದಿನಾಚರಣೆಯನ್ನು ಆಚರಿಸುವಂತಾಗಬೇಕಿದೆ. ಶಿಕ್ಷಕರೇ ಹಣ ಭರಿಸಿಕೊಂಡು ಸಭೆೆ ನಡೆಸುವುದು ವಿಷಾದನೀಯ. ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನೀತಿಯಿಂದ ಸರಕಾರವೇ ದಾರಿ ತಪ್ಪಿಸುತ್ತಿದೆ. ಸರಕಾರದ ಹಲವಾರು ಕಾರ್ಯಕ್ರಮಗಳ ಜವಾಬ್ದಾರಿಯನ್ನು ಶಿಕ್ಷಕರಿಗೆ ನೀಡಿದರೆ ಅವರು ಮಕ್ಕಳಿಗೆ ಪಾಠ ಮಾಡುವುದು ಯಾವಾಗ ಎಂಬಂತಾಗಿದೆ ಎಂದು ತಿಳಿಸಿದರು. ಪ್ರಾಸ್ತಾವಿಕವಾಗಿ ಶಿಕ್ಷಣಾಧಿಕಾರಿ ಶ್ರೀಕಂಠೇಶ್ವರ್ ಮಾತನಾಡಿದರು. ತಾಪಂ ಅಧ್ಯಕ್ಷೆ ರೇಣುಕಾ ಉಮೇಶ್ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಜಿಪಂ ಸದಸ್ಯರಾದ ಶರತ್ ಕೃಷ್ಣಮೂರ್ತಿ, ಕಾವೇರಿ ಲಕ್ಕಪ್ಪ, ಲೋಲಾಕ್ಷಿಬಾಯಿ, ತಾಪಂ ಉಪಾಧ್ಯಕ್ಷ ರುದ್ರಮೂರ್ತಿ, ಪುರಸಭೆ ಅಧ್ಯಕ್ಷೆ ಅನಿತಾ ರಾಜ್‌ಕುಮಾರ್, ಉಪಾಧ್ಯಕ್ಷ ಮಂಜುನಾಥ್, ಡಿ. ಉಮೇಶ್, ಸರಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಆನಂದಮೂರ್ತಿ ಮುಂತಾದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X