ಸಾಮಾಜಿಕ ಜಾಲತಾಣದಲ್ಲಿ ಕಟೀಲು ಕ್ಷೇತ್ರದ ಅವಹೇಳನ: ಓರ್ವ ವಶಕ್ಕೆ
ಮಂಗಳೂರು, ಸೆ.10: ಶ್ರೀ ಕಟೀಲು ದೇವಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸರು ಓರ್ವನನ್ನು ವಶಕ್ಕೆ ಬಂಧಿಸಿದ್ದಾರೆ.
ಬಂಧಿತನನ್ನು ಚಿಕ್ಕಮಗಳೂರು ಕೊಪ್ಪದ ನಿವಾಸಿ ಹನೀಫ್ ಎಂದು ಗುರುತಿಸಲಾಗಿದೆ.
ದೇವತೆಗಳ ಬಗ್ಗೆ ನಿಂದನೆಯ ಬರಹ ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಆರೋಪಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಪೊಲೀಸರು ಇನ್ನೂ ಕೆಲವರನ್ನು ಬಂಧಿಸುವ ಸಾಧ್ಯತೆ ಇದೆ.
Next Story