Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನ ಈ ಗ್ರಾಮದ ಎಲ್ಲ 8,856 ...

ತಮಿಳುನಾಡಿನ ಈ ಗ್ರಾಮದ ಎಲ್ಲ 8,856 ಜನರು 'ದೇಶದ್ರೋಹಿಗಳು' ?

ವಾರ್ತಾಭಾರತಿವಾರ್ತಾಭಾರತಿ12 Sept 2016 3:40 PM IST
share
ತಮಿಳುನಾಡಿನ ಈ ಗ್ರಾಮದ ಎಲ್ಲ  8,856  ಜನರು ದೇಶದ್ರೋಹಿಗಳು ?

ಚೆನ್ನೈ : ಸರಕಾರವನ್ನು ಟೀಕಿಸಿದ ಮಾತ್ರಕ್ಕೆ ದೇಶದ್ರೋಹ ಪ್ರಕರಣವನ್ನು ದಾಖಲಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಸೆಪ್ಟೆಂಬರ್ 5 ರ ತೀರ್ಪಿನಲ್ಲಿ ಹೇಳಿರಬಹುದು. ಆದರೆ ತಮಿಳುನಾಡಿನ ಇಡಿಂಥಿಕರೈ ಎಂಬ ಗ್ರಾಮದ ಸುಮಾರು 10,000 ಕ್ಕೂ ಅಧಿಕ ಜನರು ಸೆಕ್ಷನ್ 124ಎ ಅನ್ವಯ ದೇಶದ್ರೋಹದ ಪ್ರಕರಣ ಎದುರಿಸುವ ಭಯದ ನೆರಳಿನಲ್ಲೇ ಬದುಕುತ್ತಿದ್ದಾರೆ. ಇದಕ್ಕೆ ಕಾರಣ ಅವರು ಕೂಡಂಕುಲಂ ಅಣು ವಿದ್ಯುತ್ ಸ್ಥಾವರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ.

ಸುಪ್ರೀಂ ಕೋರ್ಟಿನ ಸೆಪ್ಟೆಂಬರ್ 5 ರ ತೀರ್ಪು ಇದನ್ನು ಗೆದ್ದ ಇಡಿಂಥಕರೈ ಗ್ರಾಮದ ಎಸ್ ಪಿ ಉದಯಕುಮಾರ್ ಅವರ ಒಂದು ಪ್ರಕರಣವಿರಬಹುದು ಆದರೆ ಈ ಗ್ರಾಮದ 140 ಮಂದಿ ಇತರರ ವಿರುದ್ಧ ಇಂತಹುದೇ ಪ್ರಕರಣಗಳು ದಾಖಲಾಗಿವೆ.
ಉದಯ್ ಕುಮಾರ್ ಅವರ ನೇತೃತ್ವದಲ್ಲಿ ಇಡಿಂಥಕರೈ ಹಾಗೂ ನೆರೆಯ ಕೂಡಂಕುಲಂ ಗ್ರಾಮದಲ್ಲಿ 2011 ರಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಒಟ್ಟು 8,856 ಜನರ ವಿರುದ್ಧ 21 ದೇಶದ್ರೋಹ ಪ್ರಕರಣಗಳನ್ನು ದಾಖಲಿಸಲಾಗಿದೆ. ದೇಶದಲ್ಲಿ ಇಂತಹ ಗರಿಷ್ಠ ಪ್ರಕರಣಗಳನ್ನು ದಾಖಲಿಸಿದ ದೃಷ್ಟಾಂತ ಇದಾಗಿದೆ.
ಇಲ್ಲಿ ದಾಖಲಿಸಲಾದ ಒಟ್ಟು 380 ಎಫ್‌ಐಆರ್ ಗಳು(ಇವುಗಳಲ್ಲಿ 240 ಪ್ರಕರಣಗಳನ್ನು ಅಕ್ಟೊಂಬರ್ 2014 ರಲ್ಲಿ ಸುಪ್ರೀಂ ಕೋರ್ಟ್ ಆದೇಶದನ್ವಯ ಹಿಂದಕ್ಕೆ ಪಡೆಯಲಾಗಿದೆ), ಮೊದಲಾಗಿ ಉದಯ ಕುಮಾರ್ ಹೆಸರನ್ನು ಉಲ್ಲೇಖಿಸಿ ನಂತರ ಐದರಿಂದ 10 ಇತರ ಆರೋಪಿಗಳನ್ನು ಹೆಸರಿಸಿ ನಂತರ 200 ಅಥವಾ 3000 ಮಂದಿ ಇತರರು ಎಂದು ಹೇಳಿವೆ.

ಹೀಗೆ ಮಾಡಿರುವುದು ಕೇವಲ ಜನರನ್ನುಹೆದರಿಸಲು ಎಂದು ಹೆಸರು ಹೇಳಲಿಚ್ಛಿಸದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ.ಹೆಚ್ಚಿನ ಆರೋಪಿ ಗ್ರಾಮಸ್ಥರ ವಿರುದ್ಧ ಸೆಕ್ಷನ್ 121 ಅನ್ವಯ 21 ಇತರ ಪ್ರಕರಣಗಳನ್ನು ದಾಖಲಿಸಲಾಗಿದೆ ಹಾಗೂ ಸರಕಾರದ ವಿರುದ್ಧ ಯುದ್ಧ ಹೇರಿದಆರೋಪ ಹೊರಿಸಲಾಗಿದೆ.
ತಮ್ಮ ವಿರುದ್ಧದ ಪ್ರಕರಣ ಏನಾಯಿತೆಂದು ಹೆಚ್ಚಿನವರಿಗೆ ಗೊತ್ತಿಲ್ಲ. ಆದರೆ ಇಲ್ಲಿಯ ತನಕ ಯಾರ ವಿರುದ್ಧದ ದೇಶದ್ರೋಹ ಪ್ರಕರಣವನ್ನೂ ಕೈಬಿಡಲಾಗಿಲ್ಲ.

ಇಡಿಂಥಕರೈ ಗ್ರಾಮದ ಹೆಚ್ಚಿನ ಜನರು ಕ್ರೈಸ್ತರಾಗಿದ್ದುಇಲ್ಲಿನ ಹಿಂದೂ ಕುಟುಂಬಗಳ ಸಂಖ್ಯೆ ನೂರಕ್ಕೂ ಕಡಿಮೆ. ಕೂಡಂಕುಲಂ ಯೋಜನೆಯ ವಿರುದ್ಧದ ನಡೆಸುತ್ತಿರುವ ಪ್ರತಿಭಟನೆ ಇಲ್ಲಿ 1,850 ಕ್ಕೂ ಹೆಚ್ಚಿನ ದಿನಗಳನ್ನು ದಾಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X