Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಾವೂದ್ ಇಬ್ರಾಹೀಂಗೇ ಪಂಗನಾಮ!

ದಾವೂದ್ ಇಬ್ರಾಹೀಂಗೇ ಪಂಗನಾಮ!

ಕೋಟ್ಯಂತರ ರೂಪಾಯಿ ಜೊತೆ ನಾಪತ್ತೆಯಾದ ಬಂಟ

ವಾರ್ತಾಭಾರತಿವಾರ್ತಾಭಾರತಿ12 Sept 2016 8:26 AM IST
share
ದಾವೂದ್ ಇಬ್ರಾಹೀಂಗೇ ಪಂಗನಾಮ!

ಹೊಸದಿಲ್ಲಿ, ಸೆ.12: ಭೂಗತ ಪಾತಕಿ, ಜಾಗತಿಕ ಭಯೋತ್ಪಾದಕ, ಅಂತಾರಾಷ್ಟ್ರೀಯ ಮಾದಕವಸ್ತು- ಭಯೋತ್ಪಾದನೆ ಚಟುವಟಿಕೆ ಜಾಲದ ರೂವಾರಿ ಎಂಬ ಕುಖ್ಯಾತಿ ಹೊಂದಿರುವ ದಾವೂದ್ ಇಬ್ರಾಹೀಂಗೇ ಆತನ ಬಂಟ 40 ಕೋಟಿ ರೂಪಾಯಿ ವಂಚಿಸಿದ್ದಾನೆ!

ಖಲೀಕ್ ಅಹ್ಮದ್ ಎಂಬ ವ್ಯಕ್ತಿ ಹೊಸದಿಲ್ಲಿ ಮೂಲದ ಗಣ್ಯರೊಬ್ಬರಿಂದ 45 ಕೋಟಿ ರೂಪಾಯಿಯನ್ನು ಪಡೆದು, 40 ಕೋಟಿ ರೂಪಾಯಿಯನ್ನು ಹವಾಲಾ ಜಾಲದ ಮೂಲಕ ವಿದೇಶಕ್ಕೆ ರವಾನಿಸಬೇಕಿತ್ತು, ದಾವೂದ್‌ಗೆ ವರ್ಗಾಯಿಸಿದ ವೆಚ್ಚವಾಗಿ 5 ಕೋಟಿ ರೂಪಾಯಿಯನ್ನು ಇಟ್ಟುಕೊಳ್ಳುವುದು ಆತನ ಕಾರ್ಯತಂತ್ರವಾಗಿತ್ತು ಎಂದು ಗುಪ್ತಚರ ವಿಭಾಗದ ತನಿಖೆಯಿಂದ ಬಹಿರಂಗವಾಗಿದೆ.

ಇದೀಗ 40 ಕೋಟಿ ರೂಪಾಯಿ ಮಂಗಮಾಯವಾಗಿದ್ದು, ಖಲೀಕ್ ಕೂಡಾ ಹಣದೊಂದಿಗೆ ನಾಪತ್ತೆ. ಪಾಕಿಸ್ತಾನದಲ್ಲಿ ದಾವೂದ್ ಬಂಟನಾಗಿರುವ ಜಬೀರ್ ಮೋತಿ ಹಾಗೂ ಭಾರತ ಹಾಗೂ ಶಾರ್ಜಾದಲ್ಲಿ ವಾಸ್ತವ್ಯ ಹೊಂದಿರುವ ಖಲೀಕ್ ಅಹ್ಮದ್ ನಡುವಿನ ದೂರವಾಣಿ ಸಂಭಾಷಣೆಯ ಜಾಡು ಹಿಡಿದು ಭಾರತೀಯ ಗುಪ್ತಚರ ವಿಭಾಗದ ಅಧಿಕಾರಿಗಳು ಈ ಮಾಹಿತಿ ಕಲೆಹಾಕಿದ್ದಾರೆ. +9170852*22* ದೂರವಾಣಿ ಮೂಲಕ ಸಂಭಾಷಣೆ ನಡೆದಿದೆ ಎನ್ನಲಾಗಿದೆ.

ದಾವೂದ್ ಬಂಟ ರಝಾಕ್‌ಭಾಯ್ ಈ ವರ್ಗಾವಣೆಯ ಹಣ ದುರ್ಬಳಕೆಯಾಗಿರುವ ವಿಷಯವನ್ನು ಎತ್ತಿದ್ದಾಗಿ ಮೋತಿ, ಖಲೀಕ್‌ಗೆ ಹೇಳುತ್ತಿದ್ದ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ರಝಾಕ್ ಪ್ರಕಾರ, ಖಲೀಕ್, ದಾವೂದ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅವರ ಗೌರವಕ್ಕೆ ಧಕ್ಕೆ ತರುವ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ತನಿಖೆಗಾಗಿ ಡಿ ಕಂಪೆನಿ ಇಬ್ಬರು ಗೂರ್ಢಚರ್ಯರನ್ನು ದಿಲ್ಲಿಯಿಂದ ಕೆನಡಾಗೆ ಕಳುಹಿಸಿದೆ ಎನ್ನುವುದು ಅಧಿಕಾರಿಗಳ ಅಂದಾಜು. ಖಲೀಕ್ ಈಗ ಮಣಿಪುರದಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. 40 ಕೋಟಿಯ ಪೈಕಿ ಅರ್ಧವನ್ನು ಪನಾಮಾ ಬ್ಯಾಂಕ್‌ಗೆ ಕಳುಹಿಸಬೇಕಿತ್ತು ಹಾಗೂ ಉಳಿದ ಅರ್ಧವನ್ನು ದಾವೂದ್‌ನ ವಿದೇಶಿ ವ್ಯವಹಾರದಲ್ಲಿ ತೊಡಗಿಸಬೇಕಿತ್ತು ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X