Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋವಿನ ಬಗ್ಗೆ ಸುಳ್ಳುಗಳಿಂದ ಹಿಂಸೆಗೆ...

ಗೋವಿನ ಬಗ್ಗೆ ಸುಳ್ಳುಗಳಿಂದ ಹಿಂಸೆಗೆ ಪ್ರಚೋದನೆ: ಜಿ.ರಾಜಶೇಖರ್

ವಾರ್ತಾಭಾರತಿವಾರ್ತಾಭಾರತಿ12 Sept 2016 12:17 AM IST
share
ಗೋವಿನ ಬಗ್ಗೆ ಸುಳ್ಳುಗಳಿಂದ ಹಿಂಸೆಗೆ ಪ್ರಚೋದನೆ: ಜಿ.ರಾಜಶೇಖರ್

ಉಡುಪಿ, ಸೆ.11: ಗೋಹತ್ಯೆ ಹಾಗೂ ಗೋಮೂತ್ರ ಔಷಧ ಎಂಬ ಕುರಿತ ಅರ್ಥಶಾಸ್ತ್ರದ ಬಗ್ಗೆ ಸಂಘ ಪರಿವಾರ ಹಸಿಹಸಿ ಸುಳ್ಳುಗಳನ್ನು ಹೇಳಿ ಹಿಂಸೆಯನ್ನು ಪ್ರಚೋದಿಸುತ್ತಿದೆ. ಈ ಮೂಲಕ ರಾಜಕೀಯ ಮಾಡಿ ಜನರನ್ನು ದಾರಿ ತಪ್ಪಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಹಿರಿಯ ಚಿಂತಕ ಜಿ. ರಾಜಶೇಖರ್ ಆರೋಪಿಸಿದ್ದಾರೆ.
ಉಡುಪಿ ರಥಬೀದಿ ಗೆಳೆಯರು ಹಾಗೂ ಕರ್ನಾಟಕ ಸಾಹಿತ್ಯ ಅಕಾಡಮಿ ಸಹಯೋಗದಲ್ಲಿ ರವಿವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ‘ಬಹುಮುಖಿ ಭಾರತ’ ವೈಚಾರಿಕ ಸಾಹಿತ್ಯ- ಚಿಂತನ -ಮಂಥನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ವರ್ಲ್ಡ್ ಟ್ರೇಡ್ ಸೆಂಟರ್‌ನಲ್ಲಿ ಮೃತಪಟ್ಟ 3,000 ಜೀವಗಳೇ ಅಮೂಲ್ಯ ಎಂಬುದಾಗಿ ಅಮೆರಿಕ ನಂಬಿದೆ. ಅಲ್ಲದೆ ಬೇರೆಯ ವರನ್ನು ಕೂಡ ನಂಬಿಸಿದೆ. ಆದರೆ ಅದಕ್ಕೆ ಪ್ರತಿಯಾಗಿ ನಡೆದ ದಾಳಿಯ ಪರಿಣಾಮ ಇರಾಕ್, ಅಫ್ಘಾನಿಸ್ತಾನದಲ್ಲಿ ಅಮೆರಿಕ ಬಲಿ ತೆಗೆದುಕೊಂಡ 30 ಲಕ್ಷ ನಾಗರಿಕರ ಜೀವಕ್ಕೆ ಬೆಲೆ ಇಲ್ಲವಾಗಿದೆ. ಇದೇ ರೀತಿಯ ಅಮೆರಿಕನ್ ವೌಲ್ಯಗಳು ಇಂದು ನಮ್ಮಲ್ಲಿಯೂ ಅಂತರ್ಗತವಾಗುತ್ತಿವೆ. ಹಿಂದೂಗಳ ಹೊರತು ಬೇರೆ ಧರ್ಮದವರ ಜೀವಕ್ಕೆ ಬೆಲೆ ಇಲ್ಲದಂತಾಗಿದೆಂದು ಅವರು ಖೇದ ವ್ಯಕ್ತಪಡಿಸಿದರು.
ಸಮಾರೋಪ ಭಾಷಣ ಮಾಡಿದ ಸಾಹಿತಿ ಕೆ.ಸತ್ಯನಾರಾಯಣ ಬೆಂಗಳೂರು, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಕಾರ್ಯಕ್ರಮದ ಫಲಾನುಭವಿಗಳು ಇಂದು ನರೇಂದ್ರ ಮೋದಿಯ ಹಿಂದೆ ಹೋಗುತ್ತಿದ್ದಾರೆ. ಆದರೆ ಇದೇ ಕಾರಣಕ್ಕೆ ಹಿಂದುಳಿದ ವರ್ಗದವರನ್ನು ನಾವು ಅನರ್ಥ ಮಾಡಿಕೊಳ್ಳುವುದು ಸರಿಯಲ್ಲ. ಇಂದಿರಾ ಗಾಂಧಿಯನ್ನೇ ಬದಲಾಯಿಸಿರುವ ಈ ಜನಕ್ಕೆ ನಾಳೆ ಮೋದಿ ಬೇಡವಾದರೆ ಅವರನ್ನು ಕೂಡ ಬದಲಾಯಿಸುತ್ತಾರೆ. ಆದ್ದರಿಂದ ಈ ಬಗ್ಗೆ ಆತಂಕ ಬೇಕಾ ಗಿಲ್ಲ. ಇದೆಲ್ಲ ಚಲನಶೀಲತೆಯ ಪರಿಕಲ್ಪನೆ ಎಂದರು.

