Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಣ್ವಸ್ತ್ರ ಶಕ್ತ ರಾಷ್ಟ್ರವೆಂಬ ಮಾನ್ಯತೆ...

ಅಣ್ವಸ್ತ್ರ ಶಕ್ತ ರಾಷ್ಟ್ರವೆಂಬ ಮಾನ್ಯತೆ ನೀಡಿ

ಅಮೆರಿಕಕ್ಕೆ ಉ.ಕೊರಿಯ ಸವಾಲು

ವಾರ್ತಾಭಾರತಿವಾರ್ತಾಭಾರತಿ11 Sept 2016 11:46 PM IST
share

ಯೊಂಗ್‌ಯಾಂಗ್ (ಉ.ಕೊರಿಯ),ಸೆ.11: ತಾನೊಂದು ಕಾನೂನುಬದ್ಧ ಅಣ್ವಸ್ತ್ರ ರಾಷ್ಟ್ರವೆಂದು ಅಮೆರಿಕವು ತನಗೆ ಮಾನ್ಯತೆ ನೀಡಬೇಕೆಂಬ ತನ್ನ ಬೇಡಿಕೆಯನ್ನು ಉತ್ತರ ಕೊರಿಯ ರವಿವಾರ ಪುನರುಚ್ಚರಿಸಿದೆ. ಇತ್ತೀಚೆಗೆ ಬೃಹತ್ ಅಣ್ವಸ್ತ್ರ ಪರೀಕ್ಷೆಯನ್ನು ನಡೆಸಿರುವ ಉತ್ತರ ಕೊರಿಯದ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಜಾಗತಿಕ ಶಕ್ತಿಗಳು ಮಾರ್ಗೋಪಾಯಗಳನ್ನು ಹುಡುಕುತ್ತಿರುವಾಗಲೇ ಉತ್ತರ ಕೊರಿಯ ಈ ಹೇಳಿಕೆ ನೀಡಿದೆ.

ಉತ್ತರ ಕೊರಿಯದ ವಿದೇಶಾಂಗ ಸಚಿವಾಲಯದ ವಕ್ತಾರ ಇಂದು ಬಿಡುಗಡೆಗೊಳಿಸಿದ ಹೇಳಿಕೆಯೊಂದರಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ನೀತಿಯು ನೈತಿಕ ದಿವಾಳಿತನದಿಂದ ಕೂಡಿದೆಯೆಂದು ಟೀಕಿಸಿದ್ದಾರೆ.

 ‘‘ಕಾನೂನುಬದ್ಧ ಅಣ್ವಸ್ತ್ರ ಶಕ್ತ ರಾಷ್ಟ್ರವೆಂಬ ಸ್ಥಾನಮಾನವನ್ನು ಉತ್ತರಕ್ಕೆ ಕೊರಿಯಾಗೆ ನಿರಾಕರಿಸಲು ಬರಾಕ್ ಒಬಾಮಾ ಭಾರೀ ಶ್ರಮಪಡುತ್ತಿದ್ದಾರೆ. ಆದರೆ ಅವರ ಈ ಕೃತ್ಯವು ಅಂಗೈಯನ್ನು ಅಡ್ಡಹಿಡಿದು, ಸೂರ್ಯನನ್ನು ಮರೆಮಾಚಲು ಯತ್ನಿಸುವಷ್ಟೇ ಮೂರ್ಖತನದ್ದಾಗಿದೆಯೆಂದು’’ ವಿದೇಶಾಂಗ ವಕ್ತಾರರು ಹೇಳಿಕೆಯನ್ನು ಉಲ್ಲೇಖಿಸಿ, ಉ.ಕೊರಿಯದ ಅಧಿಕೃಕ ಸುದ್ದಿಸಂಸ್ಥೆ ಕೆಸಿಎನ್‌ಎ ವರದಿ ಮಾಡಿದೆ.

ಉತ್ತರ ಕೊರಿಯ ಎಂಟು ತಿಂಗಳ ಬಳಿಕ ಎರಡನೆ ಬಾರಿಗೆ ಅಣ್ವಸ್ತ್ರ ಪರೀಕ್ಷೆ ನಡೆಸಿದೆ. ಕಳೆದ ಶುಕ್ರವಾರ 10 ಕಿಲೋ ಟನ್ ಪ್ರಮಾಣದ ಅಣ್ವಸ್ತ್ರವನ್ನು ಪರೀಕ್ಷಿಸಲಾಗಿದ್ದು, ಅದು ಹಿಂದಿಗಿಂತ ಎರಡು ಪಟ್ಟು ಅಧಿಕ ಶಕ್ತಿಶಾಲಿಯಾಗಿದೆ.

ಶುಕ್ರವಾರ ನಡೆಸಲಾದ ಅಣ್ವಸ್ತ್ರ ಪರೀಕ್ಷೆಯ ಯಶಸ್ಸಿನಿಂದಾಗಿ ಉತ್ತರ ಕೊರಿಯದ ಪ್ರಜೆಗಳು ಆನಂದತುಂದಿಲರಾಗಿದ್ದಾರೆಂದು ಕೆಸಿಎನ್‌ಎ ಸುದ್ದಿಸಂಸ್ಥೆ ಹೇಳಿದೆ. ‘‘‘ಉಕ್ಕಿನ ಮನಸ್ಸಿನ ದಂಡನಾಯಕನ ಮಾರ್ಗದರ್ಶನದೊಂದಿಗೆ ಹಾಗೂ ಕೊರಿಯನ್ ಜನತೆಯ ಬಲದೊಂದಿಗೆ ಮುನ್ನಡೆಯುತ್ತಿರುವ ಈ ದೇಶದ ಘನತೆಯನ್ನು, ಅಣ್ವಸ್ತ್ರ ಪರೀಕ್ಷೆಯು ಪ್ರದರ್ಶಿಸಿದೆ’’ ಎಂದು ಪರಮಾಣು ವಿಜ್ಞಾನಿ ಕ್ವಾಂಗ್-ಹೊ ಹೇಳಿರುವುದಾಗಿ ಕೆಸಿಎನ್‌ಎ ಸುದ್ದಿ ಸಂಸ್ಥೆ ತಿಳಿಸಿದೆ.

 ಸಾಮಾನ್ಯ ಕ್ಷಿಪಣಿಯಲ್ಲಿಯೂ ಅಳವಡಿಸಲು ಸಾಧ್ಯವಾಗುವಂತಹ ರೀತಿಯಲ್ಲಿ ಅಣ್ವಸ್ತ್ರ ಸಿಡಿತಲೆಯ ಗಾತ್ರವನ್ನು ತಾನು ಕಿರಿದುಗೊಳಿಸಿರುವುದಾಗಿ ಉತ್ತರ ಕೊರಿಯ ಘೋಷಿಸಿರುವುದು ಅಮೆರಿಕ ಸೇರಿದಂತೆ ಅಂತಾರಾಷ್ಟ್ರೀಯ ಸಮುದಾಯವನ್ನು ಚಿಂತೆಗೀಡು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X