Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಓಣಂ ಹಬ್ಬವನ್ನು ಪ್ರಶ್ನಿಸಿದ ಆರೆಸ್ಸೆಸ್:...

ಓಣಂ ಹಬ್ಬವನ್ನು ಪ್ರಶ್ನಿಸಿದ ಆರೆಸ್ಸೆಸ್: ಕೇರಳದಲ್ಲಿ ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ11 Sept 2016 11:59 PM IST
share

ತಿರುವನಂತಪುರ, ಸೆ.11: ಓಣಂ ಹಬ್ಬದ ಸಂಭ್ರಮಾಚರಣೆಗೆ ಕೇರಳ ಸಜ್ಜಾಗುತ್ತಿದೆ. ಇದೇ ವೇಳೆ ಈ ಹಬ್ಬದ ಹಿಂದಿರುವ ದಂತಕಥೆಯನ್ನು ಪ್ರಶ್ನಿಸುವ ಮೂಲಕ ಆರೆಸ್ಸೆಸ್ ವಿವಾದವೊಂದನ್ನು ಸೃಷ್ಟಿಸಿದೆ. ಓಣಂ ಹಬ್ಬ ವಿಷ್ಣುವಿನ ಅವತಾರ ವಾಮನನ ಜನನದ ಸಂಭ್ರಮಾಚರಣೆಯಾಗಿದೆಯೇ ಹೊರತು, ದಾನವ ರಾಜ ಮಹಾಬಲಿಯು ತನ್ನ ರಾಜ್ಯಕ್ಕೆ ಭೇಟಿ ನೀಡುವ ಸಂಕೇತವಲ್ಲ ಎಂದು ಅದು ವಾದಿಸಿದೆ.

ಆರೆಸ್ಸೆಸ್‌ನ ಮುಖವಾಣಿ ‘ಕೇಸರಿ’ಯಲ್ಲಿ ಪ್ರಕಟ ಗೊಂಡಿರುವ, ಕೆ.ಉಣ್ಣಿಕೃಷ್ಣನ್ ನಂಬೂದಿರಿ ಅವರು ಬರೆದಿರುವ ಲೇಖನವು ವಾಮನ ಕುತಂತ್ರದಿಂದ ಬಲಿ ಚಕ್ರವರ್ತಿಯನ್ನು ಪಾತಾಳಕ್ಕೆ ಕಳುಹಿಸಿದ್ದ ಮತ್ತು ಬಲಿ ಚಕ್ರವರ್ತಿ ತನ್ನ ಪ್ರಜೆಗಳನ್ನು ಭೇಟಿಯಾಗಲು ಪ್ರತಿ ವರ್ಷ ಭೂಮಿಗೆ ಮರಳುತ್ತಾನೆ ಎಂಬ ಜನಪ್ರಿಯ ಹಾಗೂ ವ್ಯಾಪಕವಾಗಿ ಹರಡಿರುವ ದಂತಕಥೆಯನ್ನು ಬೆಂಬಲಿಸುವ ಪ್ರಸ್ತಾಪ ಯಾವುದೇ ಪುರಾಣ ಗ್ರಂಥಗಳಲ್ಲಿ ಇಲ್ಲ ಎಂದು ಪ್ರತಿಪಾದಿಸಿದೆ.

ಲೇಖನಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಹಿರಿಯ ಸಿಪಿಎಂ ನಾಯಕಿ ಹಾಗೂ ರಾಜ್ಯದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರು,ಜಾತಿ,ಜನಾಂಗ ಮತ್ತು ಧರ್ಮದ ಹಂಗಿಲ್ಲದೆ ಎಲ್ಲರೂ ಓಣಂ ಆಚರಿಸುತ್ತಾರೆ. ಆರೆಸ್ಸೆಸ್ ಹಿಂದಿನ ಕಾಲದ ಮೇಲ್ಜಾತಿಗಳ ಯಾಜಮಾನ್ಯವನ್ನು ಮತ್ತೆ ಮರಳಿ ತರಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಇದು ‘ಹಬ್ಬವನ್ನು ಅಪಹರಿಸುವ’ ಆರೆಸ್ಸೆಸ್ ಸಂಚಿನ ಭಾಗವಾಗಿದೆ ಎಂದೂ ಅವರು ಕುಟುಕಿದ್ದಾರೆ.

ಬಲಿ ಚಕ್ರವರ್ತಿ ಪ್ರತಿ ವರ್ಷದ ಮಲಯಾಳಂ ತಿಂಗಳು ಚಿಂಗಮ್‌ನಲ್ಲಿ ತನ್ನ ಪ್ರಜೆಗಳನ್ನು ಭೇಟಿಯಾಗಲು ಭೂಮಿಗೆ ಮರಳುತ್ತಾನೆ ಎನ್ನುವುದು ಕೇರಳದಲ್ಲಿ ವ್ಯಾಪಕವಾದ ನಂಬಿಕೆಯಾಗಿದ್ದು, ಈ ದಿನವನ್ನು ‘ತಿರು ಓಣಂ’ಎಂದು ಆಚರಿಸಲಾಗುತ್ತದೆ. ಈ ವರ್ಷ ಸೆ.14ರಂದು ಓಣಂ ಆಚರಿಸಲಾಗುತ್ತದೆ.

‘ಓಣಂ’ ಅನ್ನು ಮೊದಲಿಗೆ ವಾಮನನ ಜನ್ಮದಿನವೆಂದು ಆಚರಿಸಲಾಗುತ್ತಿತ್ತೇ ಹೊರತು ದಾನವ ರಾಜ ತನ್ನ ರಾಜ್ಯಕ್ಕೆ ಮರಳುವ ಸಂಕೇತವೆಂದು ಅಲ್ಲ. ವಾಮನನ ಕುತಂತ್ರದಿಂದಾಗಿ ಬಲಿ ಚಕ್ರವರ್ತಿ ಪಾತಾಳ ಸೇರುವಂತಾಯಿತೆಂದು ಯಾವುದೇ ಪುರಾಣದಲ್ಲಿ ಹೇಳಲಾಗಿಲ್ಲ. ಹೀಗಿರುವಾಗ ಈ ಸುಳ್ಳುಕಥೆ ಕೇರಳದಲ್ಲಿ ಹಬ್ಬಿದ್ದಾದರೂ ಹೇಗೆ ಎಂದು ನಂಬೂದಿರಿ ತನ್ನ ಲೇಖನದಲ್ಲಿ ಪ್ರಶ್ನಿಸಿದ್ದಾರೆ.

ವಾಸ್ತವದಲ್ಲಿ ವಾಮನ ಬಲಿ ಚಕ್ರವರ್ತಿಯನ್ನು ಆಶೀರ್ವದಿಸಿದ್ದನೇ ಹೊರತು ಅವನನ್ನು ಪಾತಾಳಕ್ಕೆ ತಳ್ಳಿ ದಂಡಿಸಿರಲಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X