ಮುಖ್ಯ ಅತಿಥಿಯಾಗಿ ನ.ರವಿಕುಮಾರ್ ಮಾತನಾಡಿ ದರು. ರಥಬೀದಿ ಗೆಳೆಯರು ಸಂಘಟನೆಯ ಅಧ್ಯಕ್ಷ ಮುರಳೀಧರ್ ಉಪಾಧ್ಯ, ಕಾರ್ಯದರ್ಶಿ ಸುಬ್ರಹ್ಮಣ್ಯ ಜೋಶಿ, ಉಪಾಧ್ಯಕ್ಷ ಸಂತೋಷ್ ಬಲ್ಲಾಳ್ ಉಪಸ್ಥಿತರಿದ್ದರು. ಉಪಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿ ದರು. ಪ್ರಭಾಕರ್ ತುಮರಿ ಕಾರ್ಯಕ್ರಮ ನಿರೂಪಿಸಿದರು.

 ರಾಜಕೀಯ ಕಾರಣಕ್ಕಾಗಿ ಪ್ರವೀಣ್ ಹತ್ಯೆ 
ಉಡುಪಿ ಜಿಲ್ಲೆಯಲ್ಲಿ ಎರಡು ತಿಂಗಳಲ್ಲಿ ನಡೆದ ಎರಡು ಕೊಲೆ ಪ್ರಕರಣಗಳಿಗೆ ಮಾಧ್ಯಮಗಳು ಭಿನ್ನ ರೀತಿಯ ಪ್ರಚಾರ ನೀಡಿದವು. ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಅವರ ಕುಟುಂಬಕ್ಕೆ ಮಾತ್ರ ಸೀಮಿತವಾಗಿದ್ದರೂ ಅದಕ್ಕೆ ಮಾಧ್ಯಮಗಳು ಔಚಿತ್ಯ ಮೀರಿದ ಪ್ರಚಾರ ನೀಡಿತು. ಆದರೆ ಅದರ ನಂತರ ನಡೆದ ಕೆಂಜೂರಿನ ಪ್ರವೀಣ್ ಪೂಜಾರಿ ಹತ್ಯೆ ರಾಜಕೀಯ ಕಾರಣಕ್ಕೆ ನಡೆದರೂ ಅಷ್ಟೊಂದು ಪ್ರಾಮುಖ್ಯತೆ ನೀಡಲಿಲ್ಲ ಎಂದು ಜಿ.ರಾಜಶೇಖರ್ ದೂರಿದರು.
ಪ್ರವೀಣ್ ಪೂಜಾರಿ ಹತ್ಯೆಯು ಆರೆಸ್ಸೆಸ್‌ನ ರಾಜಕೀಯ ಕಾರ್ಯಕ್ರಮದ ಅನುಷ್ಠಾನದ ಭಾಗವಾಗಿ ನಡೆದ ಕೃತ್ಯವಾ ಗಿದೆ. ಆದರೆ ಈ ಹತ್ಯೆಯನ್ನು ರಾಜಕೀಯ ಪಕ್ಷಗಳು ಬದಿಗೆ ಸರಿಯುವಂತೆ ಮಾಡಿವೆ. ಆದುದರಿಂದ ಈ ಕೊಲೆಯನ್ನು ಖಂಡಿಸಿ ಅದರ ಹಿಂದಿರುವ ರಾಜ ಕೀಯವನ್ನು ಮುನ್ನೆಲೆಗೆ ತರಬೇಕಾಗಿದೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X